ಬ್ರೇಕಿಂಗ್ ನ್ಯೂಸ್
15-12-20 03:30 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾದ ಮಾಜಿ ಆಟಗಾರ ಯುವರಾಜ್ ಸಿಂಗ್ ಮತ್ತೊಮ್ಮೆ ಸ್ಪರ್ಧಾತ್ಮಕ ಕ್ರಿಕೆಟ್ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಗಳು ಕಂಡು ಬರುತ್ತಿದೆ. ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಗೆ ಪಂಜಾಬ್ ಹೆಸರಿಸಿರುವ 30 ಸಂಭಾವ್ಯ ಆಟಗಾರರ ಪಟ್ಟಿಯಲ್ಲಿ ಯುವರಾಜ್ ಸಿಂಗ್ ಹೆಸರು ಕೂಡ ಸೇರಿಕೊಂಡಿದೆ. ಆದರೆ ಯುವರಾಜ್ ಸಿಂಗ್ ಆಡಲು ಬಿಸಿಸಿಐ ಅನುಮತಿ ಅಗತ್ಯವಾಗಿದೆ. ಯುವರಾಜ್ ಸಿಂಗ್ ಕಳೆದ ವರ್ಷ ಎಲ್ಲಾ ಮಾದರಿಯ ಕ್ರಿಕೆಟ್ನಿಂದಲೂ ನಿವೃತ್ತಿಯನ್ನು ಪಡೆದುಕೊಂಡಿದ್ದರು. ಆದರೆ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಯುವರಾಜ್ ಸಿಂಗ್ ಬಳಿ ವಿಶೇಷ ಮನವಿಯನ್ನು ಮಾಡಿಕೊಂಡಿದ್ದು ನಿವೃತ್ತಿ ವಾಪಾಸ್ ಪಡೆದು ಪಂಜಾಬ್ ಪರ ಕಣಕ್ಕಿಳಿಯಲು ಮನವಿ ಮಾಡಿಕೊಂಡಿತ್ತು.
ಬಿಸಿಸಿಐಗೆ ಯುವಿ ಪತ್ರ ಪಂಜಾಬ್ ಕ್ರಿಕೆಟ್ ಅಸೊಸಿಯೇಶನ್ನ ಮನವಿಯ ಹಿನ್ನೆಲೆಯಲ್ಲಿ ಯುವರಾಜ್ ಸಿಂಗ್ ತಮ್ಮ ನಿವೃತ್ತಿ ವಾಪಾಸ್ ಪಡೆದು ಮತ್ತೆ ದೇಶೀಯ ಕ್ರಿಕೆಟ್ನಲ್ಲಿ ಆಡಲು ಅನುಮತಿ ಕೋರಿ ಪತ್ರವನ್ನು ಬರೆದಿದ್ದಾರೆ. ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಕ್ರಿಕ್ ಬಜ್ಜೊತೆಗೆ ಈ ಬಗ್ಗೆ ಮಾತನಾಡಿದ್ದ "ಯುವರಾಜ್ ಸಿಂಗ್ ನಾನು ಈಗಾಗಲೇ ದೇಶೀಯ ಕ್ರಿಕೆಟ್ನಲ್ಲಿ ಆಡಿದ್ದೇನೆ. ಈಗ ಬಿಸಿಸಿಐ ನನಗೆ ಮತ್ತೆ ಅನುಮತಿಯನ್ನು ನೀಡಿದರೆ ಪಂಜಾಬ್ ಪರವಾಗಿ ಆಡುತ್ತೇನೆ" ಎಂದು ಹೇಳಿದ್ದರು.
ವಿದೇಶಿ ಲೀಗ್ಗಳಲ್ಲಿ ಪಾಲ್ಗೊಂಡಿರುವ ಯುವಿ ಆದರೆ ನಿವೃತ್ತಿಯನ್ನು ಪಡೆದ ಬಳಿಕ ಯುವರಾಜ್ ಸಿಂಗ್ ಕೆಲ ವಿದೇಶಿ ಕ್ರಿಕೆಟ್ ಲೀಗ್ಗಳಲ್ಲಿ ಕೂಡ ಪಾಲ್ಗೊಂಡಿದ್ದಾರೆ. ನಿವೃತ್ತಿಯ ನಂತರ ಮಾತ್ರವೇ ಭಾರತೀಯ ಆಟಗಾರರಿಗೆ ಬಿಸಿಸಿಐ ಕಡೆಯಿಂದ ಎನ್ಒಸಿ ಪಡೆದು ಈ ವಿದೇಶಿ ಲೀಗ್ಗಳಲ್ಲಿ ಪಾಲ್ಗೊಳ್ಳಲು ಅವಕಾಶವಿದ್ದು ನಿವೃತ್ತಿ ಪಡೆಯದೆ ಆಡಿದರೆ ಅವರನ್ನು ಬಿಸಿಸಿಐ ನಿಷೇಧಿಸುವ ನಿಯಮ ಬಿಸಿಸಿಐ ಹೊಂದಿದೆ. ಹೀಗಾಗಿ ಯುವರಾಜ್ ಸಿಂಗ್ ವಿಚಾರದಲ್ಲಿ ಬಿಸಿಸಿಐ ಯಾವ ನಿಲುವು ತೆಗೆದುಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.
This News Article is a Copy of MYKHEL
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 08:54 pm
Mangalore Correspondent
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
Unidentified Girl Body Found, Dharmasthala, R...
18-08-25 04:07 pm
19-08-25 09:27 pm
Bangalore Correspondent
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm
ಮನೆ ಕಳ್ಳತನ ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪ...
17-08-25 10:07 pm
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm