ಬ್ರೇಕಿಂಗ್ ನ್ಯೂಸ್
15-06-23 02:45 pm Source: News18 Kannada ಕ್ರೀಡೆ
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಅಂತಿಮ ಸೋಲಿನ ನಂತರ ಟೀಮ್ ಇಂಡಿಯಾ ಮೇಲೆ ಟೀಕೆ ಹೆಚ್ಚಾಗುತ್ತಿದೆ. ಟೀಂ ಇಂಡಿಯಾ ಅಭಿಮಾನಿಗಳು ಕೂಡ ಸಿಟ್ಟಿಗೆದ್ದಿದ್ದಾರೆ. ಅದರಲ್ಲೂ ಟೀಂ ಇಂಡಿಯಾ ಆಯ್ಕೆಯಲ್ಲಿ ಬದಲಾಗಬೇಕಿದೆ ಎಂದಿದ್ದಾರೆ.
ಐಪಿಎಲ್ ಗೆ ಹೆಚ್ಚಿನ ಆದ್ಯತೆ ನೀಡಿ ಅಂತಾರಾಷ್ಟ್ರೀಯ ಕ್ರಿಕೆಟ್ ಕಡೆಗಣಿಸಲಾಗುತ್ತಿದೆ ಎನ್ನಲಾಗಿದೆ. ಅದರಲ್ಲೂ ಐಸಿಸಿ ಟ್ರೋಫಿಗಳಲ್ಲಿ ಟೀಂ ಇಂಡಿಯಾ ಕಳಪೆ ಪ್ರದರ್ಶನ ಕಂಡು ಅಭಿಮಾನಿಗಳು ಸಿಟ್ಟಾಗಿದ್ದಾರೆ.

ಟೀಂ ಇಂಡಿಯಾ ಕಳೆದ ಬಾರಿ 2013ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದಿತ್ತು. ಆ ನಂತರ ಮತ್ತೆ ಅಂತಹ ಸಾಧನೆ ಮಾಡಲಿಲ್ಲ. ಇತ್ತೀಚಿನ ದಿನಗಳಲ್ಲಿ, ಭಾರತವು T20 ವಿಶ್ವಕಪ್ಗಳು, ಎರಡು ODI ವಿಶ್ವಕಪ್ಗಳು, ಎರಡು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ಗಳು ಮತ್ತು ಒಂದು ಚಾಂಪಿಯನ್ಸ್ ಟ್ರೋಫಿಯನ್ನು ಆಡಿದೆ.
ಒಟ್ಟು 4 ಫೈನಲ್ (2014 T20, 2017 ಚಾಂಪಿಯನ್ಸ್ ಟ್ರೋಫಿ, 2021, 2023 ವಿಶ್ವ ಟೆಸ್ಟ್ ಚಾಂಪಿಯನ್ಶಿಪ್) ಆಡಿದ್ದಾರೆ. ನಾಲ್ಕು ಸೆಮಿಫೈನಲ್ (2016 T20, 2022 T20, 2015 ODI, 2019 ODI ವಿಶ್ವಕಪ್). ಪ್ರತಿ ಬಾರಿಯೂ ಪ್ರಮುಖ ಟೂರ್ನಿಗಳಲ್ಲಿ ಸೋತು ಮನೆಗೆ ವಾಪಸ್ಸಾಗುತ್ತಿದೆ.

ಈ ಕ್ರಮದಲ್ಲಿ ಟೀಂ ಇಂಡಿಯಾ ಆಯ್ಕೆ ಬಗ್ಗೆ ಟೀಕೆಗಳು ಬರುತ್ತಿವೆ. ನಾಯಕನಾಗಿ ರೋಹಿತ್ ಶರ್ಮಾ ಅವರ ಪ್ರದರ್ಶನದ ಬಗ್ಗೆ ಮಾಜಿ ಆಟಗಾರರು ಮತ್ತು ಫ್ಯಾನ್ಸ್ ಸಿಟ್ಟಾಗಿದ್ದಾರೆ. ಬ್ಯಾಟ್ಸ್ ಮನ್ ಆಗಿಯೂ ರೋಹಿತ್ ಶರ್ಮಾ ನಿರೀಕ್ಷೆಗೆ ತಕ್ಕಂತೆ ಆಡುತ್ತಿಲ್ಲ.
ಭಾರತ ಮುಂದಿನ ತಿಂಗಳು ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದೆ. ಟೀಂ ಇಂಡಿಯಾದಿಂದ ದೂರ ಉಳಿದಿರುವ ಅನುಭವಿ ಆಟಗಾರ ಶಿಖರ್ ಧವನ್ಗೆ ಅವಕಾಶ ನೀಡುವಂತೆ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಶಿಖರ್ ಧವನ್ ವಿದೇಶದಲ್ಲಿ ಉತ್ತಮ ದಾಖಲೆ ಹೊಂದಿದ್ದಾರೆ. ವಿಶೇಷವಾಗಿ ಬೌನ್ಸಿ ವಿಕೆಟ್ಗಳಲ್ಲಿ ಅವರು ಅದ್ಭುತವಾಗಿ ಆಡಬಲ್ಲರು.

ತವರಿನಲ್ಲಿ ರೋಹಿತ್ ಶರ್ಮಾ ಅವರ ಟೆಸ್ಟ್ ಸರಾಸರಿ 66.73 ಆಗಿದೆ. ವಿದೇಶದಲ್ಲಿ ಅದೇ ಆದರೆ 31 ಮಾತ್ರ. ಫ್ಲಾಟ್ ವಿಕೆಟ್ಗಳಲ್ಲಿ ಮಿಂಚುತ್ತಿರುವ ರೋಹಿತ್ ಶರ್ಮಾ ಬೌನ್ಸಿ ವಿಕೆಟ್ಗಳಲ್ಲಿ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ತವರಿನಲ್ಲಿ ಧವನ್ ಅವರ ಟೆಸ್ಟ್ ಸರಾಸರಿ 44.38 ಆಗಿದೆ. ಇದು ವಿದೇಶದಲ್ಲಿ 40 ಆಗಿದೆ.
ಅದರೊಂದಿಗೆ ಧವನ್ ಬಿಗ್ ಮ್ಯಾಚ್ ಪ್ಲೇಯರ್ ಎಂದು ಗುರುತಿಸಿಕೊಂಡಿದ್ದಾರೆ. ದ್ವಿಪಕ್ಷೀಯ ಸರಣಿಗಳಲ್ಲಿ ಉತ್ತಮ ಪ್ರದರ್ಶನ ನೀಡದಿದ್ದರೂ ಧವನ್ ಐಸಿಸಿ ಟೂರ್ನಿಗಳಲ್ಲಿ ಮಿಂಚಿದ್ದಾರೆ. ಪ್ರಮುಖ ಪಂದ್ಯಗಳಲ್ಲಿ ರನ್ ಗಳಿಸುವುದರಲ್ಲಿ ಧವನ್ ವಿಶೇಷವಾಗಿದ್ದಾರೆ. ಇಂತಹ ಆಟಗಾರನನ್ನು ಪಕ್ಕಕ್ಕೆ ಇಟ್ಟಿರುವುದು ಎಷ್ಟು ಸಮರ್ಥನೆ ಎಂದು ಅಭಿಮಾನಿಗಳು ಬಿಸಿಸಿಐಗೆ ಪ್ರಶ್ನಿಸುತ್ತಿದ್ದಾರೆ.
India vs West Indies shikhar dhawan deserves one more chance to play for team India.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm