ಬ್ರೇಕಿಂಗ್ ನ್ಯೂಸ್
24-08-23 02:47 pm Source: News18 Kannada ಕ್ರೀಡೆ
ಏಕದಿನ ವಿಶ್ವಕಪ್ 2023ಗೆ (ODI World 2023) ಹೆಚ್ಚು ದಿನಗಳು ಉಳಿದಿಲ್ಲ. ಅಕ್ಟೋಬರ್ 5 ರಿಂದ ಭಾರತದಲ್ಲಿ ಏಕದಿನ ವಿಶ್ವಕಪ್ ಅದ್ಧೂರಿಯಾಗಿ ಆರಂಭವಾಗಲಿದೆ. ಸೆಪ್ಟೆಂಬರ್ 19ರಂದು ಫೈನಲ್ನೊಂದಿಗೆ ಪಂದ್ಯಾವಳಿ ಕೊನೆಗೊಳ್ಳಲಿದೆ. ಏಕದಿನ ವಿಶ್ವಕಪ್ನ ವೇಳಾಪಟ್ಟಿ ಈಗಾಗಲೇ ಬಿಡುಗಡೆಯಾಗಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಡಲಿದೆ.
ಅಕ್ಟೋಬರ್ 14 ರಂದು ಅಹಮದಾಬಾದ್ನಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಟೂರ್ನಿಯ ಪ್ರಮುಖ ಅಂಶವಾಗಿದೆ. ಈ ಪಂದ್ಯ ಅಕ್ಟೋಬರ್ 15 ರಂದು ನಡೆಯಬೇಕಿದ್ದರೂ, ಭದ್ರತಾ ಕಾರಣಗಳಿಂದ ಅದನ್ನು ಅಕ್ಟೋಬರ್ 14 ಕ್ಕೆ ಬದಲಾಯಿಸಲಾಯಿತು. ಇತ್ತೀಚೆಗೆ, ಐಸಿಸಿ ಅಭ್ಯಾಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯಾಸ ಪಂದ್ಯಗಳು ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 3 ರವರೆಗೆ ನಡೆಯಲಿವೆ. ಟೂರ್ನಿಯಲ್ಲಿ ಭಾಗವಹಿಸುವ 10 ತಂಡಗಳು ಎರಡು ಅಭ್ಯಾಸ ಪಂದ್ಯಗಳನ್ನೂ ಆಡಲಿವೆ. ಗುವಾಹಟಿ ಮತ್ತು ತಿರುವನಂತಪುರಂ ಈ ಪಂದ್ಯಗಳಿಗೆ ವೇದಿಕೆಯಾಗಲಿದೆ.


ಭಾರತ ತನ್ನ ಅಭ್ಯಾಸ ಪಂದ್ಯಗಳನ್ನು ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನೆದರ್ಲೆಂಡ್ ವಿರುದ್ಧ ಆಡಲಿದೆ. ಭಾರತ ಸೆಪ್ಟೆಂಬರ್ 30 ರಂದು ಗುವಾಹಟಿಯಲ್ಲಿ ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಆಡಲಿದೆ. ನಂತರ, ಅಕ್ಟೋಬರ್ 3 ರಂದು ತಿರುವನಂತಪುರಂನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಭಾರತ ಪಂದ್ಯವನ್ನು ಆಡಲಿದೆ. ಪಾಕಿಸ್ತಾನ ನ್ಯೂಜಿಲೆಂಡ್ (ಸೆಪ್ಟೆಂಬರ್ 29) ಮತ್ತು ಆಸ್ಟ್ರೇಲಿಯಾ (ಅಕ್ಟೋಬರ್ 3) ವಿರುದ್ಧ ಅಭ್ಯಾಸ ಪಂದ್ಯಗಳನ್ನು ಆಡಲಿದೆ.


ಅಭ್ಯಾಸ ಪಂದ್ಯಗಳು ಹಗಲು ರಾತ್ರಿ ಮಾದರಿಯಲ್ಲಿ ನಡೆಯಲಿವೆ. ಎಲ್ಲಾ ಪಂದ್ಯಗಳೂ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿವೆ. ತಂಡದ 15 ಆಟಗಾರರು ಅಭ್ಯಾಸ ಪಂದ್ಯದಲ್ಲಿ ಬೌಲಿಂಗ್ ಮತ್ತು ಬ್ಯಾಟಿಂಗ್ ಮಾಡುವ ಅವಕಾಶವನ್ನು ಹೊಂದಿರುತ್ತಾರೆ.
ICC ODI World Cup 2023 Warm ups Fixture India Plays Against England and Netherlands.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm