ಬ್ರೇಕಿಂಗ್ ನ್ಯೂಸ್
10-07-24 09:03 pm HK News Desk ಕ್ರೀಡೆ
ಹರಾರೆ, ಜುಲೈ 10: ಸಂಘಟಿತ ಆಟದ ಪ್ರದರ್ಶನ ನೀಡಿದ ಭಾರತ ತಂಡ ಜಿಂಬಾಬ್ವೆ ವಿರುದ್ಧದ ಟಿ 20 ಸರಣಿಯ ಮೂರನೇ ಪಂದ್ಯದಲ್ಲಿ 23 ರನ್ ಅಂತರದ ಗೆಲುವು ಸಾಧಿಸಿದ್ದು ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಪಡೆದಿದೆ.
ಹರಾರೆಯಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಯುವ ಭಾರತ ತಂಡಕ್ಕೆ ನಾಯಕ ಶುಭಮನ್ ಗಿಲ್(66, 49 ಎಸೆತ, 7x4, 3x6) ಮತ್ತು ಯಶಸ್ವಿ ಜೈಸ್ವಾಲ್(36, 27 ಎಸೆತ, 4x4, 2x6) ಭರ್ಜರಿ ಆರಂಭವೊದಗಿಸಿದರು. ಮೂರನೇ ಕ್ರಮಾಂಕದಲ್ಲಿ ಆಡಲಿಳಿದ ಕಳೆದ ಪಂದ್ಯದ ಹೀರೋ ಅಭಿಷೇಕ್ ಶರ್ಮ(10) ಬೇಗನೆ ವಾಪಸಾದರು. ಮೂರನೇ ವಿಕೆಟ್ ಗೆ ಜೊತೆಯಾದ ಗಿಲ್ ಮತ್ತು ಋತುರಾಜ್ ಗಾಯಕ್ವಾಡ್(49, 28 ಎಸೆತ, 4x4, 3x6) 72 ರನ್ ಸೇರಿಸಿ ತಂಡವನ್ನು ಉತ್ತಮ ಮೊತ್ತದೆಡೆಗೆ ಕೊಂಡೊಯ್ದರು. ಅಂತಿಮವಾಗಿ ಭಾರತ 4 ವಿಕೆಟ್ ಗೆ 182 ರನ್ ಸೇರಿಸಿತು.
ಗುರಿ ಬೆನ್ನಟ್ಟಿದ ಜಿಂಬಾಬ್ವೆ ಆರಂಭದಲ್ಲೇ ಆಘಾತ ಅನುಭವಿಸಿತು. ಭಾರತದ ಯುವ ಪಡೆಯ ಬೌಲಿಂಗ್ ದಾಳಿಯ ಮುಂದೆ ದೊಡ್ಡ ಜೊತೆಯಾಟ ಆಡುವಲ್ಲಿ ವಿಫಲವಾದ ಜಿಂಬಾಬ್ವೆ 6 ವಿಕೆಟ್ ಗೆ 159 ರನ್ ಗಳಿಸಲಷ್ಟೇ ಶಕ್ತವಾಗಿ ಪರಾಜಯ ಒಪ್ಪಿಕೊಂಡಿತು. 15ಕ್ಕೆ 3 ವಿಕೆಟ್ ಕಬಳಿಸಿದ ವಾಷಿಂಗ್ಟನ್ ಸುಂದರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಸಂಕ್ಷಿಪ್ತ ಸ್ಕೋರ್ ಭಾರತ 182/4(ಗಿಲ್ 66, ಋತುರಾಜ್ 49, ಜೈಸ್ವಾಲ್ 36, ಸಂಜು ಸ್ಯಾಮ್ಸನ್ 12*, ಸಿಕಂದರ್ ರಜಾ 24/2, ಮುಝರ್ಬಾನಿ 25/2)
ಜಿಂಬಾಬ್ವೆ 159/6(ಮೈಯರ್ಸ್ 65*, ಮಡಾಂಡೆ 37, ಮಸಕಜ 18* ಸುಂದರ್ 15/3, ಆವೇಶ್ ಖಾನ್ 39/2)
India captain Shubman Gill regained his form with a half-century as the tourists beat Zimbabwe by 23 runs Wednesday in the third Twenty20.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm