ಬ್ರೇಕಿಂಗ್ ನ್ಯೂಸ್
26-04-23 01:27 pm Source: news18 ಕ್ರೀಡೆ
ಆರ್ಸಿಬಿ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಈ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಟಾಸ್ ಮತ್ತು 7:30ಕ್ಕೆ ಪಂದ್ಯ ಆರಂಭವಾಗಲಿದೆ. ಐಪಿಎಲ್ ಪಂದ್ಯವಳಿಯಲ್ಲಿ ಆರ್ಸಿಬಿ ಪಂದ್ಯಗಳಿಗೆ ಸಖತ್ ಕ್ರೇಜ್ ಇರುತ್ತದೆ. ಅದರಂತೆ, ಪಂದ್ಯವು ಬೆಂಗಳೂರಿನಲ್ಲಿ ನಡೆಯುತ್ತಿದ್ದರೆ ಅಭಿಮಾನಿಗಳ ಸಂತಸಕ್ಕೆ ಪಾರವೇ ಇರುವುದಿಲ್ಲ. ಅಭಿಮಾನಿಗಳ ಜೊತೆ ಕಳ್ಳರಿಗೂ ಇದು ಸುಗ್ಗಿ ಕಾಲವಾಗಿದೆ.


ಈಗಾಗಲೇ, ಆದಾಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಬಿ.ಆರ್ ರಮೇಶ್ ಅವರು ಏ.17ರಂದು ನಡೆದ ಚೆನ್ನೈ ಹಾಗೂ ಆರ್ಸಿಬಿ ಪಂದ್ಯ ವೀಕ್ಷಣೆಗೆ ಹೋಗುತ್ತಿದ್ದ ವೇಳೆ ಕಳ್ಳರು ಅವರ ಬಳಿ ಇದ್ದ 80 ಸಾವಿರ ಮೌಲ್ಯದ ಸ್ಯಾಮ್ಸಂಗ್ ಎಸ್-21 ಮೊಬೈಲ್ ಕಳ್ಳತನ ಮಾಡಿದ್ದಾರಂತೆ. ಇದಲ್ಲದೇ ವಿದ್ಯಾರ್ಥಿಯೊಬ್ಬರ 2.40 ಲಕ್ಷ ಬೆಲೆಯ KTM ಡ್ಯೂಕ್ ಬೈಕ್ ಸಹ ಕಳ್ಳತನವಾಗಿತ್ತು. ಈಗಾಗಲೇ ಪೊಲೀಸ್ ಠಾಣೆಯಲ್ಲಿ ಮೊಬೈಲ್ ಹಾಗೂ ಬೈಕ್ ಕಳ್ಳತನದ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.


ಇದಲ್ಲದೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರರು ಬಳಸುವ ಕ್ರಿಕೆಟ್ ಕಿಟ್ಗಳನ್ನು ಕಳ್ಳತನ ಮಾಡಿದ್ದ ಪ್ರಕರಣ ನಡೆದಿತ್ತು. ಡೆಲ್ಲಿ ತಂಡದ ಆಟಗಾರರ 17 ಲಕ್ಷ ರೂ. ಬೆಲೆ ಬಾಳುವ ಕ್ರಿಕೆಟ್ ಕಿಟ್ ಕಳ್ಳತನವಾಗಿತ್ತು. ಈ ರೀತಿಯ ಹಲವು ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ಈ ಸಂಬಂಧ ಪೊಲೀಸರು ನಾಗರೀಕರಲ್ಲಿ ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದಾರೆ.

ಅಭಿಮಾನಿಗಳು ಕ್ರಿಕೆಟ್ ಹಾಗೂ ತಮ್ಮ ಮೆಚ್ಚಿನ ಆಟಗಾರನನ್ನು ನೋಡುವ ಆತುರದಲ್ಲಿ ಇರುವುದರಿಂದ ಹಾಗೂ ಸರಿಸುಮಾರು 30 ಸಾವಿರಕ್ಕೂ ಹೆಚ್ಚು ಜನ ಒಮ್ಮೆಲೆ ಸೇರುವುದಿರಂದ ಕಳ್ಳರು ಸುಲಭವಾಗಿ ಕಳ್ಳತನ ಮಾಡುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದು, ಕ್ರಿಕೆಟ್ ನೋಡಲು ಹೋಗುವವರು ಕೊಂಚ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದ್ದಾರೆ. ಕಳೆದ ಪಂದ್ಯದಲ್ಲಿ ಕೋಲ್ಕತ್ತಾ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿ ಆಗಿದ್ದವು. ಆ ವೇಳೆ ಆರ್ಸಿಬಿ ತಂಡ ಸೋಲನ್ನಪ್ಪಿತು. ಹೀಗಾಗಿ ಆರ್ಸಿಬಿ ಇದೀಗ ಕೆಕೆಆರ್ ವಿರುದ್ಧ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ.
RCB ಸಂಭಾವ್ಯ ಪ್ಲೇಯಿಂಗ್ 11: ವಿರಾಟ್ ಕೊಹ್ಲಿ (ಸಿ), ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್ವೆಲ್, ಮಹಿಪಾಲ್ ಲೊಮ್ರೋರ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ಡೇವಿಡ್ ವಿಲ್ಲಿ, ವನಿಂದು ಹಸರಂಗ, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್.
rcb vs kkr number of theft cases in-during ipl matches at chinnaswamy stadium.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm