ಬ್ರೇಕಿಂಗ್ ನ್ಯೂಸ್
03-05-23 01:14 pm Source: news18 ಕ್ರೀಡೆ
ಈ ವಾರದ ಸೋಮವಾರದಂದು ನಡೆದ ಕಡಿಮೆ ಸ್ಕೋರಿಂಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವನ್ನು ಸೋಲಿಸಿತು. ಆದರೆ ಈ ಪಂದ್ಯದಲ್ಲಿ ಆರ್ಸಿಬಿ ತಂಡದ ಗೆಲುವಿಗಿಂತ ಹೆಚ್ಚು ಸುದ್ದಿಯಾಗಿರುವುದು ವಿರಾಟ್ ಕೊಹ್ಲಿ ಮತ್ತು ಎಲ್ಎಸ್ಜಿ ತಂಡದ ಬೌಲರ್ ನವೀನ್-ಉಲ್-ಹಕ್ ಮತ್ತು ತಂಡದ ಮೆಂಟರ್ ಆದ ಗೌತಮ್ ಗಂಭೀರ್ ನಡುವಿನ ವಾಗ್ವಾದ ಮತ್ತು ಜಗಳ.
ವಿರಾಟ್ ಮತ್ತು ಗೌತಮ್ ನಡುವೆ ಮತ್ತೆ ಜಗಳ
ಈ ಇಬ್ಬರು ಆಟಗಾರರ ಮಧ್ಯೆ ನಡೆಯುತ್ತಿರುವ ವಾಗ್ವಾದ ಮತ್ತು ಜಗಳ ನಿನ್ನೆ ಮೊನ್ನೆಯದಲ್ಲ, ಸುಮಾರು 10 ವರ್ಷಗಳು ಹಳೆಯದು. ಹೌದು.. ಗೌತಮ್ ಗಂಭೀರ್ 10 ವರ್ಷಗಳ ಹಿಂದೆ ಕೋಲ್ಕತಾ ನೈಟ್ ರೈಡರ್ಸ್ ತಂಡದ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದಾಗ ಆದ ಜಗಳವನ್ನು ಮತ್ತೆ ನಿನ್ನೆಯ ಪಂದ್ಯ ನೆನಪಿಸಿತು ನೋಡಿ.
ಲಕ್ನೋ ಸೂಪರ್ ಜೈಂಟ್ಸ್ ತಂಡದ ಬೌಲರ್ ನವೀನ್-ಉಲ್-ಹಕ್ ಮತ್ತು ಕೊಹ್ಲಿ ನಡುವೆ ಲಕ್ನೋ ತಂಡದ ಬ್ಯಾಟಿಂಗ್ ನ 17ನೇ ಓವರ್ ನಲ್ಲಿ ಮಾತಿನ ಚಕಮಕಿ ನಡೆದು, ದೊಡ್ಡ ಜಗಳಕ್ಕೆ ಬದಲಾಗುವ ಮುಂಚೆ ಅಲ್ಲಿಯೇ ಕ್ರೀಸ್ ನಲ್ಲಿದ್ದ ಅಮಿತ್ ಮಿಶ್ರಾ ಮತ್ತು ಅಂಪೈರ್ ಗಳು ವಿರಾಟ್ ಅವರನ್ನು ಸಮಾಧಾನ ಮಾಡಿದರು.

ನಂತರ ಪಂದ್ಯ ಮುಗಿದಾಗ ವಿರಾಟ್ ಮತ್ತು ನವೀನ್ ಮಧ್ಯೆ ಮತ್ತೆ ಮಾತಿನ ಚಕಮಕಿ ಶುರುವಾಯ್ತು. ಈ ಹಂತದಲ್ಲಿ ಗೌತಮ್ ಗಂಭೀರ್ ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದರು, ಆದರೆ ಶೀಘ್ರದಲ್ಲಿಯೇ ಅದು ಕೊಹ್ಲಿ ಮತ್ತು ಗಂಭೀರ್ ನಡುವಿನ ಜಗಳವಾಗಿ ಬದಲಾಯಿತು.
ನಂತರ ಲಕ್ನೋ ತಂಡದ ಆಟಗಾರರು ಗಂಭೀರ್ ಅವರನ್ನು ದೂರ ಎಳೆಯಲು ಪ್ರಯತ್ನಿಸಿದರು. ಆದರೆ ಭಾರತದ ಇಬ್ಬರು ಆಟಗಾರರು ಪರಸ್ಪರ ವಾಗ್ವಾದಕ್ಕೆ ಇಳಿದಾಗ ಕೊಹ್ಲಿ ಕೆಲವು ಶಾಂತ ಮಾತುಗಳಿಂದ ಜಗಳವನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿರುವಂತೆ ತೋರಿತು. ಆದರೆ ಅದು ಗಂಭೀರ್ ಅವರನ್ನು ಸಮಾಧಾನಪಡಿಸಲು ವಿಫಲವಾಯಿತು. ಆಗ ಎಲ್ಎಸ್ಜಿ ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರು.
ಅಭಿಮಾನಿಗಳತ್ತ ಕೈ ಮಾಡಿ ಏನಂದ್ರು ನೋಡಿ ವಿರಾಟ್ ಕೊಹ್ಲಿ
ಆರ್ಸಿಬಿ ತಂಡವು ಗಳಿಸಿದ 126 ರನ್ ಗಳನ್ನು ಗಳಿಸುವಲ್ಲಿ ಇನ್ನೂ 18 ರನ್ ಗಳು ಬಾಕಿ ಇರುವಾಗ ಬ್ಯಾಟರ್ ಕೃನಾಲ್ ಪಾಂಡ್ಯ ಜೋರಾಗಿ ಹೊಡೆದ ಬಾಲ್ ನೇರವಾಗಿ ವಿರಾಟ್ ಕೊಹ್ಲಿ ಅವರ ಕೈಗೆ ಸೇರಿತು. ಕ್ಯಾಚ್ ಹಿಡಿದ ಕೊಹ್ಲಿ ಪ್ರೇಕ್ಷಕರ ಕಡೆಗೆ ತಿರುಗಿ 'ಮೌನ' ವಾಗಿರುವ ಸನ್ನೆ ಮಾಡಿದರು.
ಈ ಋತುವಿನ ಆರಂಭದಲ್ಲಿ ಉಭಯ ತಂಡಗಳ ನಡುವಿನ ಹಿಂದಿನ ಪಂದ್ಯದಲ್ಲಿ, ಬೆಂಗಳೂರಿನಲ್ಲಿ ನಡೆದ ಪಂದ್ಯದ ಕೊನೆಯ ಎಸೆತದಲ್ಲಿ ಎಲ್ಎಸ್ಜಿ ತಂಡ ರೋಮಾಂಚಕ ಸ್ಪರ್ಧೆಯಲ್ಲಿ ಗೆದ್ದಿತು ಎಂಬುದನ್ನು ಮರೆಯಬಾರದು. ಪಂದ್ಯದ ನಂತರ, ಗಂಭೀರ್ ಪ್ರೇಕ್ಷಕರ ಕಡೆಗೆ ತಿರುಗಿ ಸ್ವಲ್ಪ ಮೌನವಾಗಿರಲು ಸನ್ನೆ ಮಾಡಿದ್ದರು, ಇದು
rcb team won against lucknow team what is the virat naveen and gambhir fight.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm