ಬ್ರೇಕಿಂಗ್ ನ್ಯೂಸ್
07-08-23 02:34 pm Source: News18 Kannada ಕ್ರೀಡೆ
ಭಾರತ ಕ್ರಿಕೆಟ್ ತಂಡ ಏಷ್ಯಾ ಕಪ್ 2023 ಗಾಗಿ ತನ್ನ ತಯಾರಿಯನ್ನು ಪ್ರಾರಂಭಿಸಿದೆ. ಆಗಸ್ಟ್ 24 ರಿಂದ 29ರ ವರೆಗೆ ಎನ್ಸಿಎಯಲ್ಲಿ ಶಿಬಿರವನ್ನು ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ. ಜಸ್ಪ್ರೀತ್ ಬುಮ್ರಾ, ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಅವರಂತಹ ಆಟಗಾರರನ್ನು ಶಿಬಿರದಲ್ಲಿ ಸೇರಿಸಿಕೊಳ್ಳಲಿದೆ ಎಂದು ವರದಿಯಾಗಿದೆ. ಬುಮ್ರಾ ಗಾಯದಿಂದ ಚೇತರಿಸಿಕೊಂಡಿದ್ದರೆ, ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಇನ್ನೂ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಈ ಎಲ್ಲಾ ಆಟಗಾರರಿಗೆ ಎನ್ಸಿಎ ತಲುಪಲು ಸೂಚನೆ ನೀಡಲಾಗಿದೆ. ಸಂಜು ಸ್ಯಾಮ್ಸನ್ ಏಷ್ಯಾಕಪ್ಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದರೆ, ನಂತರ ಅವರು ಕೊನೆಯ ಎರಡು ದಿನಗಳ ಈ ಶಿಬಿರವನ್ನು ಸೇರಿಕೊಳ್ಳಬಹುದು.
ವಿಂಡೀಸ್ ಪ್ರವಾಸದ ನಂತರ ಟೀಂ ಇಂಡಿಯಾದ ಪ್ರಮುಖ ಆಟಗಾರರು ತವರಿಗೆ ವಾಪಸಾಗಿ ಏಷ್ಯಾಕಪ್ ತಯಾರಿ ಆರಂಭಿಸಿದರೆ, ಟೀಂ ಇಂಡಿಯಾದ ಇನ್ನೊಂದು ತಂಡ ಐರ್ಲೆಂಡ್ ಗೆ ಹಾರಲಿದೆ. ಭಾರತ ತಂಡವು ಐರ್ಲೆಂಡ್ನಲ್ಲಿ 3 ಪಂದ್ಯಗಳ T20 ಸರಣಿಯನ್ನು ಆಡಬೇಕಾಗಿದೆ. ಸರಣಿಯ ಮೊದಲ ಟಿ20 ಪಂದ್ಯ ಆಗಸ್ಟ್ 18 ರಂದು ನಡೆಯಲಿದೆ. ಜಸ್ಪ್ರೀತ್ ಬುಮ್ರಾ ಅವರು ಐರ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಐಪಿಎಲ್ ಫ್ರಾಂಚೈಸಿ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಕೂಡ ಐರ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ಜೊತೆಗಿರಲಿದ್ದಾರೆ.


ಜಸ್ಪ್ರೀತ್ ಬುಮ್ರಾ ಏಷ್ಯಾಕಪ್ಗೆ ಟೀಮ್ ಇಂಡಿಯಾವನ್ನು ಸೇರುವುದು ಖಚಿತವಾಗಿದೆ ಏಕೆಂದರೆ ಅದಕ್ಕೂ ಮೊದಲು ಅವರು ಐರ್ಲೆಂಡ್ ಪ್ರವಾಸದಲ್ಲಿ 3 ಟಿ20 ಪಂದ್ಯಗಳನ್ನು ಆಡಲಿದ್ದರು. ಈ ಮೂಲಕ ಬುಮ್ರಾ ಅವರ ಫಿಟ್ನೆಸ್ನ ಮೌಲ್ಯಮಾಪನವೂ ನಡೆಯಲಿದೆ. ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಕೂಡ ಏಷ್ಯಾಕಪ್ನಲ್ಲಿ ಪುನರಾಗಮನ ಮಾಡಬಹುದು. ಆದಾಗ್ಯೂ, ಅವರ ಗಾಯದ ಸ್ಥಿತಿಯ ಬಗ್ಗೆ ಇನ್ನೂ ಏನೂ ಸ್ಪಷ್ಟತೆ ದೊರಕಿಲ್ಲ. ಬಿಸಿಸಿಐ ಮೂಲಗಳ ಪ್ರಕಾರ ಏಷ್ಯಾಕಪ್ ತಂಡಕ್ಕಾಗಿ ಶಿಬಿರ ಆಯೋಜಿಸಲಾಗುತ್ತಿದೆ.


ವೆಸ್ಟ್ ಇಂಡೀಸ್ನಿಂದ ವಾಪಸಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇಬ್ಬರೂ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. ಜೊತೆಗೆ ಎರಡು ದಿನಗಳ ವಿರಾಮದ ನಂತರ ಬುಮ್ರಾ ಕೂಡ ಶಿಬಿರ ಸೇರಲಿದ್ದಾರೆ. ಏಷ್ಯಾಕಪ್ನಲ್ಲಿ ಟೀಂ ಇಂಡಿಯಾ ತನ್ನ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಲಿದೆ. ಏಷ್ಯಾದ 6 ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸುತ್ತಿವೆ. ಭಾರತ ತಂಡವು ಪಾಕಿಸ್ತಾನಕ್ಕೆ ಹೋಗಲು ನಿರಾಕರಿಸಿತ್ತು. ಹೀಗಾಗಿಭಾರತದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿವೆ. ಏಷ್ಯಾಕಪ್ ಅನ್ನು ಏಕದಿನ ಮಾದರಿಯಲ್ಲಿ ಆಯೋಜಿಸಲಾಗುವುದು. ಈ ಟೂರ್ನಿಯಲ್ಲಿ ಒಟ್ಟು 13 ಪಂದ್ಯಗಳು ನಡೆಯಲಿವೆ. ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 3:00 ರಿಂದ ನಡೆಯಲಿವೆ.
Asia Cup 2023 Virat Kohli to Rohit Camp at NCA Bengaluru on 24th to 29 Aug.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 05:28 pm
HK News Desk
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm