ಬ್ರೇಕಿಂಗ್ ನ್ಯೂಸ್
10-12-20 01:02 pm Source: MYKHEL Sadashiva ಕ್ರೀಡೆ
ಸಿಡ್ನಿ, ಡಿ.10: ಭಾರತ-ಆಸ್ಟ್ರೇಲಿಯಾ ನಡುವಿನ ನಿಯಮಿತ ಓವರ್ಗಳ ಕ್ರಿಕೆಟ್ ಮುಕ್ತಾಯಗೊಂಡಿದೆ. ಮುಂದೆ ಸಾಂಪ್ರದಾಯಿಕ ಕ್ರಿಕೆಟ್ ಮಾದರಿಯಾದ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ನೂತನ ಜೆರ್ಸಿಯೊಂದಿಗೆ ಮೈದಾನಕ್ಕಿಳಿಯಲಿದೆ. ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಭಾರತ ತಂಡಕ್ಕೆ ಹೊಸ ವಿನ್ಯಾಸದ ಕಿಟ್ ನೀಡಿದೆ.
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿವೆ. ನಾಲ್ಕು ಪಂದ್ಯಗಳಲ್ಲಿ ಒಂದು ಡೇ-ನೈಟ್ ಟೆಸ್ಟ್ ಕೂಡ ಸೇರಿದೆ. ಬಹು ನಿರೀಕ್ಷಿತ ಈ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಡಿಸೆಂಬರ್ 17ರಿಂದ ಆರಂಭಗೊಳ್ಳಲಿದೆ. ಭಾರತದ ನೂತನ ಟೆಸ್ಟ್ ಜೆರ್ಸಿಯಲ್ಲಿ ಪ್ರಮುಖ ಪ್ರಾಯೋಜಕರ ಹೆಸರು/ಲೋಗೋ ಶರ್ಟ್ ಮಧ್ಯದಲ್ಲಿರಲಿದೆ ಮತ್ತು ಎದ್ದು ಕಾಣಲಿದೆ. ಈ ಮೊದಲು ಪ್ರಧಾನ ಪ್ರಾಯೋಜಕರ ಲೋಗೋ ಜೆರ್ಸಿಯ ಬಲ ಮೇಲ್ಭಾಗದಲ್ಲಿತ್ತು. ವಿದ್ಯಾಭ್ಯಾಸ ಸಂಸ್ಥೆ ಬೈಜೂಸ್ ಸದ್ಯ ಟೀಮ್ ಇಂಡಿಯಾದ ಪ್ರಧಾನ ಪ್ರಾಯೋಜಕ. ಇನ್ನು ಕಿಟ್ ಡಿಸೈನರ್ ಸ್ಥಾನವನ್ನು ಎಂಪಿಎಲ್ ಪಡೆದುಕೊಂಡಿದೆ.
ಭಾರತ 'ಎ' ಮತ್ತು ಆಸ್ಟ್ರೇಲಿಯಾ 'ಎ' ನಡುವಿನ ಮೊದಲ ಅಭ್ಯಾಸ ಪಂದ್ಯ ಡ್ರಾದೊಂದಿಗೆ ಅಂತ್ಯಗೊಂಡಿದೆ. ಎರಡನೇ ಅಭ್ಯಾಸ ಪಂದ್ಯ ಡಿಸೆಂಬರ್ 11ರಂದು ನಡೆಯಲಿದೆ. ಟೆಸ್ಟ್ ಸರಣಿಯ ಆರಂಭಿಕ ಪಂದ್ಯದ ಬಳಿಕ ನಾಯಕ ವಿರಾಟ್ ಕೊಹ್ಲಿ ರಜೆ ಪಡೆದುಕೊಳ್ಳಲಿದ್ದಾರೆ. ತಂದೆಯಾಗುವ ನಿರೀಕ್ಷೆಯಿರುವುದರಿಂದ ಕೊಹ್ಲಿ ಈಗಾಗಲೇ ಪಿತೃತ್ವ ರಜೆ ಮಂಜೂರು ಮಾಡಿಕೊಂಡಿದ್ದಾರೆ.
This News Article is a Copy of MYKHEL
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 08:54 pm
Mangalore Correspondent
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
Unidentified Girl Body Found, Dharmasthala, R...
18-08-25 04:07 pm
19-08-25 10:30 pm
Mangalore Correspondent
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm
ಮನೆ ಕಳ್ಳತನ ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪ...
17-08-25 10:07 pm