ಬ್ರೇಕಿಂಗ್ ನ್ಯೂಸ್
24-05-23 03:31 pm Source: news18 ಕ್ರೀಡೆ
ಈ ವರ್ಷದ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ (ICC World Cup 2023) ನಡೆಯಲಿದೆ ಎಂದು ವರದಿಯಾಗಿದೆ. ಮೊದಲ ಬಾರಿಗೆ ಭಾರತ ಏಕಾಂಗಿಯಾಗಿ ಏಕದಿನ ವಿಶ್ವಕಪ್ಗೆ ಆತಿಥ್ಯ ವಹಿಸಲಿದೆ. ಈಗಾಗಲೇ 8 ತಂಡಗಳು ಏಕದಿನ ವಿಶ್ವಕಪ್ಗೆ ಅರ್ಹತೆ ಪಡೆದಿವೆ. ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ವಿಶ್ವಕಪ್ಗೆ ಅರ್ಹತೆ ಪಡೆದಿವೆ.
ಆದರೆ ಇನ್ನೆರಡು ತಂಡಗಳು ಬೇಕಾಗಿದ್ದು, ಈ ವಿಶ್ವಕಪ್ ಕ್ವಾಲಿಫೈಯರ್ ಟೂರ್ನಿ ಜಿಂಬಾಬ್ವೆಯಲ್ಲಿ ನಡೆಯಲಿದೆ. ಕೆಲ ಸಮಯದ ಹಿಂದೆಯೇ ಐಸಿಸಿ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್ಗೆ ಈ ಪಂದ್ಯಾವಳಿ ಅತ್ಯಂತ ಮಹತ್ವದ್ದಾಗಿದೆ. ಇದರಲ್ಲಿ ಒಟ್ಟು 10 ತಂಡಗಳು ಸ್ಪರ್ಧಿಸಲಿವೆ. ಗ್ರೂಪ್ 'ಎ' ವೆಸ್ಟ್ ಇಂಡೀಸ್, ಜಿಂಬಾಬ್ವೆ, ನೆದರ್ಲ್ಯಾಂಡ್ಸ್, ನೇಪಾಳ, ಯುನೈಟೆಡ್ ಸ್ಟೇಟ್ಸ್ ಅನ್ನು ಒಳಗೊಂಡಿದೆ.'ಬಿ' ಗುಂಪಿನಲ್ಲಿ ಶ್ರೀಲಂಕಾ, ಐರ್ಲೆಂಡ್, ಸ್ಕಾಟ್ಲೆಂಡ್, ಓಮನ್ ಮತ್ತು ಯುಎಇ ಸೇರಿವೆ.



ಈ ಪಂದ್ಯಾವಳಿಯು ಜೂನ್ 18 ರಿಂದ ಜುಲೈ 9ರ ವರೆಗೆ ನಡೆಯಲಿದೆ. ಮೊದಲು ಗುಂಪು ಹಂತದಲ್ಲಿ ನಡೆಯಲಿದೆ. ಪ್ರತಿ ತಂಡವು ತಮ್ಮ ಗುಂಪಿನ ಇತರ ನಾಲ್ಕು ತಂಡಗಳ ವಿರುದ್ಧ ಒಂದು ಪಂದ್ಯವನ್ನು ಆಡುತ್ತದೆ. ಎರಡೂ ಗುಂಪಿನಲ್ಲಿ ಅಗ್ರ 3 ತಂಡಗಳು ಸೂಪರ್ ಸಿಕ್ಸ್ಗೆ ಅರ್ಹತೆ ಪಡೆಯುತ್ತವೆ. ಸೂಪರ್ 6 ರಲ್ಲಿ ಪ್ರತಿ ತಂಡವು 4 ತಂಡಗಳ ವಿರುದ್ಧ ಆಡಲಿದೆ. ಆ ಬಳಿಕ ಅಗ್ರ 2 ಸ್ಥಾನ ಪಡೆಯುವ ತಂಡಗಳು ಫೈನಲ್ಗೆ ಅರ್ಹತೆ ಪಡೆಯಲಿವೆ. ಇದಲ್ಲದೆ, ಅವರು ಭಾರತದಲ್ಲಿ ನಡೆಯಲಿರುವ 2023ರ ODI ವಿಶ್ವಕಪ್ಗೆ ಅರ್ಹತೆ ಪಡೆಯುತ್ತಾರೆ.



ಭಾರತದಲ್ಲಿ ನಡೆಯಲಿರುವ 2023ರ ODI ವಿಶ್ವಕಪ್ನಲ್ಲಿ ಒಟ್ಟು 10 ತಂಡಗಳು ಭಾಗವಹಿಸಲಿವೆ. ಅಕ್ಟೋಬರ್ 5ರಂದು ಟೂರ್ನಿ ಆರಂಭವಾಗುವ ಸಾಧ್ಯತೆ ಇದೆ ಎಂಬ ವರದಿಗಳಿವೆ. ಆದರೆ ಶೀಘ್ರದಲ್ಲೇ ವೇಳಾಪಟ್ಟಿಯ ಬಗ್ಗೆ ಐಸಿಸಿ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದೆ. ಇನ್ನು, ಈ ಬಾರಿ ವಿಶ್ವಕಪ್ ಭಾರತದಲ್ಲಿ ನಡೆಯುವುದರಿಂದ ಪಾಕಿಸ್ತಾನ್ ಮತ್ತು ಭಾರತ ನಡುವಿನ ಪಂದ್ಯಕ್ಕಾಗಿ ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
icc announces schedule for world cup 2023 qualifiers.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm