ಬ್ರೇಕಿಂಗ್ ನ್ಯೂಸ್
18-12-20 02:44 pm Source: MYKHEL ಕ್ರೀಡೆ
ಕೆಎಲ್ ರಾಹುಲ್ ಕಳೆದ ಎರಡ್ಮೂರು ವರ್ಷಗಳಿಂದ ಭಾರತದ ಪ್ರಮುಖ ಬ್ಯಾಟ್ಸ್ಮನ್ ಆಗಿದ್ದಾರೆ. ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ರಾಹುಲ್ ತಂಡದ ಮುಖ್ಯ ವಿಕೆಟ್ ಕೀಪರ್ ಆಗಿಯೂ ರಾಹುಲ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತಂಡಕ್ಕೆ ಅನುಕೂಲವಾಗುವ ಯಾವುದೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಇಳಿಯಲು ಶಕ್ತವಾಗಿರುವ ರಾಹುಲ್ ನಾಯಕ ವಿರಾಟ್ ಕೊಹ್ಲಿಗೆ ಆಪತ್ಬಾಂಧವನಂತಾಗಿದ್ದಾರೆ. ಆರಂಭಿಕನಾಗಿ ಕಣ್ಕಕಿಳಿಯುವುದರಿಂದ ಹಿಡಿದು ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸಲು ಕೂಡ ರಾಹುಲ್ ಸೈ ಎನಿಸಿಕೊಂಡಿದ್ದಾರೆ. 2020 ಕೆಎಲ್ ರಾಹುಲ್ ಪರವಾಗಿ ಕೆಎಲ್ ರಾಹುಲ್ಗೆ ಹೆಚ್ಚು ಸ್ಮರಣೀಯ ವರ್ಷವೆನಿಸಿಕೊಂಡಿದೆ. ಅದಕ್ಕೆ ಕಾರಣ ರಾಹುಲ್ ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ನೀಡಿದ ಅದ್ಭುತ ಪ್ರದರ್ಶನ.
ಈ ವರ್ಷದ ಬಹುತೇಕ ಕೊರೊನಾ ವೈರಸ್ನ ಕಾರಣದಿಂದಾಗಿ ಕಳೆದುಹೋದರೂ ಇದ್ದ ಅವಕಾಶದಲ್ಲಿ ರಾಹುಲ್ ಟೀಮ್ ಇಂಡಿಯಾ ಪರವಾಗಿ ಶ್ರೇಷ್ಠ ಆಟವನ್ನು ಪ್ರದರ್ಶಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲೂ ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ರಾಹುಲ್ ಉತ್ತಮ ಆಟವನ್ನು ಪ್ರದರ್ಶಿಸಿದ್ದಾರೆ. ಆದರೆ ಸದ್ಯ ನಡೆಯುತ್ತಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಡುವ ಬಳಗದಲ್ಲಿ ಅವಕಾಶ ಪಡೆಯುವಲ್ಲಿ ವಿಫಲರಾಗಿದ್ದಾರೆ.

ಟೀಮ್ ಇಂಡಿಯಾ ಪರವಾಗಿ 2020ರ ಕ್ಯಾಲೆಂಡರ್ ವರ್ಷದಲ್ಲಿ ಏಕದಿನ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ಮನ್ ಎನಿಸಿದ್ದಾರೆ ಕೆಎಲ್ ರಾಹುಲ್. 9 ಏಕದಿನ ಪಂದ್ಯಗಳನ್ನು ಆಡಿರುವ ರಾಹುಲ್ 443 ರನ್ ಬಾರಿಸಿದ್ದಾರೆ. ಈ ವರ್ಷ ಅವರು ಏಕದಿನ ಕ್ರಿಕೆಟ್ನಲ್ಲಿ 55.4 ಸರಾಸರಿಯನ್ನು ಕಾಯ್ದುಕೊಂಡಿದ್ದಾರೆ.

ಈ ವರ್ಷದಲ್ಲಿ ಕೆಎಲ್ ರಾಹುಲ್ ಏಕದಿನ ಕ್ರಿಕೆಟ್ನಲ್ಲಿ ಒಂದು ಶತಕವನ್ನು ಸಿಡಿಸಿದ್ದಾರೆ. ಕಳೆದ ಫೆಬ್ರವರಿಯಲ್ಲಿ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ 112 ರನ್ ಗಳಿಸಿರುವುದು ಏಕದಿನ ಕ್ರಿಕೆಟ್ನಲ್ಲಿ ಭಾರತದ ಪರವಾಗಿ ಈ ವರ್ಷದ ಎರಡನೇ ಹೈಯೆಸ್ಟ್ ರನ್ ಎನಿಸಿಕೊಂಡಿದೆ. ರೋಹಿತ್ ಶರ್ಮಾ ಮೊದಲ ಸ್ಥಾನದಲ್ಲಿದ್ದಾರೆ.

ಇನ್ನು ಏಕದಿನ ಕ್ರಿಕೆಟ್ನಲ್ಲಿ ಹಾಗೂ ಟಿ20 ಕ್ರಿಕೆಟ್ನಲ್ಲಿ ಭಾರತದ ಪರವಾಹಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆಯೂ ರಾಹುಲ್ ಪಾಲಾಗಿದೆ. ಏಕದಿನ ಕ್ರಿಕೆಟ್ನಲ್ಲಿ 16 ಸಿಕ್ಸರ್ ಬಾರಿಸಿರುವ ರಾಹುಲ್ ಟಿ20ಯಲ್ಲಿ ಈ ವರ್ಷ 13 ಸಿಕ್ಸರ್ ಬಾರಿಸಿದ್ದಾರೆ.
This News Article is a Copy of MYKHEL
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 07:17 pm
HK News Staffer
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm