ಬ್ರೇಕಿಂಗ್ ನ್ಯೂಸ್
22-12-20 03:11 pm Source: MYKHEL ಕ್ರೀಡೆ
ಕೊಪ್ಪಳ, ಡಿ.22: ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಪರಿಶಿಷ್ಟ ಜಾತಿ ಉಪಯೋಜನೆ ಯುವಜನರಿಗೆ ಕ್ರೀಡಾ ಅಂಕಣ ಮಾರ್ಕರ್ (ಗುರುತುದಾರರು) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಯುವಜನರಿಗೆ ಕ್ರೀಡಾ ಅಂಕಣ ಮಾರ್ಕರ್ ತರಬೇತಿಗೆ ಕೇಂದ್ರ ಕಛೇರಿ ಆದೇಶದನ್ವಯ ಅರ್ಜಿ ಆಹ್ವಾನಿಸಲಾಗಿದ್ದು, ಕೊಪ್ಪಳ ಜಿಲ್ಲೆಯ ಆಸಕ್ತ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಯುವಜನರು ಡಿ. 28 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ತರಬೇತಿಯನ್ನು ಇಲಾಖೆ ವತಿಯಿಂದ ಕ್ರೀಡಾಶಾಲೆ ಕೂಡಿಗೆ,ಕುಶಾಲ್ ನಗರ, ಕೊಡಗು ಜಿಲ್ಲೆಯಲ್ಲಿ ಆಯೋಜಿಸುತ್ತಾರೆ. ತರಬೇತಿಯು ವಸತಿ ಸಹಿತವಾಗಿದ್ದು, ಹಾಜರಾಗುವ ಯುವಕ/ಯುವತಿಯರಿಗೆ ಪ್ರಮಾಣ ಪತ್ರ, ಕ್ರೀಡಾಗಂಟು, ಊಟೋಪಹಾರ, ವಸತಿ ವ್ಯವಸ್ಥೆ ಹಾಗೂ ಪ್ರಯಾಣ ಭತ್ಯೆಯನ್ನು ಇಲಾಖೆಯಿಂದ ನೀಡಲಾಗುತ್ತದೆ. ಯುವತಿಯರ ಸಂಖ್ಯೆಯನ್ನು ಆಧರಿಸಿ ಪ್ರತ್ಯೇಕವಾಗಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ.
ಆಸಕ್ತ ಯುವಜನರು ತರಬೇತಿಯ ನಿಗದಿತ ನಮೂನೆ ಅರ್ಜಿಗಳನ್ನು ಕಛೇರಿಯಿಂದ ಪಡೆಯಬೇಕು. ತರಬೇತಿಯನ್ನು ಕರ್ನಾಟಕದ ಯುವಜನರಿಗೆ ಮಾತ್ರ ನೀಡಲಾಗುತ್ತದೆ. ಅರ್ಜಿದಾರರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಲಗತ್ತಿಸಬೇಕು.(ಆರ್.ಡಿ.ನಂಬರ್ ಇರುವ ಪ್ರಮಾಣ ಪತ್ರ). ಅರ್ಜಿದಾರರು 18 ರಿಂದ 35 ವರ್ಷ ವಯಸ್ಸಿನವರಾಗಿರಬೇಕು. ಕ್ರೀಡಾ ಅಂಕಣ ಗುರುತುದಾರರು ಕನಿಷ್ಠ 7ನೇ ತರಗತಿ ಓದಿರಬೇಕು. ಅರ್ಜಿದಾರರು ಸ್ವಯಂ ಧೃಡೀಕೃತ ಪ್ರಮಾಣ ಪತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಅರ್ಜಿದಾರರ ಹೆಸರು ಹಾಗೂ ಭಾವಚಿತ್ರವುಳ್ಳ ಆಧಾರ್, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಅಥವಾ ಸರ್ಕಾರದಿಂದ ವಿತರಿಸಿರುವ ಗುರುತಿನ ಚೀಟಿಯ ನಕಲನ್ನು ಲಗತ್ತಿಸಬೇಕು. ಬ್ಯಾಂಕ್ ಖಾತೆ ಕಡ್ಡಾಯವಾಗಿ ಅರ್ಜಿದಾರರ ಹೆಸರಿನಲ್ಲಿರಬೇಕು ಸದರಿ ಪ್ರತಿ ಲಗತ್ತಿಸುವುದು. ಅರ್ಜಿದಾರರು ದೈಹಿಕವಾಗಿ ಸಧೃಡ ಹಾಗೂ ಚಟುವಟಿಕೆಯಿಂದ ಕೂಡಿದವರಾಗಿರಬೇಕು. ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಸಂದರ್ಭದಲ್ಲಿ ವೈದ್ಯಕೀಯ ಪ್ರಮಾಣ ಪತ್ರ ಹಾಜರುಪಡಿಸಬೇಕು.
This News Article is a Copy of MYKHEL
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm