ಬ್ರೇಕಿಂಗ್ ನ್ಯೂಸ್
08-12-20 04:23 pm Source: MYKHEL ಕ್ರೀಡೆ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಅಂತಿಮ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲಿಗೆ ಬ್ಯಾಟಿಂಗ್ ನಡೆಸಿದ್ದು ಭಾರತಕ್ಕೆ ಸವಾಲಿನ ಗುರಿಯನ್ನು ನೀಡಿದೆ. ಆರಂಭಿಕ ಆಟಗಾರ ಮ್ಯಾಥ್ಯೂ ವೇಡ್ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ಭರ್ಜರಿ ಪ್ರದರ್ಶನದಿಂದ ಆಸ್ಟ್ರೇಲಿಯಾ 5 ವಿಕೆಟ್ ಕಳೆದುಕೊಂಡು 186ರನ್ ಗಳಿಸಿದೆ.
ಆಸ್ಟ್ರೇಲಿಯಾ ತಂಡದ ಪರವಾಗಿ ಮ್ಯಾಥ್ಯೂ ವೇಡ್ ಸತತ ಎರಡನೇ ಪಂದ್ಯದಲ್ಲಿ ಅರ್ಧ ಶತಕದ ಪ್ರದರ್ಶನವನ್ನು ನೀಡಿದ್ದಾರೆ. ಆರಂಭದಿಂದಲೇ ಭರ್ಜರಿ ಹೊಡೆತಕ್ಕೆ ಮುಂದಾದ ವೇಡ್ ಆಸಿಸ್ ಇನ್ನಿಂಗ್ಸ್ನ ಕಡೇ ಹಂತದಲ್ಲಿ ವಿಕೆಟ್ ಒಪ್ಪಿಸಿ ಹೊರನಡೆದರು. ಈ ಸಂದರ್ಭದಲ್ಲಿ 53 ಎಸೆತಗಳನ್ನು ಎದುರಿಸಿ 80 ರನ್ ಗಳ ಕಾಣಿಗೆ ನೀಡಿದ್ದಾರೆ. ಇದರಲ್ಲಿ 7 ಬೌಂಡರಿ ಹಾಗೂ 2 ಸಿಕ್ಸರ್ ಒಳಗೊಂಡಿತ್ತು.

ಆಸಿಸ್ ತಂಡದ ಪರವಾಗಿ ನಾಯಕ ಆರೋನ್ ಫಿಂಚ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಹೊರನಡೆದರು. ಬಳಿಕ ಬಂದ ಸ್ಟೀವ್ ಸ್ಮಿತ್ ಕೂಡ 24 ರನ್ಗಳಿಗೆ ಔಟಾದರು. ಆದರೆ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಮತ್ತೊಂದು ಅದ್ಭುತ ಆಟವನ್ನು ಭಾರತದ ವಿರುದ್ಧ ಪ್ರದರ್ಶಿಸಿದ್ದಾರೆ. ಮೂರನೇ ಟಿ20 ಪಂದ್ಯದಲ್ಲಿ ಮ್ಯಾಕ್ಸ್ವೆಲ್ ಅರ್ಧ ಶತಕವನ್ನು ಬಾರಿಸಿದರು. 36 ಎಸೆತ ಎದುರಿಸಿದ ಮ್ಯಾಕ್ಸ್ವೆಲ್ 54 ರನ್ ಬಾರಿಸಿದರು. ಈ ಮೂಲಕ ತಂಡದ ದೊಡ್ಡ ಮೊತ್ತ ಗಳಿಸಲು ಕಾರಣರಾದರು. ಮೂರು ಬೌಂಡರಿ ಹಾಗೂ ಮೂರು ಸಿಕ್ಸರ್ ಮ್ಯಾಕ್ಸ್ವೆಲ್ ಬ್ಯಾಟ್ನಿಂದ ಸಿಡಿದಿದೆ.

ಟೀಮ್ ಇಂಡಿಯಾ ಪರವಾಗಿ ವಾಶಿಂಗ್ಟನ್ ಸುಂದರ್ 2 ವಿಕೆಟ್ ಕಿತ್ತು ಮಿಂಚಿದ್ದಾರೆ. ಉಳಿದಂತೆ ಟಿ ನಟರಾಜನ್ ಹಾಗೂ ಶಾರ್ದೂಲ್ ಟಾಕೂರ್ ತಲಾ ಒಂದು ವಿಕೆಟ್ ಪಡೆದರು. ಮೂರನೇ ಟಿ20 ಪಂದ್ಯದಲ್ಲೂ ಭಾರತ ಕೆಲ ಜೀವದಾನವನ್ನು ಆಸ್ಟ್ರೇಲಿಯಾ ದಾಂಡಿಗರಿಗೆ ನೀಡಿದೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm