ಬ್ರೇಕಿಂಗ್ ನ್ಯೂಸ್
16-12-20 02:39 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಶುಕ್ರವಾರ ಅಡಿಲೇಡ್ನಲ್ಲಿ ಈ ಪಂದ್ಯ ಆರಂಭವಾಗಲಿದ್ದು ಈ ಪಂದ್ಯ ಡೇ-ನೈಟ್ ಪಂದ್ಯವಾಗಿ ಸಾಗಲಿದೆ. ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಆಡುವ 11 ಆಟಗಾರರ ಪಟ್ಟಿಯನ್ನು ಬಿಸಿಸಿಐ ಘೋಷಿಸಿದೆ.
ಕೋಹ್ಲಿ ನೇತೃತ್ವದ ಈ ತಂಡದ ಆರಂಭಿಕ ಆಟಗಾರರು ಯಾರು ಎಂಬ ಪ್ರಶ್ನೆಗೆ ಉತ್ತರ ದೊರಕಿದೆ. ಮಯಾಂಕ್ ಅಗರ್ವಾಲ್ ಜೊತೆಗೆ ಪೃಥ್ವಿ ಶಾ ಟೀಮ್ ಇಂಡಿಯಾ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಶುಭ್ಮನ್ ಗಿಲ್ ಹಾಗೂ ಕೆಎಲ್ ರಾಹುಲ್ಗೆ ಈ ತಂಡದಲ್ಲಿ ನಿರಾಸೆ ಉಂಟಾಗಿದೆ.

ಆಡುವ ಬಳಗದಲ್ಲಿಲ್ಲ ರಾಹುಲ್ ಕೆಎಲ್ ರಾಹುಲ್
ಮಯಾಂಕ್ ಅಗರ್ವಾಲ್ ಜೊತೆಗೆ ಇನ್ನಿಂಗ್ಸ್ ಆರಂಭಿಸುವ ನಿರೀಕ್ಷೆಯಿತ್ತು. ಆದರೆ ಈ ತಂಡದಲ್ಲಿ ಕೆಎಲ್ ರಾಹುಲ್ ಅವರನ್ನು ಹೊರಗಿಡಲಾಗಿದೆ. ಸೀಮಿತ ಓವರ್ಗಳಲ್ಲಿ ಅದ್ಭುತ ಫಾರ್ಮ್ನಲ್ಲಿರುವ ರಾಹುಲ್ ಟೆಸ್ಟ್ನಲ್ಲಿ ಸುದೀರ್ಘ ಸಮಯದಿಂದ ಅವಕಾಶವನ್ನು ಪಡೆಯುವಲ್ಲಿ ವಿಫಲರಾಗಿದ್ದಾರೆ.

ಅಗ್ರ ಹಾಗೂ ಮಧ್ಯಮ ಕ್ರಮಾಂಕ
ಅಗ್ರ ಕ್ರಮಾಂಕದಲ್ಲಿ ನಾಯಕ ವಿರಾಟ್ ಕೊಹ್ಲಿಗೆ ಚೇತೇಶ್ವರ್ ಪೂಜಾರ ಸಾಥ್ ನೀಡಲಿದ್ದಾರೆ. ಅಜಿಂಕ್ಯ ರಹಾನೆ, ಹನುಮ ವಿಹಾರಿ, ವೃದ್ಧಿಮಾನ್ ಸಾಹ ಮಧ್ಯಮ ಕ್ರಮಾಂಕದಲ್ಲಿ ಆಸರೆಯಾಗಲಿದ್ದಾರೆ. ವಿಕೆಟ್ ಕೀಪಿಂಗ್ಗೆ ವಿಚಾರವಾಗಿ ಪಂತ್ ಹಾಗೂ ಸಾಹಾ ಮಧ್ಯೆ ಯಾರ ಎಂಬ ಪ್ರಶ್ನೆಗೂ ಸಾಹಾ ಅವರೇ ಮೊದಲ ಆಯ್ಕೆಯಾಗಿದ್ದಾರೆ.

ಬೌಲಿಂಗ್ ವಿಭಾಗ
ಬೌಲಿಂಗ್ ವಿಭಾಗದಲ್ಲಿ ರವಿಚಂದ್ರನ್ ಅಶ್ವಿನ್ ಸ್ಪಿನ್ನರ್ ಆಗಿ ಕಣಕ್ಕಿಳಿಯಲಿದ್ದಾರೆ. ಮೊಹಮ್ಮದ್ ಶಮಿ ಹಾಗೂ ಜಸ್ಪ್ರೀತ್ ಬೂಮ್ರಾಗೆ ಉಮೇಶ್ ಯಾದವ್ ಮೂರನೇ ವೇಗಿಯಾಗಿ ಸಾಥ್ ನೀಡಲಿದ್ದಾರೆ. ಕುತೂಹಲಕಾರಿ ಸಂಗತಿಯೆಂದರೆ ತಂಡದಲ್ಲಿರುವ 11 ಕ್ರಿಕೆಟಿಗರೂ ಕೂಡ ಬಲಗೈ ಆಟಗಾರರಾಗಿದ್ದಾರೆ.

ಸಂಪೂರ್ಣ ಆಟಗಾರರ ಪಟ್ಟಿ
ಟೀಮ್ ಇಂಡಿಯಾ: ವಿರಾಟ್ ಕೊಹ್ಲಿ (ನಾಯಕ), ಮಯಾಂಕ್ ಅಗರ್ವಾಲ್, ಪೃಥ್ವಿ ಶಾ, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ(ಉಪನಾಯಕ), ಹನುಮ ವಿಹಾರಿ, ವೃದ್ಧಿಮಾನ್ ಸಾಹ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬೂಮ್ರಾ
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm