ಬ್ರೇಕಿಂಗ್ ನ್ಯೂಸ್
06-07-23 01:43 pm Source: News18 Kannada ಕ್ರೀಡೆ
ಕಳೆದ ವರ್ಷ ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ರಿಷಭ್ ಪಂತ್ ರೂರ್ಕಿ ಬಳಿ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಅವರು ಗಾಯದಿಂದ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. ಏತನ್ಮಧ್ಯೆ, ಇದೇ ರೀತಿಯ ಅಪಘಾತದಲ್ಲಿ ಮತ್ತೊಬ್ಬ ಭಾರತೀಯ ಕ್ರಿಕೆಟಿಗ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ಕ್ರಿಕೆಟಿಗ ಬೇರೆ ಯಾರೂ ಅಲ್ಲ ಮಾಜಿ ವೇಗಿ ಪ್ರವೀಣ್ ಕುಮಾರ್.
ಮಂಗಳವಾರ ತಡರಾತ್ರಿ ಮೀರತ್ನ ಆಯುಕ್ತರ ನಿವಾಸದ ಬಳಿ ವೇಗವಾಗಿ ಬಂದ ಕ್ಯಾಂಟರ್ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಪ್ರವೀಣ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿ ಚಾಲಕನನ್ನು ಬಂಧಿಸಿದ್ದಾರೆ. ಅಪಘಾತದ ನಂತರ ಅವರ ಮಗ ಕೂಡ ಕಾರಿನಲ್ಲಿ ಪ್ರವೀಣ್ ಕುಮಾರ್ ಜೊತೆಗಿದ್ದರು ಎಂದು ತಿಳಿದಿಬಂದಿದೆ. ಅದೃಷ್ಟವಶಾತ್ ಇಬ್ಬರಿಗೂ ಗಂಭೀರ ಗಾಯಗಳಾಗಿಲ್ಲ. ವಾಸ್ತವವಾಗಿ ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ತಮ್ಮ ಕಾರಿನಲ್ಲಿ ಪಾಂಡವನಗರದಿಂದ ಬರುತ್ತಿದ್ದರು. ಅಷ್ಟರಲ್ಲಿ ಕಮಿಷನರ್ ನಿವಾಸದ ಬಳಿ ಬಂದ ಕೂಡಲೇ ಎದುರಿನಿಂದ ವೇಗವಾಗಿ ಬಂದ ಕ್ಯಾಂಟರ್ ಅವರ ಕಾರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ.
ಇದರಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಕ್ಯಾಂಟರ್ ಚಾಲಕ ಸಿಕ್ಕಿಬಿದ್ದಿದ್ದು, ಪ್ರವೀಣ್ ಕುಮಾರ್ ಮತ್ತು ಅವರ ಮಗ ಸುರಕ್ಷಿತವಾಗಿರುವುದು ಒಳ್ಳೆಯದು ಎಂದು ನಗರ ಎಸ್ಪಿ ಪಿಯೂಷ್ ಕುಮಾರ್ ತಿಳಿಸಿದ್ದಾರೆ. ಪ್ರವೀಣ್ ಕುಮಾರ್ ಅಪಘಾತಕ್ಕೆ ಒಳಗಾಗಿರುವುದು ಇದೇ ಮೊದಲಲ್ಲ. 2007ರಲ್ಲಿ ಕೂಡ ವಿದೇಶಿ ಪ್ರವಾಸ ಮುಗಿಸಿ ಮನೆಗೆ ತೆರಳುವಾಗ ಅಪಘಾತಕ್ಕೆ ಒಳಗಾಗಿದ್ದರು. ಭಾರತದ ಪರ 36 ವರ್ಷದ ಪ್ರವೀಣ್ ಕುಮಾರ್ 6 ಟೆಸ್ಟ್ ಪಂದ್ಯಗಳಲ್ಲಿ 27 ವಿಕೆಟ್, 68 ODIಗಳಲ್ಲಿ 77 ವಿಕೆಟ್ ಪಡೆದಿದ್ದಾರೆ. ಗಾಯದ ಕಾರಣ ಪ್ರವೀಣ್ 2011ರ ಏಕದಿನ ವಿಶ್ವಕಪ್ ಆಡಲಾಗಲಿಲ್ಲ.
Former Indian Pacer Praveen Kumar Car Accident in Meerut.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
19-08-25 12:54 pm
Mangalore Correspondent
Ullal Police Raid, Sports Winners, Mangalore:...
19-08-25 12:41 pm
ಮನೆ ಕಳ್ಳತನ ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪ...
17-08-25 10:07 pm
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm