ಬ್ರೇಕಿಂಗ್ ನ್ಯೂಸ್
10-12-20 03:14 pm Source: MYKHEL ಕ್ರೀಡೆ
ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಸೀಮಿಯ ಓವರ್ಗಳ ಸರಣಿ ಮುಕ್ತಾಯವಾಗಿದೆ. ಈ ಸರಣಿಯಲ್ಲಿ ಆಸ್ಟ್ರೇಲಿಯಾದ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಅದ್ಭುತ ಪ್ರದರಶನವನ್ನು ನೀಡಿದ್ದಾರೆ. ಏಕದಿನದ ಬಳಿಕ ಅಂತಿಮ ಟಿ20 ಪಂದ್ಯದಲ್ಲೂ ಮ್ಯಾಕ್ಸ್ವೆಲ್ ಅಬ್ಬರದ ಪ್ರದರ್ಶನ ನೀಡಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾಗಿದ್ದರು. ರಾಷ್ಟ್ರೀಯ ತಂಡದ ಪರವಾಗಿ ಮ್ಯಾಕ್ಸ್ವೆಲ್ ನೀಡಿದ ಈ ಪ್ರದರ್ಶನ ಐಪಿಎಲ್ ಅಭಿಮಾನಿಗಳನ್ನು ಕೆರಳಿಸಿದೆ. ಇದಕ್ಕೆ ಕಾರಣ ಮ್ಯಾಕ್ಸ್ವೆಲ್ ಐಪಿಎಲ್ನಲ್ಲಿ ನೀಡಿದ ಕಳಪೆ ಪ್ರದರ್ಶನ. ಆಡಿದ 13 ಪಂದ್ಯಗಳಲ್ಲಿ ಮ್ಯಾಕ್ಸ್ವೆಲ್ 100ರ ಗಡು ದಾಟಲಷ್ಟೇ ಶಕ್ತರಾಗಿದ್ದರು. ಇಡೀ ಟೂರ್ನಿಯಲ್ಲಿ ಮ್ಯಾಕ್ಸ್ವೆಲ್ ಬ್ಯಾಟ್ನಿಂದ ಒಂದೇ ಒಂದು ಸಿಕ್ಸರ್ ಸಿಡಿದಿರಲಿಲ್ಲ. ಇದಕ್ಕೆ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಕೂಡ ಹರಿಹಾಯ್ದಿದ್ದಾರೆ.

ಪಂಜಾಬ್ ತಂಡದ ಮಾಜಿ ಕೋಚ್ ಸೆಹ್ವಾಗ್
ಐಪಿಎಲ್ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಮಾಜಿ ಕೋಚ್ ಆಗಿರುವ ವಿರೇಂದ್ರ ಸೆಹ್ವಾಗ್ ಮ್ಯಾಕ್ಸ್ವೆಲ್ ಅವರನ್ನು ಹತ್ತಿರದಿಂದ ಬಲ್ಲವರಾಗಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಮ್ಯಾಕ್ಸ್ವೆಲ್ ಯಾವುದೇ ರೀತಿಯಲ್ಲೂ ಒತ್ತಡವನ್ನು ತೆಗೆದುಕೊಳ್ಳಲು ಬಯಸಿರಲಿಲ್ಲ. ಇದು ಅಂತಾರಾಷ್ಟ್ರೀಯ ಹಾಗೂ ಐಪಿಎಲ್ ಟೂರ್ನಿಯಲ್ಲಿನ ಮ್ಯಾಕ್ಸ್ವೆಲ್ ಪ್ರದರ್ಶನದ ವ್ಯತ್ಯಾಸಕ್ಕೆ ಕಾರಣ ಎಂದು ಸೆಹ್ವಾಗ್ ಹೇಳಿದ್ದಾರೆ.

ಗಾಲ್ಫ್ ಮೇಲೆ ಪ್ರಾಶಸ್ತ್ಯ
ಮುಂದುವರಿರುವು ಮಾತನಾಡಿದ ವೀರೇಂದ್ರ ಸೆಹ್ವಾಗ್ ಐಪಿಎಲ್ ಸಂದರ್ಭದಲ್ಲಿ ಮ್ಯಾಕ್ಸ್ವೆಲ್ ಕ್ರಿಕೆಟ್ಗಿಂತಲೂ ಹೆಚ್ಚಾಗಿ ಗಾಲ್ಫ್ ಕಡೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದರು. ಇದು ಆತನ ಪ್ರದರ್ಶನದ ಮೇಲೆ ಪರಿಣಾಮ ಬೀರಿತ್ತು ಎಂದು ಸೆಹ್ವಾಗ್ ಹೇಳಿಕೆಯನ್ನು ನೀಡಿದ್ದಾರೆ.

ಗಂಭೀರನಾಗಿದ್ದರೆ ಪ್ರದರ್ಶನದಲ್ಲಿ ವ್ಯಕ್ತವಾಗಬೇಕಿತ್ತು
"ಆತ ಆಟದ ಬಗ್ಗೆ ಗಂಭೀರನಾಗಿದ್ದಾನೆ ಎಂದು ನನಗೆ ಯಾವತ್ತಿಗೂ ಅನಿಸಿರಲಿಲ್ಲ. ಆತ ಐಪಿಎಲ್ಗೆ ಬಂದ ಸಂದರ್ಭದಲ್ಲಿ ಕ್ರಿಕೆಟ್ಗಿಂತಲೂ ಹೆಚ್ಚಾಗಿ ಗಾಲ್ಫ್ ಮೇಲೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದ್ದ. ಯಾಕೆಂದರೆ ನೀವು ಗಂಭೀರನಾಗಿರುತ್ತಿದ್ದರೆ ಅದು ಪ್ರದರ್ಶನದಲ್ಲಿ ಕಾಣಿಸಬೇಕಿತ್ತು" ಎಂದು ಸೆಹ್ವಾಗ್ ಹರಿಹಾಯ್ದಿದ್ದಾರೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm