ಬ್ರೇಕಿಂಗ್ ನ್ಯೂಸ್
14-12-20 06:08 pm Source: MYKHEL ಕ್ರೀಡೆ
ಗೋವಾ, ಡಿಸೆಂಬರ್ 13: ಹೀರೋ ಇಂಡಿಯನ್ ಸೂಪರ್ ಲೀಗ್ ನ 26ನೇ ಪಂದ್ಯ ಗೋಲಿಲ್ಲದೆ ಡ್ರಾಗೊಂಡಿದೆ. ಚೆನ್ನೈಯಿನ್ ಎಫ್ ಸಿ ಹಾಗೂ ನಾರ್ಥ್ ಈಸ್ಟ್ ಯುನೈಟೆಡ್ ತಂಡಗಳು ಗೋಲು ಗಳಿಸುವಲ್ಲಿ ವಿಫಲವಾಗಿ ಅಂಕ ಹಂಚಿಕೊಂಡವು. ಒಂದು ಅಂಕದ ಸೇರ್ಪಡೆಯೊಂದಿಗೆ ನಾರ್ಥ್ ಈಸ್ಟ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿಯಿತು. ಆದರೆ ಚೆನ್ನೈಗೆ ಈ ರೀತಿಯ ಫಲಿತಾಂಶ ತೃಪ್ತಿ ತುರುವಂಥದ್ದಲ್ಲ. 66ನೇ ನಿಮಿಷದಲ್ಲಿ ಇಡ್ರಿಸಾ ಸಿಲ್ಲಾಗೆ ಸುಲಭವಾಗಿ ಗೋಲು ಗಳಿಸುವ ಅವಕಾಶವಿದ್ದಿತ್ತು, ಆದರೆ ಕ್ಷಿಪ್ರ ಗತಿಯಲ್ಲಿ ತೀರ್ಮಾನ ಕೈಗೊಂಡ ಕಾರಣ ಚೆಂಡು ಗೋಲ್ ಬಾಕ್ಸ್ ನಿಂದ ಹೊರ ಸಾಗಿತು.
ಗೋಲಿಲ್ಲದ ಪ್ರಥಮಾರ್ಧ: ಚೆಂಡಿನ ಮೇಲೆ ಹೆಚ್ಚು ಕಾಲ ತನ್ನ ನಿಯಂತ್ರಣವನ್ನು ಸಾಧಿಸಿ ಮೂರು ಬಾರಿ ಟಾರ್ಗೆಟ್ ಗೆ ಗುರಿ ಇಟ್ಟರೂ ಚೆನ್ನೈಯಿನ್ ತಂಡಕ್ಕೆ ಆತ್ಮವಿಶ್ವಾಸದ ಅಲೆಯಲ್ಲಿದ್ದ ನಾರ್ಥ್ ಈಸ್ಟ್ ಯುನೈಟೆಎಡ್ ವಿರುದ್ಧ ಗೋಲು ಗಳಿಸಲಾಗಲಿಲ್ಲ. ಚೆಂಡಿನ ಮೇಲೆ ಹೆಚ್ಚು ಕಾಲ ನಿಯಂತ್ರಣ ಸಾಧಿಸುವಲ್ಲಿ ವಿಫಲವಾದ ನಾರ್ಥ್ ಈಸ್ಟ್ ಕೂಡ ಎರಡು ಬಾರಿ ಟಾರ್ಗೆಟ್ ಗೆ ಗುರಿ ಇಟ್ಟಿತ್ತು ಆದರೆ ಗೋಲು ಗಳಿಸುವಲ್ಲಿ ವಿಫಲವಾಗಿತ್ತು.
ನ್ನೈಯಿನ್ ತಂಡಕ್ಕೆ ಗೋಲು ಗಳಿಸಬೇಕಾದ ಒತ್ತಡವಿದೆ. ಇತ್ತಂಡಗಳಿಗೂ 45 ನಿಮಿಷಗಳ ಆಟದಲ್ಲಿ ಉತ್ತಮವಾದ ಅವಕಾಶ ಸಿಗಲಿಲ್ಲ. ಚೆನ್ನೈಯಿನ್ ತಂಡಕ್ಕೆ ನಾರ್ಥ್ ಈಸ್ಟ್ ವಿರುದ್ಧ ಗೋಲು ಗಳಿಸಲು ಕಷ್ಟವಾಗಿದೆ ಎಂದರೆ ಮಾಜಿ ಚಾಂಪಿಯನ್ನರಲ್ಲಿ ಹೊಂದಾಣಿಕೆಯ ಕೊರತೆ ಇದೆ ಎಂದರೆ ತಪ್ಪಾಗಲಾರದು. ಏಕೆಂದರೆ ಚೆನ್ನೈ ಗೋಲು ಗಳಿಕೆಯಲ್ಲಿ ಕೇವಲ ಒಬ್ಬ ಆಟಗಾರನ ಮೇಲೆ ಅವಲಂಬಿತವಾದ ತಂಡವಲ್ಲ. ಸಮಗ್ರ ಹೋರಾಟ ನೀಡುವ ತಂಡವಾಗಿದೆ. ಆತ್ಮವಿಶ್ವಾಸದಲ್ಲಿ ನಾರ್ಥ್ ಈಸ್ಟ್: ಸೂಪರ್ ಸಂಡೆಯ ಮೊದಲ ಪಂದ್ಯದಲ್ಲಿ ಚೆನ್ನೈಯಿನ್ ಹಾಗೂ ನಾರ್ಥ್ ಈಸ್ಟ್ ತಂಡಗಳು ಮುಖಾಮುಖಿಯಾದವು. ಆಡಿರುವ ಐದು ಪಂದ್ಯಗಳಲ್ಲಿ ಎರಡು ಜಯ ಮತ್ತು ಮೂರು ಡ್ರಾ ಕಂಡಿರುವ ನಾರ್ಥ್ ಈಸ್ಟ್ ನಿಜವಾಗಿಯೂ ಚೆನ್ನೈಗಿಂತ ಬಲಿಷ್ಠವಾಗಿದೆ. ಗೆರಾರ್ಡ್ ನಸ್ ಪಡೆ ಇದುವರೆಗೂ ಎಲ್ಲಾ ವಿಭಾಗಗಳಲ್ಲೂ ಉತ್ತಮ ಪ್ರದರ್ಶನ ತೋರಿರುವುದೇ ಆಟಗಾರರಲ್ಲಿ ಆತ್ಮವಿಶ್ವಾಸ ಮೂಡಲು ಪ್ರಮುಖ ಕಾರಣವಾಗಿದೆ. ಚೆಂಡಿನ ಮೇಲೆ ನಿಯಂತ್ರಣ ಸಾಧಿಸುವಲ್ಲಿ ನಾರ್ಥ್ ಈಸ್ಟ್ ಮೇಲುಗೈ ಸಾಧಿಸಿದೆ. ಐದು ಪಂದ್ಯಗಳಲ್ಲಿ ಒಟ್ಟು 8 ಗೋಲುಗಳನ್ನು ಗಳಿಸಿರುವ ನಾರ್ಥ್ ಈಸ್ಟ್ ಅತಿ ಹೆಚ್ಚು ಗೋಲು ಗಳಿಕೆಯಲ್ಲಿ ಮುಂಬೈ ಜತೆಯಲ್ಲಿ ಸಮಬಲ ಸಾಧಿಸಿದೆ.
ಇಡ್ರಿಸಾ ಸಿಲ್ಲಾ, ಕ್ಬೆಸಿ ಅಪ್ಪಿಯ್ಯ ಮತ್ತು ಲೂಯಿಸ್ ಮಚಾಡೊ ತಂಡಕ್ಕಾಗಿ ತಲಾ ಎರಡು ಗೋಲು ಗಳಿಸಿದ್ದಾರೆ. ಹಿಂದಿನ ಎರಡು ಪಂದ್ಯಗಳಲ್ಲಿ ಸೋಲು ಕಂಡಿರುವ ಚೆನ್ನೈಯಿನ್ ಗಾಯದ ಕಾರಣ ಅನಿರುದ್ಧ್ ಥಾಪಾ ತಂಡದಲ್ಲಿ ಅನುಪಸ್ಥಿತಿ ತಂಡದ ಬಲವನ್ನು ಕುಗ್ಗಿಸುವಂತೆ ಮಾಡಿದೆ. ಈ ಪಂದ್ಯದಲ್ಲಿ ಅನಿರುದ್ಧ್ ಥಾಪಾ ಆಡುತ್ತಿರುವುದು ತಂಡದ ಮನೋಬಲವನ್ನು ಹೆಚ್ಚಿಸಿದೆ.ಋತುವಿನ ಆರಂಭವನ್ನು ಹೊರತುಪಡಿಸಿದರೆ ಚೆನ್ನೈಯಿನ್ ಆ ನಂತರ ಜಯದ ರುಚಿ ಕಂಡಿಲ್ಲ. ನಾಲ್ಕು ಪಂದ್ಯಗಳಲ್ಲಿ ತಂಡ ಮೂರು ಗೋಲುಗಳನ್ನು ಗಳಿಸಿತ್ತು, ಈಗ ತಂಡಕ್ಕೆ ಜಯದ ಅನಿವಾರ್ಯತೆ ಇದೆ.
This News Article is a Copy of MYKHEL
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 08:54 pm
Mangalore Correspondent
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
Unidentified Girl Body Found, Dharmasthala, R...
18-08-25 04:07 pm
19-08-25 10:30 pm
Mangalore Correspondent
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm
ಮನೆ ಕಳ್ಳತನ ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪ...
17-08-25 10:07 pm