ಬ್ರೇಕಿಂಗ್ ನ್ಯೂಸ್
24-07-23 04:13 pm Source: News18 Kannada ಕ್ರೀಡೆ
ಇಂಡಿಯನ್ ಪ್ರೀಮಿಯರ್ ಲೀಗ್ 2023 (IPL 2023) ನಂತರ ಹಾರ್ದಿಕ್ ಪಾಂಡ್ಯ ಮತ್ತೆ ಮೈದಾನಕ್ಕೆ ಕಾಲಿಡಲಿಲ್ಲ. ಈ ತಿಂಗಳಾಂತ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆರಂಭವಾಗಲಿರುವ ಏಕದಿನ ಸರಣಿಯೊಂದಿಗೆ ಮತ್ತೆ ಮೈದಾನಕ್ಕಿಳಿಯಲಿದ್ದಾರೆ.
ನಂತರ ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ. ಇದರ ನಡುವೆ ಬಿಸಿಸಿಐ ಟಿ20ಯಲ್ಲಿ ಹೊಸ ನಾಯಕನ ಹುಡುಕಾಟ ಆರಂಭಿಸಿದೆ.

ಭಾರತ ಆಗಸ್ಟ್ 18 ರಿಂದ 21ರ ವರೆಗೆ ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಪ್ರವಾಸದ ವೇಳೆ ಭಾರತ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಆದರೆ ಈ ಸರಣಿಗೆ ಈವರಗೆ ತಂಡವನ್ನು ಘೋಷಣೆ ಮಾಡಿಲ್ಲ.
ಆದರೆ ಆ ಸರಣಿಯಿಂದ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲು ಬಿಸಿಸಿಐ ಚಿಂತನೆ ನಡೆಸಿದೆಯಂತೆ. ಜೊತೆಗೆ ಶುಭ್ಮನ್ ಗಿಲ್ಗೂ ವಿಶ್ರಾಂತಿ ನೀಡುವ ಯೋಜನೆ ಇದೆ ಎಂದು ವರದಿಯಾಗಿದೆ.

ಆದರೆ, ಈ ಬಗ್ಗೆ ಬಿಸಿಸಿಐ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಶೀಘ್ರದಲ್ಲೇ ಹಾರ್ದಿಕ್ ಪಾಂಡ್ಯ ಅವರೊಂದಿಗೆ ಈ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಐರ್ಲೆಂಡ್ ಪ್ರವಾಸದಲ್ಲಿ ಪಾಂಡ್ಯ ಭಾಗವಹಿಸುವುದು ಖಚಿತವಾದರೆ ಅವರೇ ನಾಯಕರಾಗಲಿದ್ದಾರೆ.
ಆದರೆ, ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ ನೊಂದಿಗೆ ಪಾಂಡ್ಯ ಜತೆಗೆ ಹಿರಿಯ ಆಟಗಾರರಿಗೂ ವಿಶ್ರಾಂತಿ ನೀಡಲು ಬಿಸಿಸಿಐ ಚಿಂತನೆ ನಡೆಸಿದೆಯಂತೆ. ಏಷ್ಯನ್ ಗೇಮ್ಸ್ ಗೆ ಆಯ್ಕೆಯಾಗಿರುವ ತಂಡದೊಂದಿಗೆ ಐರ್ಲೆಂಡ್ ಸರಣಿ ಆಡಿಸುವ ಉದ್ದೇಶ ಹೊಂದಿದೆ ಎಂದು ವರದಿಯಾಗಿದೆ.

ಅಂದಹಾಗೆ, ಐರ್ಲೆಂಡ್ ಪ್ರವಾಸದ ವೇಳೆ ರುತುರಾಜ್ ಗಾಯಕ್ವಾಡ್ ಭಾರತ ತಂಡದ ನಾಯಕರಾಗುವ ಸಾಧ್ಯತೆ ಇದೆ. ಭಾರತೀಯ ಯುವ ತಂಡ ಸೆಪ್ಟೆಂಬರ್ನಲ್ಲಿ ಏಷ್ಯನ್ ಗೇಮ್ಸ್ ಆಡಲು ಚೀನಾಕ್ಕೆ ತೆರಳಲಿದೆ. ಅವರಿಗೆ ಅಭ್ಯಾಸ ನೀಡುವ ಉದ್ದೇಶದಿಂದ ಐರ್ಲೆಂಡ್ ಸರಣಿಗೆ ಆ ತಂಡವನ್ನು ಆಯ್ಕೆ ಮಾಡಲು ಬಿಸಿಸಿಐ ಉದ್ದೇಶಿಸಿದೆ ಎಂದು ವರದಿಯಾಗಿದೆ.
Hardik Pandya rest for Ireland series and Ruturaj Gaikwad as team India captain t20 series
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm