ಬ್ರೇಕಿಂಗ್ ನ್ಯೂಸ್
27-05-23 02:30 pm Source: news18 ಕ್ರೀಡೆ
ಗುಜರಾತ್ ನ ಆರಂಭಿಕ ಆಟಗಾರ ಶುಭಮನ್ ಗಿಲ್ ಐಪಿಎಲ್ 2023ರ ಸೀಸನ್ ನಲ್ಲಿ ಭರ್ಜರಿಯಾಗಿ ಅಬ್ಬರಿಸುತ್ತಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಸೀಸನ್ ನಲ್ಲಿ ಯಾರೂ ಊಹಿಸಲಾಗದ ರೀತಿಯಲ್ಲಿ ಬ್ಯಾಟಿಂಗ್ ಮಾಡುತ್ತಿದ್ದು, ಸಾಲು ಸಾಲು ದಾಖಲೆಗಳನ್ನು ಬ್ರೇಕ್ ಮಾಡುತ್ತಿದ್ದಾರೆ. ಕ್ವಾಲಿಫೈಯರ್ 2ರಲ್ಲಿ ಟೀಂ ಇಂಡಿಯಾದ ಪ್ರಿನ್ಸ್ ಗಿಲ್ ಭರ್ಜರಿ ಶತಕ ಸಿಡಿಸಿದರು. ತಮ್ಮ ವಿಧ್ವಂಸಕ ಬ್ಯಾಟಿಂಗ್ ಮೂಲಕ ಮುಂಬೈ ಬೌಲರ್ ಗಳನ್ನು ಬೆಚ್ಚಿಬೀಳಿಸಿದರು. ಟೀಂ ಇಂಡಿಯಾದ ಭವಿಷ್ಯದ ಆಟಗಾರ ಗಿಲ್ 60 ಎಸೆತಗಳಲ್ಲಿ 129 ರನ್ ಗಳಿಸಿದರು. ಈ ವೇಳೆ 7 ಬೌಂಡರಿ, 10 ಸಿಕ್ಸರ್ ಸಿಡಿಸಿದರು.
ಈ ಬಾರಿಯ ಐಪಿಎಲ್ ಋತುವಿನಲ್ಲಿ ಗಿಲ್ ಅವರ ಮೂರನೇ ಶತಕವಾಗಿದೆ. ಈ ಶತಕದ ಮೂಲಕ ತಮ್ಮ ಖಾತೆಯಲ್ಲಿ ಅಪರೂಪದ ದಾಖಲೆ ಬರೆದಿದ್ದಾರೆ. ಒಂದೇ ಋತುವಿನಲ್ಲಿ ಮೂರು ಅಥವಾ ಅದಕ್ಕಿಂತ ಹೆಚ್ಚು ಶತಕಗಳನ್ನು ಬಾರಿಸಿದ ಮೂರನೇ ಬ್ಯಾಟ್ಸ್ಮನ್ ಶುಭಮನ್ ಗಿಲ್. 2016ರಲ್ಲಿ ವಿರಾಟ್ ಕೊಹ್ಲಿ 4 ಶತಕ ಹಾಗೂ ಜೋಸ್ ಬಟ್ಲರ್ ಕಳೆದ ವರ್ಷ 4 ಶತಕ ಸಿಡಿಸಿದ್ದರು. ಐಪಿಎಲ್ ಇತಿಹಾಸದಲ್ಲಿ ಒಂದೇ ಋತುವಿನಲ್ಲಿ 800+ ರನ್ ಗಳಿಸಿದ ಎರಡನೇ ಭಾರತೀಯ ಬ್ಯಾಟ್ಸ್ಮನ್ ಶುಭಮನ್ ಗಿಲ್. ಇದಕ್ಕೂ ಮುನ್ನ 2016ರ ಋತುವಿನಲ್ಲಿ ವಿರಾಟ್ ಕೊಹ್ಲಿ 976 ರನ್ ಗಳಿಸಿ ಅಗ್ರಸ್ಥಾನದಲ್ಲಿದ್ದಾರೆ.


ಐಪಿಎಲ್ 2023 ರ ಋತುವಿನಲ್ಲಿ ನಾಲ್ಕನೇ ಅತಿ ಹೆಚ್ಚು ರನ್ ಗಳಿಸಿದ ಡ್ವೈನ್ ಕಾನ್ವೆ ಅವರು ಶುಭಮನ್ ಗಿಲ್ಗಿಂತ ಸುಮಾರು 200 ರನ್ ದೂರದಲ್ಲಿದ್ದಾರೆ. ಅಂತಿಮ ಪಂದ್ಯದಲ್ಲಿ ಕಾನ್ವೆ ಶತಕ ಬಾರಿಸಿದರೂ ಗಿಲ್ ಆರೆಂಜ್ ಕ್ಯಾಪ್ ಗೆಲ್ಲುವುದು ಬಹುತೇಕ ಖಚಿತವಾಗಿದೆ. ಐಪಿಎಲ್ನಲ್ಲಿ ಗರಿಷ್ಠ ಸ್ಕೋರ್ ಗಳಿಸಿದ ಎರಡನೇ ಭಾರತೀಯ ಎಂಬ ದಾಖಲೆ ನಿರ್ಮಿಸಿದರು. ಈ ಪಂದ್ಯದಲ್ಲಿ ಗಿಲ್ 129 ರನ್ ಗಳಿಸಿದ್ದರು. ಕೆಎಲ್ ರಾಹುಲ್ 132 ರನ್ ಗಳಿಸಿ ಅಗ್ರಸ್ಥಾನದಲ್ಲಿದ್ದಾರೆ. ರಿಷಬ್ ಪಂತ್ 128 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಗಿಲ್ ಪ್ಲೇ ಆಫ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ಮನ್ ಎನಿಸಿಕೊಂಡರು. 2014ರಲ್ಲಿ ಸೆಹ್ವಾಗ್ 122 ರನ್ ಗಳಿಸಿದ್ದರು. ಇದೀಗ ಆ ದಾಖಲೆಯನ್ನು ಗಿಲ್ ಮುರಿದಿದ್ದಾರೆ.


ಐಪಿಎಲ್ ಪ್ಲೇ ಆಫ್ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್ಮನ್ ಎಂಬ ದಾಖಲೆಯನ್ನು ಗಿಲ್ ನಿರ್ಮಿಸಿದ್ದಾರೆ. ಮುಂಬೈ ವಿರುದ್ಧ ಗಿಲ್ 10 ಸಿಕ್ಸರ್ ಬಾರಿಸಿದ್ದರು. 2014 ರಲ್ಲಿ ಸಹಾ ಕೆಕೆಆರ್ ವಿರುದ್ಧ 8 ಸಿಕ್ಸರ್ಗಳೊಂದಿಗೆ ಎರಡನೇ ಸ್ಥಾನ ಪಡೆದಿದ್ದಾರೆ. ಪ್ರಿನ್ಸ್ ಗಿಲ್ ಐಪಿಎಲ್ ಸೀಸನ್ನಲ್ಲಿ ಅತಿ ಹೆಚ್ಚು ಬೌಂಡರಿಗಳನ್ನು ಬಾರಿಸಿದ ಎರಡನೇ ಭಾರತೀಯ ಬ್ಯಾಟ್ಸ್ಮನ್ ಎನಿಸಿಕೊಂಡರು. ಈ ಐಪಿಎಲ್ ಋತುವಿನಲ್ಲಿ ಗಿಲ್ 111 ಬೌಂಡರಿಗಳನ್ನು ಬಾರಿಸಿದ್ದಾರೆ. ಆದರೆ 128 ಬೌಂಡರಿಗಳೊಂದಿಗೆ ಜೋಸ್ ಬಟ್ಲರ್ ಅಗ್ರಸ್ಥಾನದಲ್ಲಿದ್ದಾರೆ.
ipl final gt vs csk shubman gill records with his brilliant century.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm