ಬ್ರೇಕಿಂಗ್ ನ್ಯೂಸ್
03-08-23 04:09 pm Source: News18 Kannada ಕ್ರೀಡೆ
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟಿ20 ಪಂದ್ಯ ಇಂದು ಆಗಸ್ಟ್ 3 ರಂದು ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆಯಲಿದೆ. ಈಗಾಗಲೇ ಟೆಸ್ಟ್ ಹಾಗೂ ಏಕದಿನ ಸರಣಿಯನ್ನು ಟೀಂ ಇಂಡಿಯಾ ವಶಪಡಿಸಿಕೊಂಡಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ಅನುಭವಿ ಆಟಗಾರರು ಈ ಸರಣಿಯಲ್ಲಿ ಆಯ್ಕೆ ಆಗದ ಕಾರಣದಿಂದಾಗಿ 3 ಆಟಗಾರರು ಟಿ20 ಪಂದ್ಯಗಳಿಗೆ ಪದಾರ್ಪಣೆ ಮಾಡಲಿದ್ದಾರೆ.
ಮುಖೇಶ್ ಕುಮಾರ್, ತಿಲಕ್ ವರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಹೊಸ ಮುಖಗಳಾಗಿ ಟಿ20 ತಂಡವನ್ನು ಸೇರಿಕೊಂಡಿದ್ದಾರೆ. ಈಗ ಈ ಮೂವರಲ್ಲಿ ಯಾರು ಪದಾರ್ಪಣೆ ಮಾಡಲಿದ್ದಾರೆ ಎಂಬುದು ಕಾದು ನೋಡಬೇಕಿದೆ. ಒಂದು ವೇಳೆ ಹಾರ್ದಿಕ್ ಪಾಂಡ್ಯ ಯಶಸ್ವಿ ಜೈಸ್ವಾಲ್ಗೆ ಓಪನಿಂಗ್ ಮಾಡಲು ಅವಕಾಶ ನೀಡಿದರೆ, ಅವರು ಇಶಾನ್ ಕಿಶನ್ ಅಥವಾ ಶುಭಮನ್ ಗಿಲ್ ಅವರಲ್ಲಿ ಒಬ್ಬರನ್ನು ಕೂರಿಸಬೇಕು. ಮಧ್ಯಮ ಕ್ರಮಾಂಕದಲ್ಲಿ ಭಾರತವು ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ ಅವರಂತಹ ಆಟಗಾರರನ್ನು ಹೊಂದಿದ್ದು, ಅವರ ಮುಂದೆ ತಿಲಕ್ ವರ್ಮಾ ಅವರಿಗೆ ಅಷ್ಟೇನೂ ಅವಕಾಶ ಸಿಗುವುದಿಲ್ಲ.


ಟೀಂ ಇಂಡಿಯಾದ ಯುವ ಆಟಗಾರ ಮುಖೇಶ್ ಕುಮಾರ್ ಅವರ ಟೆಸ್ಟ್ ಮತ್ತು ಏಕದಿನ ಚೊಚ್ಚಲ ಪಂದ್ಯ ಅತ್ಯುತ್ತಮವಾಗಿತ್ತು. ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ 2 ವಿಕೆಟ್ ಉರುಳಿಸಿದ್ದರು. ಮೂರನೇ ಏಕದಿನ ಪಂದ್ಯದಲ್ಲಿ ಅವರು 3 ವಿಕೆಟ್ ಪಡೆದರು. ಇಂತಹ ಪರಿಸ್ಥಿತಿಯಲ್ಲಿ ಅವರು ಮೊದಲ ಟಿ20 ಆಡುವುದು ಖಚಿತ ಎನಿಸುತ್ತಿದೆ.

![,[object Object], ಇಶಾನ್ ಕಿಶನ್, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ತಿಲಕ್ ವರ್ಮಾ/ಯಶಸ್ವಿ ಜೈಸ್ವಾಲ್, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಅರ್ಶ್ದೀಪ್ ಸಿಂಗ್ ಮತ್ತು ಮುಖೇಶ್ ಕುಮಾರ್.](https://images.news18.com/kannada/uploads/2023/08/1691055944_mukesh-kumar.jpeg?im=Resize,width=904,aspect=fit,type=normal)
ಟೀಂ ಇಂಡಿಯಾ ಸಂಭಾವ್ಯ ತಂಡ: ಇಶಾನ್ ಕಿಶನ್, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ತಿಲಕ್ ವರ್ಮಾ/ಯಶಸ್ವಿ ಜೈಸ್ವಾಲ್, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಅರ್ಶ್ದೀಪ್ ಸಿಂಗ್ ಮತ್ತು ಮುಖೇಶ್ ಕುಮಾರ್.
ವೆಸ್ಟ್ ಇಂಡೀಸ್ ಸಂಭಾವ್ಯ ತಂಡ: ಕೈಲ್ ಮೇಯರ್ಸ್, ಜಾನ್ಸನ್ ಚಾರ್ಲ್ಸ್, ನಿಕೋಲಸ್ ಪೂರನ್, ಶಾಯ್ ಹೋಪ್, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ಜೇಸನ್ ಹೋಲ್ಡರ್, ಅಕಿಲ್ ಹೊಸೈನ್, ಅಲ್ಜಾರಿ ಜೋಸೆಫ್, ಒಬೆಡ್ ಮೆಕಾಯ್, ಓಶನ್ ಥಾಮಸ್.
IND vs WI these 3 Players Ready for T20 International Debut.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm