ಬ್ರೇಕಿಂಗ್ ನ್ಯೂಸ್
16-05-23 12:00 pm Source: news18 ಕ್ರೀಡೆ
ಸದ್ಯ ಐಪಿಎಲ್ ತನ್ನ ಕೊನೆಯ ಹಂತಕ್ಕೆ ಬಂದು ತಲುಪುತ್ತಿದೆ. ಬರೋಬ್ಬರಿ 2 ತಿಂಗಳ ಕ್ರಿಕೆಟ್ ಹಬ್ಬಕ್ಕೆ ಇನ್ನೇನು ಕೆಲ ದಿನಗಳಲ್ಲಿಯೇ ತೆರೆ ಬೀಳಲಿದೆ. ಆದರೆ ಈ ಬಾರಿ ಐಪಿಎಲ್ನ ಪ್ಲೇಆಪ್ ಬಗ್ಗೆ ಈವರೆಗೂ ಸ್ಪಷ್ಟತೆ ಇಲ್ಲವಾಗಿದೆ. ಹೌದು, ಪ್ಲೇಆಫ್ನಲ್ಲಿ ಸರಿಯಾದ ಸ್ಪಷ್ಟತೆ ಇಲ್ಲವಾದ ಕಾರಣ ಪ್ರತಿ ತಂಡಗಳಿಗೂ ಪ್ಲೇಆಫ್ ಹಂತಕ್ಕೇರುವ ಸಾಧ್ಯತೆಗಳಿವೆ. ಇದರ ನಡುವೆ ಇದೀಗ ಹೊಸ ಸುದ್ದಿ ಚರ್ಚೆಯಾಗುತ್ತಿದ್ದು, ಆರ್ಸಿಬಿ ಮತ್ತು ಲಕ್ನೋ ಮುಖಾಮುಖಿ ಕುರಿತು.
ಈ ಬಾರಿ ಐಪಿಎಲ್ನಲ್ಲಿ ಯಾವುದು ಬೆಸ್ಟ್ ಮ್ಯಾಚ್ ಎಂದು ಕೇಳಿದರೆ ಪ್ರತಿಯೊಬ್ಬರೂ ಹೇಳುವ ಏಕೈಕ ಉತ್ತರವೆಂದರೆ ಅದು ಆರ್ಸಿಬಿ ಮತ್ತು ಲಕ್ನೋ ನಡುವಿನ ಹಣಾಹಣಿ ಎಂದು. ಹೌದು, ಈ ಪಂದ್ಯದಲ್ಲಿ ಆಟಕ್ಕಿಂತ ಹೆಚ್ಚು ಹೈಲೇಟ್ ಆಗಿದ್ದು, ಕೊಹ್ಲಿ ಮತ್ತು ಗಂಭೀರ್ ನಡುವಿನ ಜಗಳ. ಈವರೆಗೂ ಆರ್ಸಿಬಿ ಆಗಲಿ ಅಥವಾ ಲಕ್ನೋ ತಂಡವಾಗಲಿ ಪ್ಲೇಆಫ್ ಹಂತಕ್ಕೆ ಅಧಿಕೃತವಾಗಿ ಲಗ್ಗೆ ಇಟ್ಟಿಲ್ಲ. ಆದರೆ ಉಭಯ ತಂಡಗಳ ಅಭಿಮಾನಿಗಳು ಮತ್ತೆ ಯಾವಾಗ ಆರ್ಸಿಬಿ ಮತ್ತು ಲಕ್ನೋ ತಂಡಗಳು ಮುಖಾಮುಖಿ ಆಗಲಿದೆ ಎಂದು ಕಾತುರರಾಗಿದ್ದಾರೆ.
ಒಮ್ಮೆ ಏನಾದರೂ ಈ ರೀತಿ ಆದ್ದಲ್ಲಿ ಮತ್ತೊಮ್ಮೆ ಆರ್ಸಿಬಿ ಮತ್ತು ಲಕ್ನೋ ತಂಡಗಳು ಈ ವರ್ಷವೇ ಮುಖಾಮುಖಿ ಆಗಲಿದೆ. ಆದರೆ ಈ ಬಿಗ್ ಫೈಟ್ ನಡೆಯಬೇಕಾದರೆ ಈ ರೀತಿ ಮ್ಯಾಜಿಕ್ ನಡೆಯಬೇಕಿದೆ. ಐಪಿಎಲ್ 2023 ಅಂಕಪಟ್ಟಿಯಲ್ಲಿ 13 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದೆ. ಲಕ್ನೋ ತಂಡಕ್ಕೆ ಇನ್ನು ಲೀಗ್ ಹಂತದಲ್ಲಿ 2 ಪಂದ್ಯಗಳು ಬಾಕಿ ಉಳಿದಿದೆ. ಈ ಎರಡೂ ಪಂದ್ಯ ಗೆದ್ದರೆ ಲಕ್ನೋ 17 ಅಂಕದ ಮೂಲಕ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ.
ಆದರೆ ಮುಂಬೈ ಮುಂದಿನ 2 ಪಂದ್ಯದಲ್ಲಿ ಒಂದರಲ್ಲಿ ಸೋತು ಒಂದರಲ್ಲಿ ಗೆದ್ದರೆ 16 ಅಂಕ ಪಡೆಯಲಿದೆ. ಇತ್ತ ಆರ್ಸಿಬಿ ಸಹ ಮುಂದಿನ 2 ಪಂದ್ಯವನ್ನು ಭರ್ಜರಿಯಾಗಿ ಗೆದ್ದರೆ ಉತ್ತಮ ರನ್ರೇಟ್ ಮೂಲಕ ಪ್ಲೇಆಫ್ ಪ್ರವೇಶಿಸಲಿದೆ. ಆಗ ಲಕ್ನೋ ಸಹ 3ನೇ ಸ್ಥಾನ ಹಾಗೂ ಆರ್ಸಿಬಿ 4ನೇ ಸ್ಥಾನದಲ್ಲಿರಲಿದೆ. ಆಗ ಅಗ್ರ ಸ್ಥಾನದಲ್ಲಿರುವ 2 ತಂಡಗಳು ಕ್ವಾಲಿಫೈಯರ್ ಪಂದ್ಯವಾಡಲಿದೆ. ಹಾಗೆಯೇ 3 ಮತ್ತು 4ನೇ ಸ್ಥಾನದಲ್ಲಿರುವ ತಂಡಗಳು ಎಲಿಮಿನೇಟರ್ ಪಂದ್ಯವನ್ನಾಡಲಿದೆ.
ಆಗ ಲಕ್ನೋ ಮತ್ತು ಆರ್ಸಿಬಿ 3 ಮತ್ತು 4ನೇ ಸ್ಥಾನದಲ್ಲಿದ್ದರೆ ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿ ಆಗಲಿದೆ. ಒಮ್ಮೆ ಇದೇನಾದರೂ ಆಗದಿದ್ದರೆ, ಲಕ್ನೋ 2ನೇ ಸ್ಥಾನಕ್ಕೇರಿದರೆ ಆಗ ಅಲ್ಲಿನ ಪಂದ್ಯದಲ್ಲಿ ಲಕ್ನೋ ಸೋತು, ಎಲಿಮಿನೇಟರ್ನಲ್ಲಿ ಆರ್ಸಿಬಿ ಗೆದ್ದರೆ 2ನೇ ಕ್ವಾಲಿಫೈಯರ್ನಲ್ಲಿ ಮುಖಾಮುಖಿಯಾಗಲಿದೆ. ಇವೆಲ್ಲದರ ನಡುವೆ ದೊಡ್ಡ ಸುದ್ದಿಯೆಂದರೆ ಇಬ್ಬರೂ ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ನಲ್ಲಿ ಗೆದ್ದರೆ ಲಕ್ನೋ ಮತ್ತು ಆರ್ಸಿಬಿ ಫೈನಲ್ನಲ್ಲಿ ಸೆಣಸಾಡಲಿದೆ. ಆದರೆ ಈ ಎಲ್ಲವೂ ನಡೆಯಬೇಕಾದರೆ ಉಭಯ ತಂಡಗಳು ಮೊದಲು ಪ್ಲೇಆಫ್ ಪ್ರವೇಶಿಸಬೇಕಿದೆ.
rcb vs lsg will meet again in ipl 2023 playoffs.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm