ಬ್ರೇಕಿಂಗ್ ನ್ಯೂಸ್
24-05-23 03:31 pm Source: news18 ಕ್ರೀಡೆ
ಈ ವರ್ಷದ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ (ICC World Cup 2023) ನಡೆಯಲಿದೆ ಎಂದು ವರದಿಯಾಗಿದೆ. ಮೊದಲ ಬಾರಿಗೆ ಭಾರತ ಏಕಾಂಗಿಯಾಗಿ ಏಕದಿನ ವಿಶ್ವಕಪ್ಗೆ ಆತಿಥ್ಯ ವಹಿಸಲಿದೆ. ಈಗಾಗಲೇ 8 ತಂಡಗಳು ಏಕದಿನ ವಿಶ್ವಕಪ್ಗೆ ಅರ್ಹತೆ ಪಡೆದಿವೆ. ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ವಿಶ್ವಕಪ್ಗೆ ಅರ್ಹತೆ ಪಡೆದಿವೆ.
ಆದರೆ ಇನ್ನೆರಡು ತಂಡಗಳು ಬೇಕಾಗಿದ್ದು, ಈ ವಿಶ್ವಕಪ್ ಕ್ವಾಲಿಫೈಯರ್ ಟೂರ್ನಿ ಜಿಂಬಾಬ್ವೆಯಲ್ಲಿ ನಡೆಯಲಿದೆ. ಕೆಲ ಸಮಯದ ಹಿಂದೆಯೇ ಐಸಿಸಿ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್ಗೆ ಈ ಪಂದ್ಯಾವಳಿ ಅತ್ಯಂತ ಮಹತ್ವದ್ದಾಗಿದೆ. ಇದರಲ್ಲಿ ಒಟ್ಟು 10 ತಂಡಗಳು ಸ್ಪರ್ಧಿಸಲಿವೆ. ಗ್ರೂಪ್ 'ಎ' ವೆಸ್ಟ್ ಇಂಡೀಸ್, ಜಿಂಬಾಬ್ವೆ, ನೆದರ್ಲ್ಯಾಂಡ್ಸ್, ನೇಪಾಳ, ಯುನೈಟೆಡ್ ಸ್ಟೇಟ್ಸ್ ಅನ್ನು ಒಳಗೊಂಡಿದೆ.'ಬಿ' ಗುಂಪಿನಲ್ಲಿ ಶ್ರೀಲಂಕಾ, ಐರ್ಲೆಂಡ್, ಸ್ಕಾಟ್ಲೆಂಡ್, ಓಮನ್ ಮತ್ತು ಯುಎಇ ಸೇರಿವೆ.



ಈ ಪಂದ್ಯಾವಳಿಯು ಜೂನ್ 18 ರಿಂದ ಜುಲೈ 9ರ ವರೆಗೆ ನಡೆಯಲಿದೆ. ಮೊದಲು ಗುಂಪು ಹಂತದಲ್ಲಿ ನಡೆಯಲಿದೆ. ಪ್ರತಿ ತಂಡವು ತಮ್ಮ ಗುಂಪಿನ ಇತರ ನಾಲ್ಕು ತಂಡಗಳ ವಿರುದ್ಧ ಒಂದು ಪಂದ್ಯವನ್ನು ಆಡುತ್ತದೆ. ಎರಡೂ ಗುಂಪಿನಲ್ಲಿ ಅಗ್ರ 3 ತಂಡಗಳು ಸೂಪರ್ ಸಿಕ್ಸ್ಗೆ ಅರ್ಹತೆ ಪಡೆಯುತ್ತವೆ. ಸೂಪರ್ 6 ರಲ್ಲಿ ಪ್ರತಿ ತಂಡವು 4 ತಂಡಗಳ ವಿರುದ್ಧ ಆಡಲಿದೆ. ಆ ಬಳಿಕ ಅಗ್ರ 2 ಸ್ಥಾನ ಪಡೆಯುವ ತಂಡಗಳು ಫೈನಲ್ಗೆ ಅರ್ಹತೆ ಪಡೆಯಲಿವೆ. ಇದಲ್ಲದೆ, ಅವರು ಭಾರತದಲ್ಲಿ ನಡೆಯಲಿರುವ 2023ರ ODI ವಿಶ್ವಕಪ್ಗೆ ಅರ್ಹತೆ ಪಡೆಯುತ್ತಾರೆ.



ಭಾರತದಲ್ಲಿ ನಡೆಯಲಿರುವ 2023ರ ODI ವಿಶ್ವಕಪ್ನಲ್ಲಿ ಒಟ್ಟು 10 ತಂಡಗಳು ಭಾಗವಹಿಸಲಿವೆ. ಅಕ್ಟೋಬರ್ 5ರಂದು ಟೂರ್ನಿ ಆರಂಭವಾಗುವ ಸಾಧ್ಯತೆ ಇದೆ ಎಂಬ ವರದಿಗಳಿವೆ. ಆದರೆ ಶೀಘ್ರದಲ್ಲೇ ವೇಳಾಪಟ್ಟಿಯ ಬಗ್ಗೆ ಐಸಿಸಿ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದೆ. ಇನ್ನು, ಈ ಬಾರಿ ವಿಶ್ವಕಪ್ ಭಾರತದಲ್ಲಿ ನಡೆಯುವುದರಿಂದ ಪಾಕಿಸ್ತಾನ್ ಮತ್ತು ಭಾರತ ನಡುವಿನ ಪಂದ್ಯಕ್ಕಾಗಿ ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
icc announces schedule for world cup 2023 qualifiers.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am