ಬ್ರೇಕಿಂಗ್ ನ್ಯೂಸ್
06-07-23 01:43 pm Source: News18 Kannada ಕ್ರೀಡೆ
ಕಳೆದ ವರ್ಷ ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ರಿಷಭ್ ಪಂತ್ ರೂರ್ಕಿ ಬಳಿ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಅವರು ಗಾಯದಿಂದ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. ಏತನ್ಮಧ್ಯೆ, ಇದೇ ರೀತಿಯ ಅಪಘಾತದಲ್ಲಿ ಮತ್ತೊಬ್ಬ ಭಾರತೀಯ ಕ್ರಿಕೆಟಿಗ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ಕ್ರಿಕೆಟಿಗ ಬೇರೆ ಯಾರೂ ಅಲ್ಲ ಮಾಜಿ ವೇಗಿ ಪ್ರವೀಣ್ ಕುಮಾರ್.
ಮಂಗಳವಾರ ತಡರಾತ್ರಿ ಮೀರತ್ನ ಆಯುಕ್ತರ ನಿವಾಸದ ಬಳಿ ವೇಗವಾಗಿ ಬಂದ ಕ್ಯಾಂಟರ್ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಪ್ರವೀಣ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿ ಚಾಲಕನನ್ನು ಬಂಧಿಸಿದ್ದಾರೆ. ಅಪಘಾತದ ನಂತರ ಅವರ ಮಗ ಕೂಡ ಕಾರಿನಲ್ಲಿ ಪ್ರವೀಣ್ ಕುಮಾರ್ ಜೊತೆಗಿದ್ದರು ಎಂದು ತಿಳಿದಿಬಂದಿದೆ. ಅದೃಷ್ಟವಶಾತ್ ಇಬ್ಬರಿಗೂ ಗಂಭೀರ ಗಾಯಗಳಾಗಿಲ್ಲ. ವಾಸ್ತವವಾಗಿ ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ತಮ್ಮ ಕಾರಿನಲ್ಲಿ ಪಾಂಡವನಗರದಿಂದ ಬರುತ್ತಿದ್ದರು. ಅಷ್ಟರಲ್ಲಿ ಕಮಿಷನರ್ ನಿವಾಸದ ಬಳಿ ಬಂದ ಕೂಡಲೇ ಎದುರಿನಿಂದ ವೇಗವಾಗಿ ಬಂದ ಕ್ಯಾಂಟರ್ ಅವರ ಕಾರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ.



ಇದರಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಕ್ಯಾಂಟರ್ ಚಾಲಕ ಸಿಕ್ಕಿಬಿದ್ದಿದ್ದು, ಪ್ರವೀಣ್ ಕುಮಾರ್ ಮತ್ತು ಅವರ ಮಗ ಸುರಕ್ಷಿತವಾಗಿರುವುದು ಒಳ್ಳೆಯದು ಎಂದು ನಗರ ಎಸ್ಪಿ ಪಿಯೂಷ್ ಕುಮಾರ್ ತಿಳಿಸಿದ್ದಾರೆ. ಪ್ರವೀಣ್ ಕುಮಾರ್ ಅಪಘಾತಕ್ಕೆ ಒಳಗಾಗಿರುವುದು ಇದೇ ಮೊದಲಲ್ಲ. 2007ರಲ್ಲಿ ಕೂಡ ವಿದೇಶಿ ಪ್ರವಾಸ ಮುಗಿಸಿ ಮನೆಗೆ ತೆರಳುವಾಗ ಅಪಘಾತಕ್ಕೆ ಒಳಗಾಗಿದ್ದರು. ಭಾರತದ ಪರ 36 ವರ್ಷದ ಪ್ರವೀಣ್ ಕುಮಾರ್ 6 ಟೆಸ್ಟ್ ಪಂದ್ಯಗಳಲ್ಲಿ 27 ವಿಕೆಟ್, 68 ODIಗಳಲ್ಲಿ 77 ವಿಕೆಟ್ ಪಡೆದಿದ್ದಾರೆ. ಗಾಯದ ಕಾರಣ ಪ್ರವೀಣ್ 2011ರ ಏಕದಿನ ವಿಶ್ವಕಪ್ ಆಡಲಾಗಲಿಲ್ಲ.
Former Indian Pacer Praveen Kumar Car Accident in Meerut.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm