ಬ್ರೇಕಿಂಗ್ ನ್ಯೂಸ್
09-05-23 02:46 pm Source: news18 ಕ್ರೀಡೆ
ಇಂದು ಸಂಜೆ ಆರ್ಸಿಬಿ ಮತ್ತು ಮುಂಬೈ ವಿರುದ್ಧ ಐಪಿಎಲ್ 2023ರ ಮಹತ್ವದ ಪಂದ್ಯ ನಡೆಯಲಿದೆ. ಈ ಪಂದ್ಯ ಉಭಯ ತಂಡಗಳಿಗೆ ಅತ್ಯಂತ ಮಹತ್ವದ್ದಾಗಿದ್ದು, ಪ್ಲೇಆಫ್ ರೇಸ್ನಲ್ಲಿ ಉಳಿಯಲು ತಂಡ ಗೆಲ್ಲಲೇಬೇಕಿದೆ. ಇದರ ನಡುವೆ ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಬೌಲಿಂಗ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮುಂಬೈ ಇದುವರೆಗೆ ಆಡಿರುವ 10 ಪಂದ್ಯಗಳಲ್ಲಿ 4 ಬಾರಿ 200ಕ್ಕೂ ಹೆಚ್ಚು ರನ್ ಗಳಿಸಿದೆ. ಆದರೆ ಬೌಲಿಂಗ್ ವಿಭಾಗ ಸಾಕಷ್ಟು ವೀಕ್ ಆಗಿದೆ.
ಜೋಫ್ರಾ ಆರ್ಚರ್ ಗಾಯಗೊಂಡು ಮನೆಗೆ ವಾಪಸ್ಸಾಗಿದ್ದಾರೆ. ಇದನ್ನು ಮುಂಬೈ ಇಂಡಿಯನ್ಸ್ ಅಧಿಕೃತವಾಗಿ ಪ್ರಕಟಿಸಿದೆ. ಜೋಫ್ರಾ ಬದಲಿಗೆ ಮುಂಬೈ ಮತ್ತೊಬ್ಬ ಇಂಗ್ಲಿಷ್ ಬೌಲರ್ ಕ್ರಿಸ್ ಜೋರ್ಡಾನ್ ಅವರನ್ನು ಆಯ್ಕೆ ಮಾಡಿದೆ. ಈಗಾಗಲೇ ಜೋರ್ಡನ್ ಮುಂಬೈ ಇಂಡಿಯನ್ಸ್ ಪಾಳಯ ಸೇರಿದ್ದಾರೆ ಎಂದು ವರದಿಯಾಗಿದೆ. ಆದರೆ ಇಂದು ನಡೆಯಲಿರುವ ಬೆಂಗಳೂರು ವಿರುದ್ಧದ ಪಂದ್ಯಕ್ಕೆ ಅವರು ಲಭ್ಯರಾಗುತ್ತಾರೆಯೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ ಬೌಲಿಂಗ್ ಲೈನ್ಅಪ್ನಿಂದ ಮುಂಬೈ ಸಂಕಷ್ಟಕ್ಕೆ ಸಿಲುಕಿದೆ.


ಅದರಲ್ಲೂ ಸ್ಥಳೀಯ ಬೌಲರ್ಗಳು ದಯನೀಯವಾಗಿ ವಿಫಲರಾಗುತ್ತಿದ್ದಾರೆ. ಮತ್ತೊಂದೆಡೆ, ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್ಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಅವರು ವೇಗದ ಬೌಲಿಂಗ್ನಲ್ಲಿ ಉತ್ತಮ ಸ್ಪೆಲ್ ಮಾಡುತ್ತಿದ್ದಾರೆ . ಮತ್ತೊಂದೆಡೆ, ರೋಹಿತ್ ಈ ಋತುವಿನಲ್ಲಿ ತಮ್ಮ ಕಳಪೆ ಫಾರ್ಮ್ನಿಂದ ಕೂಡಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಸೂರ್ಯಕುಮಾರ್ ಯಾದವ್, ಕ್ಯಾಮರೂನ್ ಗ್ರೀನ್, ಸ್ಟಬ್ಸ್, ನೆಹಾಲ್ ವಧೇರಾ, ಟಿಮ್ ಡೇವಿಡ್ ಮೊದಲಾದವರ ಜೊತೆ ಮುಂಬೈ ಬ್ಯಾಟಿಂಗ್ ಬಲಿಷ್ಠವಾಗಿದೆ. ಆದರೆ ಸ್ಥಿರತೆ ತಂಡಕ್ಕೆ ಸಮಸ್ಯೆಯಾಗಿದೆ.



ಆದರೆ ಇದರ ನಡುವೆ ಆರ್ಸಿಬಿ ಸ್ಟಾರ್ ಬೌಲರ್ ತಂಡದಿಂದ ಹೊರನಡೆದಿರುವುದು ಇದೀಗ ಆರ್ಸಿಬಿ ತಂಡಕ್ಕೆ ದೊಡ್ಡ ಅನುಕೂಲವಾಗಿದೆ. ಆರ್ಚರ್ ಬೌಲಿಂಗ್ ಹಾಗೂ ಕೆಲ ಸಮಯದಲ್ಲಿ ಬ್ಯಾಟಿಂಗ್ನಲ್ಲಿಯೂ ಅಬ್ಬರಿಸುತ್ತಿದ್ದರು. ಆದರೆ ಇದೀಗ ಅವರು ಟೂರ್ನಿಯಿಂದ ಹೊರನಡೆದಿರುವುದು ಆರ್ಸಿಬಿಗೆ ಒಳ್ಳೆಯ ಸುದ್ದಿಯಾಗಿದೆ.
ipl 2023 jofra archer ruled out of tournament with injury and chris jordan named replacement.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm