ಬ್ರೇಕಿಂಗ್ ನ್ಯೂಸ್
26-04-23 01:27 pm Source: news18 ಕ್ರೀಡೆ
ಆರ್ಸಿಬಿ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಈ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಟಾಸ್ ಮತ್ತು 7:30ಕ್ಕೆ ಪಂದ್ಯ ಆರಂಭವಾಗಲಿದೆ. ಐಪಿಎಲ್ ಪಂದ್ಯವಳಿಯಲ್ಲಿ ಆರ್ಸಿಬಿ ಪಂದ್ಯಗಳಿಗೆ ಸಖತ್ ಕ್ರೇಜ್ ಇರುತ್ತದೆ. ಅದರಂತೆ, ಪಂದ್ಯವು ಬೆಂಗಳೂರಿನಲ್ಲಿ ನಡೆಯುತ್ತಿದ್ದರೆ ಅಭಿಮಾನಿಗಳ ಸಂತಸಕ್ಕೆ ಪಾರವೇ ಇರುವುದಿಲ್ಲ. ಅಭಿಮಾನಿಗಳ ಜೊತೆ ಕಳ್ಳರಿಗೂ ಇದು ಸುಗ್ಗಿ ಕಾಲವಾಗಿದೆ.


ಈಗಾಗಲೇ, ಆದಾಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಬಿ.ಆರ್ ರಮೇಶ್ ಅವರು ಏ.17ರಂದು ನಡೆದ ಚೆನ್ನೈ ಹಾಗೂ ಆರ್ಸಿಬಿ ಪಂದ್ಯ ವೀಕ್ಷಣೆಗೆ ಹೋಗುತ್ತಿದ್ದ ವೇಳೆ ಕಳ್ಳರು ಅವರ ಬಳಿ ಇದ್ದ 80 ಸಾವಿರ ಮೌಲ್ಯದ ಸ್ಯಾಮ್ಸಂಗ್ ಎಸ್-21 ಮೊಬೈಲ್ ಕಳ್ಳತನ ಮಾಡಿದ್ದಾರಂತೆ. ಇದಲ್ಲದೇ ವಿದ್ಯಾರ್ಥಿಯೊಬ್ಬರ 2.40 ಲಕ್ಷ ಬೆಲೆಯ KTM ಡ್ಯೂಕ್ ಬೈಕ್ ಸಹ ಕಳ್ಳತನವಾಗಿತ್ತು. ಈಗಾಗಲೇ ಪೊಲೀಸ್ ಠಾಣೆಯಲ್ಲಿ ಮೊಬೈಲ್ ಹಾಗೂ ಬೈಕ್ ಕಳ್ಳತನದ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.


ಇದಲ್ಲದೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರರು ಬಳಸುವ ಕ್ರಿಕೆಟ್ ಕಿಟ್ಗಳನ್ನು ಕಳ್ಳತನ ಮಾಡಿದ್ದ ಪ್ರಕರಣ ನಡೆದಿತ್ತು. ಡೆಲ್ಲಿ ತಂಡದ ಆಟಗಾರರ 17 ಲಕ್ಷ ರೂ. ಬೆಲೆ ಬಾಳುವ ಕ್ರಿಕೆಟ್ ಕಿಟ್ ಕಳ್ಳತನವಾಗಿತ್ತು. ಈ ರೀತಿಯ ಹಲವು ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ಈ ಸಂಬಂಧ ಪೊಲೀಸರು ನಾಗರೀಕರಲ್ಲಿ ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದಾರೆ.

ಅಭಿಮಾನಿಗಳು ಕ್ರಿಕೆಟ್ ಹಾಗೂ ತಮ್ಮ ಮೆಚ್ಚಿನ ಆಟಗಾರನನ್ನು ನೋಡುವ ಆತುರದಲ್ಲಿ ಇರುವುದರಿಂದ ಹಾಗೂ ಸರಿಸುಮಾರು 30 ಸಾವಿರಕ್ಕೂ ಹೆಚ್ಚು ಜನ ಒಮ್ಮೆಲೆ ಸೇರುವುದಿರಂದ ಕಳ್ಳರು ಸುಲಭವಾಗಿ ಕಳ್ಳತನ ಮಾಡುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದು, ಕ್ರಿಕೆಟ್ ನೋಡಲು ಹೋಗುವವರು ಕೊಂಚ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದ್ದಾರೆ. ಕಳೆದ ಪಂದ್ಯದಲ್ಲಿ ಕೋಲ್ಕತ್ತಾ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿ ಆಗಿದ್ದವು. ಆ ವೇಳೆ ಆರ್ಸಿಬಿ ತಂಡ ಸೋಲನ್ನಪ್ಪಿತು. ಹೀಗಾಗಿ ಆರ್ಸಿಬಿ ಇದೀಗ ಕೆಕೆಆರ್ ವಿರುದ್ಧ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ.
RCB ಸಂಭಾವ್ಯ ಪ್ಲೇಯಿಂಗ್ 11: ವಿರಾಟ್ ಕೊಹ್ಲಿ (ಸಿ), ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್ವೆಲ್, ಮಹಿಪಾಲ್ ಲೊಮ್ರೋರ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ಡೇವಿಡ್ ವಿಲ್ಲಿ, ವನಿಂದು ಹಸರಂಗ, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್.
rcb vs kkr number of theft cases in-during ipl matches at chinnaswamy stadium.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm