ಬ್ರೇಕಿಂಗ್ ನ್ಯೂಸ್
19-08-23 01:41 pm Source: News18 Kannada ಕ್ರೀಡೆ
ಕಳೆದ ಹಲವು ವರ್ಷಗಳಿಂದ ಐಸಿಸಿ ಟ್ರೋಫಿಯ ಬರ ನೀಗಿಸಲು ಟೀಂ ಇಂಡಿಯಾ ಹರಸಾಹಸ ಪಡುತ್ತಿದೆ. ಈ ಬಾರಿ ಭಾರತ ತಂಡಕ್ಕೆ ಗೋಲ್ಡನ್ ಅವಕಾಶವಿದೆ ಏಕೆಂದರೆ ವಿಶ್ವಕಪ್ 2023 ಅನ್ನು ಭಾರತ ಮಾತ್ರ ಆಯೋಜಿಸುತ್ತದೆ. ಆದರೆ ಅದಕ್ಕೂ ಮುನ್ನ ಟೀಂ ಇಂಡಿಯಾಗೆ ಏಷ್ಯಾಕಪ್ ಆಡಲಿದೆ. ಏಷ್ಯಾ ಕಪ್ಗೂ ಮುನ್ನ ಭಾರತ ತಂಡಕ್ಕೆ ಗುಡ್ ನ್ಯೂಸ್ ಸಿಕ್ಕಿದ್ದು, ಸ್ಟಾರ್ ಆಟಗಾರರು ತಂಡಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಪಟ್ಟಿಯಲ್ಲಿ ಮೊದಲ ಹೆಸರು ಸ್ಟಾರ್ ಬ್ಯಾಟ್ಸ್ಮನ್ ಕೆಎಲ್ ರಾಹುಲ್ ಅವರದ್ದು, ಆದರೆ ಅವರು ಕೆಲವು ತಿಂಗಳುಗಳಿಂದ ಕ್ರಿಕೆಟ್ನಿಂದ ದೂರವಿದ್ದರು.
ಕೆಎಲ್ ರಾಹುಲ್ ಕಳೆದ ವರ್ಷದಿಂದ ಎಲ್ಲಾ ಫಾರ್ಮೆಟ್ನಲ್ಲಿ ತಮ್ಮ ಕಳಪೆ ಫಾರ್ಮ್ನೊಂದಿಗೆ ಹೋರಾಡುತ್ತಿದ್ದರು. ಐಪಿಎಲ್ನಲ್ಲಿ ಲಕ್ನೋ ತಂಡದ ನಾಯಕರಾಗಿದ್ದಾಗಲೂ ಅವರು ಫ್ಲಾಪ್ ಉತ್ತಮವಾಗಿ ಕಾಣಿಸಿಕೊಳ್ಳಲಿಲ್ಲ. ಕಳಪೆ ಫಾರ್ಮ್ನಿಂದಾಗಿ ರಾಹುಲ್ ಹಲವು ಟೀಕೆಗಳನ್ನು ಎದುರಿಸಿದರು. ಇದಾದ ನಂತರವೂ ದುರದೃಷ್ಟವಶಾತ್ ಅವರು ಐಪಿಎಲ್ನಲ್ಲಿ ಮಾರಣಾಂತಿಕ ಗಾಯಕ್ಕೆ ತುತ್ತಾದರು. ಐಪಿಎಲ್ನಲ್ಲಿ ಮೊಣಕಾಲಿನ ಗಾಯಕ್ಕೆ ಒಳಗಾದ ರಾಹುಲ್ ನಂತರ ಇಡೀ ಋತುವಿನಿಂದ ಹೊರಗುಳಿದಿದ್ದರು. ಇದಾದ ಬಳಿಕ ಗಾಯದ ಸಮಸ್ಯೆಯಿಂದಾಗಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ನಿಂದಲೂ ಹೊರಗುಳಿದಿದ್ದರು.
ಆದರೆ ಇದೀಗ ವಿಶ್ವಕಪ್ ಹಾಗೂ ಏಷ್ಯಾಕಪ್ ಗೂ ಮುನ್ನ ರಾಹುಲ್ ಕಡೆಯಿಂದ ಶುಭ ಸುದ್ದಿಯೊಂದು ಬಂದಿದೆ. ಅವರು ಏಷ್ಯಾಕಪ್ನಲ್ಲಿ ಪುನರಾಗಮನ ಮಾಡಲಿದ್ದಾರೆ ಎಂದು ವರದಿಯಾಗಿದ್ದು, ತಂಡವನ್ನು ಸೇರಿಕೊಳ್ಳಲಿದ್ದಾರೆ. ಪಟ್ಟಿಯಲ್ಲಿ ಎರಡನೇ ಹೆಸರು ಜಸ್ಪ್ರೀತ್ ಬುಮ್ರಾ ಅವರದ್ದು. ಬುಮ್ರಾ ತಮ್ಮ ಮಾರಕ ಬೌಲಿಂಗ್ ಮೂಲಕ ಈಗಾಗಲೇ ಐರ್ಲೆಂಡ್ ಪ್ರವಾಸದ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಬುಮ್ರಾ ಟೀಂ ಇಂಡಿಯಾ ನಾಯಕರಾಗಿದ್ದಾರೆ. ಏಷ್ಯಾಕಪ್ಗೆ ಕೊಡುಗೆ ನೀಡಲು ಅವರು ಸಂಪೂರ್ಣ ಫಿಟ್ ಆಗಿದ್ದಾರೆ.
ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಅನೇಕ ಸಮಸ್ಯೆಗಳನ್ನು ಅನುಭವಿಸಿತು. ಬುಮ್ರಾ ಇಲ್ಲದೆ ಭಾರತ ತಂಡ ಟಿ20 ವಿಶ್ವಕಪ್, ಬಾರ್ಡರ್ ಗವಾಸ್ಕರ್ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ನಲ್ಲಿ ಎಡವಿದೆ. ಕೆಲವೊಮ್ಮೆ ಬುಮ್ರಾ ಡೆತ್ ಓವರ್ಗಳಲ್ಲಿ ಭಾರತದ ಪ್ಲಸ್ ಪಾಯಿಂಟ್ ಆಗಿದ್ದಾರೆ. ಐರ್ಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಬುಮ್ರಾ ಆಸ್ಟ್ರೇಲಿಯಾ ವಿರುದ್ಧ ಕೊನೆಯ ಬಾರಿ ಬೌಲಿಂಗ್ ಮಾಡಿದ್ದರು. ಆದರೆ ಇಲ್ಲಿ ಬೆನ್ನು ನೋವಿನಿಂದಾಗಿ ಕ್ರಿಕೆಟ್ನಿಂದ ದೂರ ಉಳಿದಿದ್ದರು. ಅವರ ವಾಪಸಾತಿಗಾಗಿ ಎಲ್ಲರೂ ಹಲವು ತಿಂಗಳುಗಳಿಂದ ಕಾಯುತ್ತಿದ್ದರು. ಇದೀಗ ಮೆಗಾ ಟೂರ್ನಮೆಂಟ್ ಆರಂಭಕ್ಕೂ ಮುನ್ನ ಅವರ ವಾಪಸ್ಸಾತಿ ಅಭಿಮಾನಿಗಳಿಗೆ ಸಂತಸ ತಂದಿದೆ.
KL Rahul and Jasprit Bumrah Comeback before Asia Cup and ICC World Cup 2023.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm