ಬ್ರೇಕಿಂಗ್ ನ್ಯೂಸ್
10-12-20 03:14 pm Source: MYKHEL ಕ್ರೀಡೆ
ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಸೀಮಿಯ ಓವರ್ಗಳ ಸರಣಿ ಮುಕ್ತಾಯವಾಗಿದೆ. ಈ ಸರಣಿಯಲ್ಲಿ ಆಸ್ಟ್ರೇಲಿಯಾದ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಅದ್ಭುತ ಪ್ರದರಶನವನ್ನು ನೀಡಿದ್ದಾರೆ. ಏಕದಿನದ ಬಳಿಕ ಅಂತಿಮ ಟಿ20 ಪಂದ್ಯದಲ್ಲೂ ಮ್ಯಾಕ್ಸ್ವೆಲ್ ಅಬ್ಬರದ ಪ್ರದರ್ಶನ ನೀಡಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾಗಿದ್ದರು. ರಾಷ್ಟ್ರೀಯ ತಂಡದ ಪರವಾಗಿ ಮ್ಯಾಕ್ಸ್ವೆಲ್ ನೀಡಿದ ಈ ಪ್ರದರ್ಶನ ಐಪಿಎಲ್ ಅಭಿಮಾನಿಗಳನ್ನು ಕೆರಳಿಸಿದೆ. ಇದಕ್ಕೆ ಕಾರಣ ಮ್ಯಾಕ್ಸ್ವೆಲ್ ಐಪಿಎಲ್ನಲ್ಲಿ ನೀಡಿದ ಕಳಪೆ ಪ್ರದರ್ಶನ. ಆಡಿದ 13 ಪಂದ್ಯಗಳಲ್ಲಿ ಮ್ಯಾಕ್ಸ್ವೆಲ್ 100ರ ಗಡು ದಾಟಲಷ್ಟೇ ಶಕ್ತರಾಗಿದ್ದರು. ಇಡೀ ಟೂರ್ನಿಯಲ್ಲಿ ಮ್ಯಾಕ್ಸ್ವೆಲ್ ಬ್ಯಾಟ್ನಿಂದ ಒಂದೇ ಒಂದು ಸಿಕ್ಸರ್ ಸಿಡಿದಿರಲಿಲ್ಲ. ಇದಕ್ಕೆ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಕೂಡ ಹರಿಹಾಯ್ದಿದ್ದಾರೆ.
ಪಂಜಾಬ್ ತಂಡದ ಮಾಜಿ ಕೋಚ್ ಸೆಹ್ವಾಗ್
ಐಪಿಎಲ್ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಮಾಜಿ ಕೋಚ್ ಆಗಿರುವ ವಿರೇಂದ್ರ ಸೆಹ್ವಾಗ್ ಮ್ಯಾಕ್ಸ್ವೆಲ್ ಅವರನ್ನು ಹತ್ತಿರದಿಂದ ಬಲ್ಲವರಾಗಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಮ್ಯಾಕ್ಸ್ವೆಲ್ ಯಾವುದೇ ರೀತಿಯಲ್ಲೂ ಒತ್ತಡವನ್ನು ತೆಗೆದುಕೊಳ್ಳಲು ಬಯಸಿರಲಿಲ್ಲ. ಇದು ಅಂತಾರಾಷ್ಟ್ರೀಯ ಹಾಗೂ ಐಪಿಎಲ್ ಟೂರ್ನಿಯಲ್ಲಿನ ಮ್ಯಾಕ್ಸ್ವೆಲ್ ಪ್ರದರ್ಶನದ ವ್ಯತ್ಯಾಸಕ್ಕೆ ಕಾರಣ ಎಂದು ಸೆಹ್ವಾಗ್ ಹೇಳಿದ್ದಾರೆ.
ಗಾಲ್ಫ್ ಮೇಲೆ ಪ್ರಾಶಸ್ತ್ಯ
ಮುಂದುವರಿರುವು ಮಾತನಾಡಿದ ವೀರೇಂದ್ರ ಸೆಹ್ವಾಗ್ ಐಪಿಎಲ್ ಸಂದರ್ಭದಲ್ಲಿ ಮ್ಯಾಕ್ಸ್ವೆಲ್ ಕ್ರಿಕೆಟ್ಗಿಂತಲೂ ಹೆಚ್ಚಾಗಿ ಗಾಲ್ಫ್ ಕಡೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದರು. ಇದು ಆತನ ಪ್ರದರ್ಶನದ ಮೇಲೆ ಪರಿಣಾಮ ಬೀರಿತ್ತು ಎಂದು ಸೆಹ್ವಾಗ್ ಹೇಳಿಕೆಯನ್ನು ನೀಡಿದ್ದಾರೆ.
ಗಂಭೀರನಾಗಿದ್ದರೆ ಪ್ರದರ್ಶನದಲ್ಲಿ ವ್ಯಕ್ತವಾಗಬೇಕಿತ್ತು
"ಆತ ಆಟದ ಬಗ್ಗೆ ಗಂಭೀರನಾಗಿದ್ದಾನೆ ಎಂದು ನನಗೆ ಯಾವತ್ತಿಗೂ ಅನಿಸಿರಲಿಲ್ಲ. ಆತ ಐಪಿಎಲ್ಗೆ ಬಂದ ಸಂದರ್ಭದಲ್ಲಿ ಕ್ರಿಕೆಟ್ಗಿಂತಲೂ ಹೆಚ್ಚಾಗಿ ಗಾಲ್ಫ್ ಮೇಲೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದ್ದ. ಯಾಕೆಂದರೆ ನೀವು ಗಂಭೀರನಾಗಿರುತ್ತಿದ್ದರೆ ಅದು ಪ್ರದರ್ಶನದಲ್ಲಿ ಕಾಣಿಸಬೇಕಿತ್ತು" ಎಂದು ಸೆಹ್ವಾಗ್ ಹರಿಹಾಯ್ದಿದ್ದಾರೆ.
This News Article is a Copy of MYKHEL
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm