ಬ್ರೇಕಿಂಗ್ ನ್ಯೂಸ್
16-05-23 12:00 pm Source: news18 ಕ್ರೀಡೆ
ಸದ್ಯ ಐಪಿಎಲ್ ತನ್ನ ಕೊನೆಯ ಹಂತಕ್ಕೆ ಬಂದು ತಲುಪುತ್ತಿದೆ. ಬರೋಬ್ಬರಿ 2 ತಿಂಗಳ ಕ್ರಿಕೆಟ್ ಹಬ್ಬಕ್ಕೆ ಇನ್ನೇನು ಕೆಲ ದಿನಗಳಲ್ಲಿಯೇ ತೆರೆ ಬೀಳಲಿದೆ. ಆದರೆ ಈ ಬಾರಿ ಐಪಿಎಲ್ನ ಪ್ಲೇಆಪ್ ಬಗ್ಗೆ ಈವರೆಗೂ ಸ್ಪಷ್ಟತೆ ಇಲ್ಲವಾಗಿದೆ. ಹೌದು, ಪ್ಲೇಆಫ್ನಲ್ಲಿ ಸರಿಯಾದ ಸ್ಪಷ್ಟತೆ ಇಲ್ಲವಾದ ಕಾರಣ ಪ್ರತಿ ತಂಡಗಳಿಗೂ ಪ್ಲೇಆಫ್ ಹಂತಕ್ಕೇರುವ ಸಾಧ್ಯತೆಗಳಿವೆ. ಇದರ ನಡುವೆ ಇದೀಗ ಹೊಸ ಸುದ್ದಿ ಚರ್ಚೆಯಾಗುತ್ತಿದ್ದು, ಆರ್ಸಿಬಿ ಮತ್ತು ಲಕ್ನೋ ಮುಖಾಮುಖಿ ಕುರಿತು.
ಈ ಬಾರಿ ಐಪಿಎಲ್ನಲ್ಲಿ ಯಾವುದು ಬೆಸ್ಟ್ ಮ್ಯಾಚ್ ಎಂದು ಕೇಳಿದರೆ ಪ್ರತಿಯೊಬ್ಬರೂ ಹೇಳುವ ಏಕೈಕ ಉತ್ತರವೆಂದರೆ ಅದು ಆರ್ಸಿಬಿ ಮತ್ತು ಲಕ್ನೋ ನಡುವಿನ ಹಣಾಹಣಿ ಎಂದು. ಹೌದು, ಈ ಪಂದ್ಯದಲ್ಲಿ ಆಟಕ್ಕಿಂತ ಹೆಚ್ಚು ಹೈಲೇಟ್ ಆಗಿದ್ದು, ಕೊಹ್ಲಿ ಮತ್ತು ಗಂಭೀರ್ ನಡುವಿನ ಜಗಳ. ಈವರೆಗೂ ಆರ್ಸಿಬಿ ಆಗಲಿ ಅಥವಾ ಲಕ್ನೋ ತಂಡವಾಗಲಿ ಪ್ಲೇಆಫ್ ಹಂತಕ್ಕೆ ಅಧಿಕೃತವಾಗಿ ಲಗ್ಗೆ ಇಟ್ಟಿಲ್ಲ. ಆದರೆ ಉಭಯ ತಂಡಗಳ ಅಭಿಮಾನಿಗಳು ಮತ್ತೆ ಯಾವಾಗ ಆರ್ಸಿಬಿ ಮತ್ತು ಲಕ್ನೋ ತಂಡಗಳು ಮುಖಾಮುಖಿ ಆಗಲಿದೆ ಎಂದು ಕಾತುರರಾಗಿದ್ದಾರೆ.


ಒಮ್ಮೆ ಏನಾದರೂ ಈ ರೀತಿ ಆದ್ದಲ್ಲಿ ಮತ್ತೊಮ್ಮೆ ಆರ್ಸಿಬಿ ಮತ್ತು ಲಕ್ನೋ ತಂಡಗಳು ಈ ವರ್ಷವೇ ಮುಖಾಮುಖಿ ಆಗಲಿದೆ. ಆದರೆ ಈ ಬಿಗ್ ಫೈಟ್ ನಡೆಯಬೇಕಾದರೆ ಈ ರೀತಿ ಮ್ಯಾಜಿಕ್ ನಡೆಯಬೇಕಿದೆ. ಐಪಿಎಲ್ 2023 ಅಂಕಪಟ್ಟಿಯಲ್ಲಿ 13 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದೆ. ಲಕ್ನೋ ತಂಡಕ್ಕೆ ಇನ್ನು ಲೀಗ್ ಹಂತದಲ್ಲಿ 2 ಪಂದ್ಯಗಳು ಬಾಕಿ ಉಳಿದಿದೆ. ಈ ಎರಡೂ ಪಂದ್ಯ ಗೆದ್ದರೆ ಲಕ್ನೋ 17 ಅಂಕದ ಮೂಲಕ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ.


ಆದರೆ ಮುಂಬೈ ಮುಂದಿನ 2 ಪಂದ್ಯದಲ್ಲಿ ಒಂದರಲ್ಲಿ ಸೋತು ಒಂದರಲ್ಲಿ ಗೆದ್ದರೆ 16 ಅಂಕ ಪಡೆಯಲಿದೆ. ಇತ್ತ ಆರ್ಸಿಬಿ ಸಹ ಮುಂದಿನ 2 ಪಂದ್ಯವನ್ನು ಭರ್ಜರಿಯಾಗಿ ಗೆದ್ದರೆ ಉತ್ತಮ ರನ್ರೇಟ್ ಮೂಲಕ ಪ್ಲೇಆಫ್ ಪ್ರವೇಶಿಸಲಿದೆ. ಆಗ ಲಕ್ನೋ ಸಹ 3ನೇ ಸ್ಥಾನ ಹಾಗೂ ಆರ್ಸಿಬಿ 4ನೇ ಸ್ಥಾನದಲ್ಲಿರಲಿದೆ. ಆಗ ಅಗ್ರ ಸ್ಥಾನದಲ್ಲಿರುವ 2 ತಂಡಗಳು ಕ್ವಾಲಿಫೈಯರ್ ಪಂದ್ಯವಾಡಲಿದೆ. ಹಾಗೆಯೇ 3 ಮತ್ತು 4ನೇ ಸ್ಥಾನದಲ್ಲಿರುವ ತಂಡಗಳು ಎಲಿಮಿನೇಟರ್ ಪಂದ್ಯವನ್ನಾಡಲಿದೆ.
ಆಗ ಲಕ್ನೋ ಮತ್ತು ಆರ್ಸಿಬಿ 3 ಮತ್ತು 4ನೇ ಸ್ಥಾನದಲ್ಲಿದ್ದರೆ ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿ ಆಗಲಿದೆ. ಒಮ್ಮೆ ಇದೇನಾದರೂ ಆಗದಿದ್ದರೆ, ಲಕ್ನೋ 2ನೇ ಸ್ಥಾನಕ್ಕೇರಿದರೆ ಆಗ ಅಲ್ಲಿನ ಪಂದ್ಯದಲ್ಲಿ ಲಕ್ನೋ ಸೋತು, ಎಲಿಮಿನೇಟರ್ನಲ್ಲಿ ಆರ್ಸಿಬಿ ಗೆದ್ದರೆ 2ನೇ ಕ್ವಾಲಿಫೈಯರ್ನಲ್ಲಿ ಮುಖಾಮುಖಿಯಾಗಲಿದೆ. ಇವೆಲ್ಲದರ ನಡುವೆ ದೊಡ್ಡ ಸುದ್ದಿಯೆಂದರೆ ಇಬ್ಬರೂ ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ನಲ್ಲಿ ಗೆದ್ದರೆ ಲಕ್ನೋ ಮತ್ತು ಆರ್ಸಿಬಿ ಫೈನಲ್ನಲ್ಲಿ ಸೆಣಸಾಡಲಿದೆ. ಆದರೆ ಈ ಎಲ್ಲವೂ ನಡೆಯಬೇಕಾದರೆ ಉಭಯ ತಂಡಗಳು ಮೊದಲು ಪ್ಲೇಆಫ್ ಪ್ರವೇಶಿಸಬೇಕಿದೆ.
rcb vs lsg will meet again in ipl 2023 playoffs.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm