ಬ್ರೇಕಿಂಗ್ ನ್ಯೂಸ್
19-05-23 02:37 pm Source: news18 ಕ್ರೀಡೆ
ಇದೇ ಮೇ 21ರ ಭಾನುವಾರ ನಡೆಯಲಿರುವ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವಿನ ಮೊದಲ ಪಂದ್ಯ ಅಪರಾಹ್ನ 3.30ರಿಂದ ಹಾಗೂ ಸಂಜೆ 7.30ಕ್ಕೆ ನಡೆಯಲಿರುವ ಹಾಟ್ ಫೇವರಿಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.
ಉಚಿತ ಪ್ರವೇಶ
ಈ ಬಾರಿ ಮಂಗಳೂರಿನಿಂದ ಕೊಣಾಜೆ ಮಂಗಳೂರು ವಿವಿ ತೆರಳುವ ರಸ್ತೆಯಲ್ಲಿರುವ ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜು ಮೈದಾನದಲ್ಲಿ ಜಿಯೋ ಸಿನೆಮಾ ವತಿಯಿಂದ ಫ್ಯಾನ್ ಪಾರ್ಕ್ ನಿರ್ಮಾಣವಾಗಿದೆ. ಕ್ರಿಕೆಟ್ ಪ್ರೇಮಿಗಳಿಗೆ ಉಚಿತ ಪ್ರವೇಶವಿದ್ದು, ಭಾನುವಾರ ಮಧ್ಯಾಹ್ನ 1.30 ಗೇಟ್ ತೆರೆಯಲಿದೆ.
ವಿಘ್ನ ಎದುರಾಗದಿರಲಿ ಎನ್ನುತ್ತಿದ್ದಾರೆ ಫ್ಯಾನ್ಸ್!
ನಿಜ, ಈ ಹಿಂದೆ 2016ರಲ್ಲಿ ಮಂಗಳೂರು ನಗರದಲ್ಲಿ ಮೊದಲ ಬಾರಿಗೆ ಐಪಿಎಲ್ ಫ್ಯಾನ್ ಪಾರ್ಕ್ ತೆರೆದಿದ್ದು ಯಶಸ್ವಿಯಾಗಿ ನಡೆದಿತ್ತು. ಕಡಲನಗರಿಯ ಜನರ ಕ್ರಿಕೆಟ್ ಪ್ರೇಮ ಅರಿತ ಆಯೋಜಕರು 2017 ರಲ್ಲಿಯೂ ಅದೇ ಮೈದಾನದಲ್ಲಿ ಫ್ಯಾನ್ ಪಾರ್ಕ್ ತೆರೆದಿದ್ದರು. ಇನ್ನೇನು 2018ರಲ್ಲಿ ಐಪಿಎಲ್ ಫ್ಯಾನ್ ಪಾರ್ಕ್ ತೆರೆದಿದ್ದರಾದರೂ ಪಂದ್ಯ ಆರಂಭಕ್ಕೂ ಮುನ್ನವೇ ಗಾಳಿ ಮಳೆಯಾಗಿದ್ದ ಪರಿಣಾಮ ಆ ಬಾರಿಯ ಫ್ಯಾನ್ ಪಾರ್ಕ್ ಪಂದ್ಯಾಟ ವೀಕ್ಷಣೆ ರದ್ದುಗೊಂಡಿತ್ತು.
2019ರಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆ ಮಂಗಳೂರು ನಗರದಲ್ಲಿ ಸಿದ್ಧತೆ ನಡೆದಿತ್ತಾದರೂ ಚುನಾವಣೆ ನೀತಿ ಸಂಹಿತೆ ಹಾಗೂ ಭದ್ರತೆ ದೃಷ್ಟಿಯಿಂದ ಅನುಮತಿ ನಿರಾಕರಿಸಲಾಗಿತ್ತು. ಬಳಿಕದ ಎರಡು ವರ್ಷ ಕೊರೊನಾ ಕಾಟವೂ ಫ್ಯಾನ್ ಪಾರ್ಕ್ ನಿರ್ಮಾಣಕ್ಕೆ ಅಡ್ಡಿಯಾಗಿತ್ತು ಅನ್ನೋದು ಮರೆಯುವಂತಿಲ್ಲ.
ಹೀಗಾಗಿ ಈ ಬಾರಿಯ ಐಪಿಎಲ್ ಫ್ಯಾನ್ ಪಾರ್ಕ್ ಗೆ ವಿಘ್ನ ಎದುರಾಗದಿರಲಿ ಅಂತಾ ಕ್ರಿಕೆಟ್ ಫ್ಯಾನ್ಸ್ ಬೇಡಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ದೇ ಈ ಬಾರಿ ಕಣಚೂರಿಗೆ ಲೊಕೇಶನ್ ಶಿಫ್ಟ್ ಮಾಡಲಾಗಿದ್ದು, ಎರಡು ಪಂದ್ಯವನ್ನು ನೋಡುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗಿದೆ.
mangalore ipl 2023 fan park on sunday at kanachur ground mangaluru.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm