ಬ್ರೇಕಿಂಗ್ ನ್ಯೂಸ್
15-07-23 01:01 pm Source: News18 Kannada ಕ್ರೀಡೆ
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಆತಿಥೇಯ ವಿಂಡೀಸ್ ತಂಡವನ್ನು ಭಾರತ ಒಂದು ಇನ್ನಿಂಗ್ಸ್ ಮತ್ತು 141 ರನ್ಗಳಿಂದ ಸೋಲಿಸಿತು. ಎರಡೂ ಇನ್ನಿಂಗ್ಸ್ಗಳಿಂದ 12 ವಿಕೆಟ್ಗಳನ್ನು ಕಬಳಿಸಿದ ಆರ್.ಅಶ್ವಿನ್ ಅವರ ಪ್ರದರ್ಶನ ಭಾರತಕ್ಕೆ ಭರ್ಜರಿ ಜಯ ತಂದುಕೊಟ್ಟಿತು. ಭಾರತ ತಂಡವು ಪಂದ್ಯದಲ್ಲಿ ಸ್ಪಷ್ಟವಾಗಿ ಪ್ರಾಬಲ್ಯ ಸಾಧಿಸಿತ್ತು. ಆತಿಥೇಯರು ಬ್ಯಾಟಿಂಗ್ ಮತ್ತು ಬೌಲಿಂಗ್ನಲ್ಲಿ ಭಾರತಕ್ಕೆ ಸವಾಲೊಡ್ಡುವ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ವೆಸ್ಟ್ ಇಂಡೀಸ್ ತಂಡ ಏಕದಿನ ವಿಶ್ವಕಪ್ಗೆ ಅರ್ಹತೆ ಪಡೆಯಲು ಸಾಧ್ಯವಾಗದ ನಿರಾಸೆಯಿಂದ ಮುಕ್ತವಾಗಿಲ್ಲ ಎಂಬುದನ್ನು ಪಂದ್ಯದ ಫಲಿತಾಂಶ ಸಾಬೀತುಪಡಿಸಿದೆ.
ಆದರೆ ಈ ಪಂದ್ಯದ ವೇಳೆ ವೈರಲ್ ಆಗುತ್ತಿರುವುದು ನಾಯಕ ರೋಹಿತ್ ಶರ್ಮಾ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಇಶಾನ್ ಕಿಶನ್ ವಿರುದ್ಧ ಸಿಟ್ಟಾದ ವಿಚಾರ. ಟೆಸ್ಟ್ಗೆ ಪದಾರ್ಪಣೆ ಮಾಡಿದ ಇಶಾನ್ ಕಿಶನ್ ತಮ್ಮ ಮೊದಲ ರನ್ ಗಳಿಸಲು 20 ಎಸೆತಗಳನ್ನು ತೆಗೆದುಕೊಂಡರು, ಇದು ರೋಹಿತ್ ಶರ್ಮಾ ಕೋಪಕ್ಕೆ ಕಾರಣವಾಯಿತು. ಇಶಾನ್ ಕಿಶನ್ ಔಟಾದ ತಕ್ಷಣ ರೋಹಿತ್ ಶರ್ಮಾ ಭಾರತದ ಇನ್ನಿಂಗ್ಸ್ ಡಿಕ್ಲೇರ್ ಮಾಡಿದರು. ಭಾರತ ಮೊದಲ ಇನಿಂಗ್ಸ್ನಲ್ಲಿ 5 ವಿಕೆಟ್ಗೆ 421 ರನ್ ಗಳಿಸಿತ್ತು. ಭಾರತ ಮೊದಲ ಇನ್ನಿಂಗ್ಸ್ನಲ್ಲಿ 271 ರನ್ಗಳ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಯಿತು. ಎರಡನೇ ಇನ್ನಿಂಗ್ಸ್ನಲ್ಲಿ ಭಾರತ ವೆಸ್ಟ್ ಇಂಡೀಸ್ ತಂಡವನ್ನು 130 ರನ್ಗಳಿಗೆ ಆಲೌಟ್ ಮಾಡಿ ಭರ್ಜರಿ ಜಯ ಸಾಧಿಸಿತು.




ಏತನ್ಮಧ್ಯೆ, ಭಾರತೀಯ ಬ್ಯಾಟ್ಸ್ಮನ್ಗಳು ಉತ್ತಮ ಸ್ಟ್ರೈಕ್ ರೇಟ್ ಕಂಡುಕೊಳ್ಳಲು ಕಷ್ಟಪಡುತ್ತಿದ್ದಾರೆ. ಎರಡನೇ ದಿನದಂದು, ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ಧ ತಮ್ಮ ಮೊದಲ ಬೌಂಡರಿ ಪಡೆಯಲು 81 ಎಸೆತಗಳನ್ನು ಎದುರಿಸಿದರು. ಆಕ್ರಮಣಕಾರಿ ಬ್ಯಾಟಿಂಗ್ಗೆ ಹೆಸರುವಾಸಿಯಾದ ಕಿಶನ್ ತಮ್ಮ ಚೊಚ್ಚಲ ಟೆಸ್ಟ್ನಲ್ಲಿ ರನ್ ಗಳಿಸಲು 20 ಎಸೆತಗಳನ್ನು ಎದುರಿಸಿದರು. ಇದು ರೋಹಿತ್ ಶರ್ಮಾ ಕೋಪಕ್ಕೆ ಕಾರಣವಾಗಿತ್ತು. ಇಶಾನ್ ಕಿಶನ್ ರನ್ ಗಳಿಸಿದ ನಂತರ ರೋಹಿತ್ ಶರ್ಮಾ ಇನ್ನಿಂಗ್ಸ್ ಡಿಕ್ಲೇರ್ ಮಾಡಲು ಯೋಜಿಸಿದ್ದರು ಎಂಬುದು ಸ್ಪಷ್ಟವಾಗಿದೆ. ಪಂದ್ಯದ ನಂತರದ ಸಮಾರಂಭದಲ್ಲಿ ರೋಹಿತ್ ಶರ್ಮಾ ಕೂಡ ಇದನ್ನು ವ್ಯಕ್ತಪಡಿಸಿದ್ದು, ಇಶಾನ್ ಕಿಶನ್ ಬೇಗ ರನ್ ಗಳಿಸಲಿ ಎಂದು ಬಯಸಿದ್ದೆ ಎಂದು ಹೇಳಿದ್ದಾರೆ.
IND vs WI 1st Test Captain Rohit Sharma is Angry with Ishan Kishan.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm