ಬ್ರೇಕಿಂಗ್ ನ್ಯೂಸ್
15-12-20 03:30 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾದ ಮಾಜಿ ಆಟಗಾರ ಯುವರಾಜ್ ಸಿಂಗ್ ಮತ್ತೊಮ್ಮೆ ಸ್ಪರ್ಧಾತ್ಮಕ ಕ್ರಿಕೆಟ್ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಗಳು ಕಂಡು ಬರುತ್ತಿದೆ. ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಗೆ ಪಂಜಾಬ್ ಹೆಸರಿಸಿರುವ 30 ಸಂಭಾವ್ಯ ಆಟಗಾರರ ಪಟ್ಟಿಯಲ್ಲಿ ಯುವರಾಜ್ ಸಿಂಗ್ ಹೆಸರು ಕೂಡ ಸೇರಿಕೊಂಡಿದೆ. ಆದರೆ ಯುವರಾಜ್ ಸಿಂಗ್ ಆಡಲು ಬಿಸಿಸಿಐ ಅನುಮತಿ ಅಗತ್ಯವಾಗಿದೆ. ಯುವರಾಜ್ ಸಿಂಗ್ ಕಳೆದ ವರ್ಷ ಎಲ್ಲಾ ಮಾದರಿಯ ಕ್ರಿಕೆಟ್ನಿಂದಲೂ ನಿವೃತ್ತಿಯನ್ನು ಪಡೆದುಕೊಂಡಿದ್ದರು. ಆದರೆ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಯುವರಾಜ್ ಸಿಂಗ್ ಬಳಿ ವಿಶೇಷ ಮನವಿಯನ್ನು ಮಾಡಿಕೊಂಡಿದ್ದು ನಿವೃತ್ತಿ ವಾಪಾಸ್ ಪಡೆದು ಪಂಜಾಬ್ ಪರ ಕಣಕ್ಕಿಳಿಯಲು ಮನವಿ ಮಾಡಿಕೊಂಡಿತ್ತು.

ಬಿಸಿಸಿಐಗೆ ಯುವಿ ಪತ್ರ ಪಂಜಾಬ್ ಕ್ರಿಕೆಟ್ ಅಸೊಸಿಯೇಶನ್ನ ಮನವಿಯ ಹಿನ್ನೆಲೆಯಲ್ಲಿ ಯುವರಾಜ್ ಸಿಂಗ್ ತಮ್ಮ ನಿವೃತ್ತಿ ವಾಪಾಸ್ ಪಡೆದು ಮತ್ತೆ ದೇಶೀಯ ಕ್ರಿಕೆಟ್ನಲ್ಲಿ ಆಡಲು ಅನುಮತಿ ಕೋರಿ ಪತ್ರವನ್ನು ಬರೆದಿದ್ದಾರೆ. ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಕ್ರಿಕ್ ಬಜ್ಜೊತೆಗೆ ಈ ಬಗ್ಗೆ ಮಾತನಾಡಿದ್ದ "ಯುವರಾಜ್ ಸಿಂಗ್ ನಾನು ಈಗಾಗಲೇ ದೇಶೀಯ ಕ್ರಿಕೆಟ್ನಲ್ಲಿ ಆಡಿದ್ದೇನೆ. ಈಗ ಬಿಸಿಸಿಐ ನನಗೆ ಮತ್ತೆ ಅನುಮತಿಯನ್ನು ನೀಡಿದರೆ ಪಂಜಾಬ್ ಪರವಾಗಿ ಆಡುತ್ತೇನೆ" ಎಂದು ಹೇಳಿದ್ದರು.

ವಿದೇಶಿ ಲೀಗ್ಗಳಲ್ಲಿ ಪಾಲ್ಗೊಂಡಿರುವ ಯುವಿ ಆದರೆ ನಿವೃತ್ತಿಯನ್ನು ಪಡೆದ ಬಳಿಕ ಯುವರಾಜ್ ಸಿಂಗ್ ಕೆಲ ವಿದೇಶಿ ಕ್ರಿಕೆಟ್ ಲೀಗ್ಗಳಲ್ಲಿ ಕೂಡ ಪಾಲ್ಗೊಂಡಿದ್ದಾರೆ. ನಿವೃತ್ತಿಯ ನಂತರ ಮಾತ್ರವೇ ಭಾರತೀಯ ಆಟಗಾರರಿಗೆ ಬಿಸಿಸಿಐ ಕಡೆಯಿಂದ ಎನ್ಒಸಿ ಪಡೆದು ಈ ವಿದೇಶಿ ಲೀಗ್ಗಳಲ್ಲಿ ಪಾಲ್ಗೊಳ್ಳಲು ಅವಕಾಶವಿದ್ದು ನಿವೃತ್ತಿ ಪಡೆಯದೆ ಆಡಿದರೆ ಅವರನ್ನು ಬಿಸಿಸಿಐ ನಿಷೇಧಿಸುವ ನಿಯಮ ಬಿಸಿಸಿಐ ಹೊಂದಿದೆ. ಹೀಗಾಗಿ ಯುವರಾಜ್ ಸಿಂಗ್ ವಿಚಾರದಲ್ಲಿ ಬಿಸಿಸಿಐ ಯಾವ ನಿಲುವು ತೆಗೆದುಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm