ಬ್ರೇಕಿಂಗ್ ನ್ಯೂಸ್
22-12-20 03:11 pm Source: MYKHEL ಕ್ರೀಡೆ
ಕೊಪ್ಪಳ, ಡಿ.22: ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಪರಿಶಿಷ್ಟ ಜಾತಿ ಉಪಯೋಜನೆ ಯುವಜನರಿಗೆ ಕ್ರೀಡಾ ಅಂಕಣ ಮಾರ್ಕರ್ (ಗುರುತುದಾರರು) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಯುವಜನರಿಗೆ ಕ್ರೀಡಾ ಅಂಕಣ ಮಾರ್ಕರ್ ತರಬೇತಿಗೆ ಕೇಂದ್ರ ಕಛೇರಿ ಆದೇಶದನ್ವಯ ಅರ್ಜಿ ಆಹ್ವಾನಿಸಲಾಗಿದ್ದು, ಕೊಪ್ಪಳ ಜಿಲ್ಲೆಯ ಆಸಕ್ತ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಯುವಜನರು ಡಿ. 28 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ತರಬೇತಿಯನ್ನು ಇಲಾಖೆ ವತಿಯಿಂದ ಕ್ರೀಡಾಶಾಲೆ ಕೂಡಿಗೆ,ಕುಶಾಲ್ ನಗರ, ಕೊಡಗು ಜಿಲ್ಲೆಯಲ್ಲಿ ಆಯೋಜಿಸುತ್ತಾರೆ. ತರಬೇತಿಯು ವಸತಿ ಸಹಿತವಾಗಿದ್ದು, ಹಾಜರಾಗುವ ಯುವಕ/ಯುವತಿಯರಿಗೆ ಪ್ರಮಾಣ ಪತ್ರ, ಕ್ರೀಡಾಗಂಟು, ಊಟೋಪಹಾರ, ವಸತಿ ವ್ಯವಸ್ಥೆ ಹಾಗೂ ಪ್ರಯಾಣ ಭತ್ಯೆಯನ್ನು ಇಲಾಖೆಯಿಂದ ನೀಡಲಾಗುತ್ತದೆ. ಯುವತಿಯರ ಸಂಖ್ಯೆಯನ್ನು ಆಧರಿಸಿ ಪ್ರತ್ಯೇಕವಾಗಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ.
ಆಸಕ್ತ ಯುವಜನರು ತರಬೇತಿಯ ನಿಗದಿತ ನಮೂನೆ ಅರ್ಜಿಗಳನ್ನು ಕಛೇರಿಯಿಂದ ಪಡೆಯಬೇಕು. ತರಬೇತಿಯನ್ನು ಕರ್ನಾಟಕದ ಯುವಜನರಿಗೆ ಮಾತ್ರ ನೀಡಲಾಗುತ್ತದೆ. ಅರ್ಜಿದಾರರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಲಗತ್ತಿಸಬೇಕು.(ಆರ್.ಡಿ.ನಂಬರ್ ಇರುವ ಪ್ರಮಾಣ ಪತ್ರ). ಅರ್ಜಿದಾರರು 18 ರಿಂದ 35 ವರ್ಷ ವಯಸ್ಸಿನವರಾಗಿರಬೇಕು. ಕ್ರೀಡಾ ಅಂಕಣ ಗುರುತುದಾರರು ಕನಿಷ್ಠ 7ನೇ ತರಗತಿ ಓದಿರಬೇಕು. ಅರ್ಜಿದಾರರು ಸ್ವಯಂ ಧೃಡೀಕೃತ ಪ್ರಮಾಣ ಪತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಅರ್ಜಿದಾರರ ಹೆಸರು ಹಾಗೂ ಭಾವಚಿತ್ರವುಳ್ಳ ಆಧಾರ್, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಅಥವಾ ಸರ್ಕಾರದಿಂದ ವಿತರಿಸಿರುವ ಗುರುತಿನ ಚೀಟಿಯ ನಕಲನ್ನು ಲಗತ್ತಿಸಬೇಕು. ಬ್ಯಾಂಕ್ ಖಾತೆ ಕಡ್ಡಾಯವಾಗಿ ಅರ್ಜಿದಾರರ ಹೆಸರಿನಲ್ಲಿರಬೇಕು ಸದರಿ ಪ್ರತಿ ಲಗತ್ತಿಸುವುದು. ಅರ್ಜಿದಾರರು ದೈಹಿಕವಾಗಿ ಸಧೃಡ ಹಾಗೂ ಚಟುವಟಿಕೆಯಿಂದ ಕೂಡಿದವರಾಗಿರಬೇಕು. ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಸಂದರ್ಭದಲ್ಲಿ ವೈದ್ಯಕೀಯ ಪ್ರಮಾಣ ಪತ್ರ ಹಾಜರುಪಡಿಸಬೇಕು.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm