ಬ್ರೇಕಿಂಗ್ ನ್ಯೂಸ್
11-05-23 03:20 pm Source: news18 ಕ್ರೀಡೆ
2011ರ ವಿಶ್ವಕಪ್ ಗೆಲ್ಲುವಲ್ಲಿ ಯುವರಾಜ್ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದರು. ಅವರಿಗೆ ಇದ್ದಕ್ಕಿದ್ದಂತೆ 'ಮೆಡಿಯಾಸ್ಟೈನಲ್ ಸೆಮಿನೋಮಾ' ಎಂಬ ಅಪರೂಪದ ಕ್ಯಾನ್ಸರ್ ಕಾಣಿಸಿಕೊಂಡಿತ್ತು. ಯುವರಾಜ್ ಸಿಂಗ್ ಕ್ಯಾನ್ಸರ್ ಅನ್ನು ಸೋಲಿಸಿದ ನಂತರ ಕ್ರಿಕೆಟ್ಗೆ ಮರಳಿದ್ದರು. ಇದೀಗ ಯುವರಾಜ್ ಸಿಂಗ್ ಅವರಂತೆಯೇ ಮತ್ತೊಬ್ಬ ಆಟಗಾರನಿಗೆ ಕ್ಯಾನ್ಸರ್ ಉಂಟಾಗಿದೆ. ಈ ಆಟಗಾರ ಇತ್ತೀಚೆಗೆ ತಮ್ಮ ಅನಾರೋಗ್ಯದ ಬಗ್ಗೆ ತಿಳಿಸಿದ್ದಾರೆ. ಸದ್ಯ ಈ ಆಟಗಾರನಿಗೆ ಕೇವಲ 31 ವರ್ಷ. ಇಂಗ್ಲೆಂಡ್ನ ವಿಕೆಟ್ಕೀಪರ್-ಬ್ಯಾಟರ್ ಸ್ಯಾಮ್ ಬಿಲ್ಲಿಂಗ್ಸ್ ಅವರು ಚರ್ಮದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದಾರೆ.
ಈ ವಿಚಾರವನ್ನು ಸ್ವತಃ ಅವರೇ ಬಹಿರಂಗಪಡಿಸಿದ್ದಾರೆ. ದೀರ್ಘಾವಧಿಯ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದರಿಂದ ಉಂಟಾಗುವ ಅಪಾಯಗಳ ಬಗ್ಗೆ ತನ್ನ ತಂಡದ ಸಹ ಆಟಗಾರರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಕಳೆದ ವರ್ಷ 2 ಬಾರಿ ಎದೆಯ ಭಾಗದ ಚರ್ಮದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾಗಿ ಹೇಳಿಕೊಂಡಿದ್ದಾರೆ. ಈ ವೇಳೆ ಬಿಸಿಲಿನಲ್ಲಿ ತುಂಬಾ ಸಮಯ ಕಳೆಯುವುದು ಅಪಾಯಕಾರಿ. ನನ್ನ ಸ್ಥಿತಿ ನೋಡಿಯಾದರೂ ಇದನ್ನು ಅರ್ಥ ಮಾಡಿಕೊಳ್ಳಿ ಎಂದು ಅವರು ಸಹ ಆಟಗಾರರಲ್ಲಿ ವಿನಂತಿಸಿದ್ದಾರೆ.
ಇನ್ನು, ನಾನು ಇದನ್ನು ಮೊದಲಿಗೆ ಚರ್ಮದ ಮೇಲಿನ ಕಲೆಗಳು ಎಂದುಕೊಂಡಿದ್ದೆ. ಅದು 0.6 ಮಿಲಿಮೀಟರ್ನಷ್ಟು ಆಳವಾಗಿತ್ತು. ಅದು 0.7 ಮಿಲಿಮೀಟರ್ ಆಳಕ್ಕೆ ಇಳಿದಾಗ ಇದರ ಬಗ್ಗೆ ನಾನು ವೈದ್ಯರ ಬಳಿ ಹೋದಾಗ ಚರ್ಮದ ಕ್ಯಾನ್ಸರ್ ಇದೆ ಎಂದು ತಿಳಿಯಿತು ಎಂದಿದ್ದಾರೆ. ಬಿಲ್ಲಿಂಗ್ಸ್ ಇಂಗ್ಲೆಂಡ್ ಪರ 3 ಟೆಸ್ಟ್, 28 ODI ಮತ್ತು 37 T20 ಪಂದ್ಯಗಳನ್ನು ಆಡಿದ್ದಾರೆ. ಪ್ರಸ್ತುತ ಅವರು ಕೌಂಟಿ ಕ್ರಿಕೆಟ್ ಆಡುತ್ತಿದ್ದಾರೆ. ಬಿಸಿಲಿನಲ್ಲಿ ಹೆಚ್ಚು ಸಮಯ ಕಳೆಯುವ ಅಪಾಯದ ಬಗ್ಗೆ ಅವರು ಸಹ ಆಟಗಾರರು ಮತ್ತು ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ನಾನು ವೃತ್ತಿಪರ ಪಂದ್ಯಗಳ ಬಗ್ಗೆ ಮಾತನಾಡುತ್ತಿಲ್ಲ. ಕ್ಲಬ್ ಕ್ರಿಕೆಟಿಗರು ಮತ್ತು ಪ್ರೇಕ್ಷಕರು ಕೂಡ ಇದರಿಂದ ಎಚ್ಚರವಾಗಿರಬೇಕು. 18 ಡಿಗ್ರಿಗಳಲ್ಲಿಯೂ ಸಹ ನೀವು ಬಿಸಿಲಿನಿಂದ ತೊಂದರೆಗೆ ಒಳಗಾಗಬಹುದು ಎಂದು ಹೇಳಿದ್ದಾರೆ. ಸದ್ಯ ಈ ವಿಚಾರ ತಿಳಿದ ಅವರ ಅಭಿಮಾನಿಗಳು ಬೇಗ ಗುಣಮುಖರಾಗಿ ಬನ್ನಿ ಎಂದು ಪ್ರಾರ್ಥಿಸುತ್ತಿದ್ದಾರೆ. ಅಲ್ಲದೇ ಅನೇಕ ಕ್ರಿಕೆಟಿಗರು ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾಗಿ ತಿಳಿದುಬಂದಿದೆ.
england star cricketer sam billings cancer affected like to yuvraj singh.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm