ಬ್ರೇಕಿಂಗ್ ನ್ಯೂಸ್
18-12-20 02:44 pm Source: MYKHEL ಕ್ರೀಡೆ
ಕೆಎಲ್ ರಾಹುಲ್ ಕಳೆದ ಎರಡ್ಮೂರು ವರ್ಷಗಳಿಂದ ಭಾರತದ ಪ್ರಮುಖ ಬ್ಯಾಟ್ಸ್ಮನ್ ಆಗಿದ್ದಾರೆ. ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ರಾಹುಲ್ ತಂಡದ ಮುಖ್ಯ ವಿಕೆಟ್ ಕೀಪರ್ ಆಗಿಯೂ ರಾಹುಲ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತಂಡಕ್ಕೆ ಅನುಕೂಲವಾಗುವ ಯಾವುದೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಇಳಿಯಲು ಶಕ್ತವಾಗಿರುವ ರಾಹುಲ್ ನಾಯಕ ವಿರಾಟ್ ಕೊಹ್ಲಿಗೆ ಆಪತ್ಬಾಂಧವನಂತಾಗಿದ್ದಾರೆ. ಆರಂಭಿಕನಾಗಿ ಕಣ್ಕಕಿಳಿಯುವುದರಿಂದ ಹಿಡಿದು ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸಲು ಕೂಡ ರಾಹುಲ್ ಸೈ ಎನಿಸಿಕೊಂಡಿದ್ದಾರೆ. 2020 ಕೆಎಲ್ ರಾಹುಲ್ ಪರವಾಗಿ ಕೆಎಲ್ ರಾಹುಲ್ಗೆ ಹೆಚ್ಚು ಸ್ಮರಣೀಯ ವರ್ಷವೆನಿಸಿಕೊಂಡಿದೆ. ಅದಕ್ಕೆ ಕಾರಣ ರಾಹುಲ್ ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ನೀಡಿದ ಅದ್ಭುತ ಪ್ರದರ್ಶನ.
ಈ ವರ್ಷದ ಬಹುತೇಕ ಕೊರೊನಾ ವೈರಸ್ನ ಕಾರಣದಿಂದಾಗಿ ಕಳೆದುಹೋದರೂ ಇದ್ದ ಅವಕಾಶದಲ್ಲಿ ರಾಹುಲ್ ಟೀಮ್ ಇಂಡಿಯಾ ಪರವಾಗಿ ಶ್ರೇಷ್ಠ ಆಟವನ್ನು ಪ್ರದರ್ಶಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲೂ ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ರಾಹುಲ್ ಉತ್ತಮ ಆಟವನ್ನು ಪ್ರದರ್ಶಿಸಿದ್ದಾರೆ. ಆದರೆ ಸದ್ಯ ನಡೆಯುತ್ತಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಡುವ ಬಳಗದಲ್ಲಿ ಅವಕಾಶ ಪಡೆಯುವಲ್ಲಿ ವಿಫಲರಾಗಿದ್ದಾರೆ.

ಟೀಮ್ ಇಂಡಿಯಾ ಪರವಾಗಿ 2020ರ ಕ್ಯಾಲೆಂಡರ್ ವರ್ಷದಲ್ಲಿ ಏಕದಿನ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ಮನ್ ಎನಿಸಿದ್ದಾರೆ ಕೆಎಲ್ ರಾಹುಲ್. 9 ಏಕದಿನ ಪಂದ್ಯಗಳನ್ನು ಆಡಿರುವ ರಾಹುಲ್ 443 ರನ್ ಬಾರಿಸಿದ್ದಾರೆ. ಈ ವರ್ಷ ಅವರು ಏಕದಿನ ಕ್ರಿಕೆಟ್ನಲ್ಲಿ 55.4 ಸರಾಸರಿಯನ್ನು ಕಾಯ್ದುಕೊಂಡಿದ್ದಾರೆ.

ಈ ವರ್ಷದಲ್ಲಿ ಕೆಎಲ್ ರಾಹುಲ್ ಏಕದಿನ ಕ್ರಿಕೆಟ್ನಲ್ಲಿ ಒಂದು ಶತಕವನ್ನು ಸಿಡಿಸಿದ್ದಾರೆ. ಕಳೆದ ಫೆಬ್ರವರಿಯಲ್ಲಿ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ 112 ರನ್ ಗಳಿಸಿರುವುದು ಏಕದಿನ ಕ್ರಿಕೆಟ್ನಲ್ಲಿ ಭಾರತದ ಪರವಾಗಿ ಈ ವರ್ಷದ ಎರಡನೇ ಹೈಯೆಸ್ಟ್ ರನ್ ಎನಿಸಿಕೊಂಡಿದೆ. ರೋಹಿತ್ ಶರ್ಮಾ ಮೊದಲ ಸ್ಥಾನದಲ್ಲಿದ್ದಾರೆ.

ಇನ್ನು ಏಕದಿನ ಕ್ರಿಕೆಟ್ನಲ್ಲಿ ಹಾಗೂ ಟಿ20 ಕ್ರಿಕೆಟ್ನಲ್ಲಿ ಭಾರತದ ಪರವಾಹಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆಯೂ ರಾಹುಲ್ ಪಾಲಾಗಿದೆ. ಏಕದಿನ ಕ್ರಿಕೆಟ್ನಲ್ಲಿ 16 ಸಿಕ್ಸರ್ ಬಾರಿಸಿರುವ ರಾಹುಲ್ ಟಿ20ಯಲ್ಲಿ ಈ ವರ್ಷ 13 ಸಿಕ್ಸರ್ ಬಾರಿಸಿದ್ದಾರೆ.
This News Article is a Copy of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am