ಬ್ರೇಕಿಂಗ್ ನ್ಯೂಸ್
17-12-20 02:47 pm Source: MYKHEL ಕ್ರೀಡೆ
ಭಾರತದ ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಟೀಮ್ ಇಂಡಿಯಾದ ಇಬ್ಬರು ದಿಗ್ಗಜ ಆಟಗಾರರ ಬಗ್ಗೆ ಕಟು ಮಾತುಗಳಲ್ಲಿ ಟೀಕೆಯನ್ನು ಮಾಡಿದ್ದಾರೆ. ಟೀಮ್ ಇಂಡಿಯಾದ ಆರಂಭಿಕರಾದ ಪೃಥ್ವಿ ಶಾ ಹಾಗೂ ಮಯಾಂಕ್ ಅಗರ್ವಾಲ್ ಮೊದಲ ಟೆಸ್ಟ್ನಲ್ಲಿ ಭಾರತಕ್ಕೆ ಉತ್ತಮ ಆರಂಭವನ್ನು ನೀಡಲು ವಿಫಲರಾದರು.
ಇಬ್ಬರು ಬ್ಯಾಟ್ಸ್ಮನ್ಗಳ ಬ್ಯಾಟಿಂಗ್ ತಂತ್ರದ ಬಗ್ಗೆ ಗವಾಸ್ಕರ್ ಹರಿಹಾಯ್ದರು. ಇಬ್ಬರು ಬ್ಯಾಟ್ಸ್ಮನ್ಗಳು ಬ್ಯಾಟಿಂಗ್ ಮಾಡುವ ವೇಳೆ ಮಾಡಿದ ದೊಡ್ಡ ತಪ್ಪನ್ನು ಅವರು ಬೊಟ್ಟು ಮಾಡಿ ಹೇಳಿದರು. ಬ್ಯಾಟ್ ಹಾಗೂ ಪ್ಯಾಡ್ನ ಮಧ್ಯೆ ದೊಡ್ಡ ಅಂತರವನ್ನು ಇಟ್ಟು ಬ್ಯಾಟಿಂಗ್ ಮಾಡಿದ್ದಾರೆ. ಆ ಅಂತರದಲ್ಲಿ ಟ್ರಕ್ ಒಂದು ಸಾಗಬಹುದು ಎಂದು ಟೀಕಿಸಿದ್ದಾರೆ.
ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಪಂದ್ಯದ ಎರಡನೇ ಇನ್ನಿಂಗ್ಸ್ನಲ್ಲಿ ಪೃಥ್ವಿ ಶಾ ಅವರನ್ನು ಶೂನ್ಯಕ್ಕೆ ಬಲಿ ತೆಗೆದುಕೊಂಡರು. ಉತ್ತಮ ಲೆಂತ್ ಎಸೆತವನ್ನು ಬ್ಲಾಕ್ ಮಾಡಲು ಮುಂದಾದ ಶಾ ಅದರಲ್ಲಿ ವಿಫಲರಾದರು. ಬ್ಯಾಟ್ನ ಒಳಭಾಗಕ್ಕೆ ಸವರಿದ ಚೆಂಡು ವಿಕೆಟ್ಗೆ ಬಡಿದಿತ್ತು. ಅದಾದ ಬಳಿಕ 18ನೇ ಓವರ್ನಲ್ಲಿ ಪ್ಯಾಟ್ ಕಮ್ಮಿನ್ಸ್ ಎಸೆದ ತೀಕ್ಷ್ಣವಾದ ಎಸೆತ ಬ್ಯಾಟ್ಅನ್ನು ವಂಚಿಸಿ ವಿಕೆಟ್ಗೆ ಬಡಿದಿತ್ತು. "ನೀವು ಬ್ಯಾಟ್ ಹಾಗೂ ಪ್ಯಾಡ್ನ ನಡುವೆ ಅಷ್ಟು ಅಂತರವನ್ನು ಬಿಡುವುದರ ಜೊತೆಗೆ ತಡವಾಗಿ ಚಲನೆಯನ್ನು ಮಾಡುತ್ತೀರಿ. ಆಗ ಚೆಂಡು ಬ್ಯಾಟ್ನ ಒಳಭಾಗವನ್ನು ಸವರಿಕೊಂಡು ಹೋಗುತ್ತದೆ ಅಥವಾ ಬ್ಯಾಟ್ ಹಾಗೂ ಪ್ಯಾಡ್ನ ಮಧ್ಯೆ ನುಸುಳಿಕೊಮಡು ಹೋಗುತ್ತದೆ" ಎಂದು ಗವಾಸ್ಕರ್ 7 ಕ್ರಿಕೆಟ್ನಲ್ಲಿ ಮಾತನಾಡುತ್ತಾ ಹೇಳಿದ್ದಾರೆ.

ಇನ್ನಿಂಗ್ಸ್ನ ಆರಂಬದಲ್ಲಿ ನೀವು ಬ್ಯಾಟ್ ಹಾಗೂ ಪ್ಯಾಡ್ ಅತ್ಯಂತ ಸಮೀಪದಲ್ಲಿರುವಂತೆ ನೋಡಿಕೊಳ್ಳಬೇಕು. ಅಂದರೆ ಆರಭವದಲಲ್ಇ ನಿಮ್ಮ ಬ್ಯಾಟ್ನ ವೇಗ ಕಡಿಮೆಯಿರಬೇಕು. ಹೆಚ್ಚು ಎಸೆತ ಎದುರಿಸಿದಂತೆ ನಿಮ್ಮ ಆತ್ಮವಿಶ್ವಾಸ ಹೆಚ್ಚಾದಾಗ ನಿಮ್ಮ ಎಂದಿದ ಹೊಡೆತಗಳನ್ನು ನಿಡವು ಬಾರಿಸಬಹುದು. ಆದರೆ ಆರಂಭದಲ್ಲಿ ನೀವಿನ್ನೂ ಲಯಕ್ಕೆ ಮರಳಬೇಕಿದ್ದರೆ ನಿಮ್ಮ ಬ್ಯಾಟ್ನ ವೇಗವನ್ನು ಕಡಿಮೆ ಮಾಡಬೇಕು" ಎಂದು ಗವಾಸ್ಕರ್ ಹೇಳಿಕೆ ನೀಡಿದ್ದಾರೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm