ಬ್ರೇಕಿಂಗ್ ನ್ಯೂಸ್
24-12-20 04:17 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದ ಹೀನಾಯ ಸೋಲನ್ನು ಟೀಮ್ ಇಂಡಿಯಾ ಹಿಂದಕ್ಕೆ ಬಿಟ್ಟು ಮುಂದುವರಿಯಬೇಕು ಹಾಗೂ ಹೊಸ ಆರಂಭವನ್ನು ಈ ಮೂಲಕ ಪಡೆದುಕೊಳ್ಳಬೇಕು. ಇದು ಆಟಗಾರರ ಬಲ ಹಾಗೂ ಸಾಮರ್ಥ್ಯವನ್ನು ತೋರಿಸುತ್ತದೆ ಎಂದು ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
ಇದೆ ಸಂದರ್ಭದಲ್ಲಿ ವಿವಿಎಸ್ ಲಕ್ಷ್ಮಣ್ ಒಂದು ಕೆಟ್ಟ ಸಂದರ್ಭದ ಪ್ರದರ್ಶನದಿಂದ ಭಾರತದ ಆಟದ ಗುಣಮಟ್ಟವನ್ನು ವ್ಯಾಖ್ಯಾನಿಸಲಾಗದು. ಈಗ ಭಾರತ ತಂಡದಲ್ಲಿ ಹೊಸ ಹೀರೋಗಳು ಹುಟ್ಟಲು ಉತ್ತಮ ಅವಕಾಶವಿದೆ. ಈ ಸಂದರ್ಭವನ್ನು ನೋಡಿಕೊಂಡು ಸಮಯವನ್ನು ಅದ್ಭುತವಾಗಿ ಬಳಸಿಕೊಳ್ಳಬಹುದು ಎಂದಿದ್ದಾರೆ.
"ಈ ಕೆಟ್ಟ ಸಂದರ್ಭ ಆಟಗಾರರ ಗುಣಮಟ್ಟವನ್ನು ವ್ಯಾಖ್ಯಾನಿಸಲಾಗದು. ಅವರೆಲ್ಲಾ ವಿಶ್ವದ ಅನೇಕ ಕಡೆಗಳಲ್ಲಿ ಸಾಕಷ್ಟು ಆಟವನ್ನು ಆಡಿದವರಾಗಿದ್ದಾರೆ. ಮೊದಲ ಟೆಸ್ಟ್ನ ಮೊದಲ ಆರು ಸೆಶನ್ಗಳಲ್ಲಿ ಭಾತರತ ಉತ್ತಮ ಆಟವನ್ನು ಪ್ರದರ್ಶಿಸಿತ್ತು. ಆದರೆ 70 ನಿಮಿಷಗಳ ಕೆಟ್ಟ ಸಂದರ್ಭ ಎಲ್ಲವನ್ನೂ ಹಾಳು ಮಾಡಿತ್ತು" ಎಂದು ವಿವಿಎಸ್ ಲಕ್ಷ್ಮಣ್ ಟೈಮ್ಸ್ ಆಫ್ ಇಂಡಿಯಾಗೆ ಬರೆದ ಅಂಕಣದಲ್ಲಿ ಹೇಳಿದ್ದಾರೆ. "ಈಗ ಟೆಸ್ಟ್ ಸರಣಿಯ ಕಾಲು ಭಾಗ ಮಾತ್ರವೇ ಅಂತ್ಯವಾಗಿದೆ. ಇನ್ನೂ ಮೂರು ಪಂದ್ಯಗಳು ನಡೆಯಬೇಕಾಗಿರುವುದರಿಂದ ಆಡಲು ಎಲ್ಲವೂ ಇದೆ. ಇದು ತಂಡದ ಸಾಮರ್ಥ್ಯ ಹಾಗೂ ಬಲದ ನಿಜವಾದ ಪರೀಕ್ಷೆಯಾಗಿರಲಿದೆ" ಎಮದು ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
"ತಂಡದಲ್ಲಿ ಹೊಸ ಮ್ಯಾಚ್ವಿನ್ನರ್ಗಳು ಸೃಷ್ಟಿಯಾಗಲು ಇದು ನಿಜಕ್ಕೂ ಅತ್ಯುತ್ತಮವಾದ ಸಂದರ್ಭವಾಗಿದೆ. ಈ ಸಂದರ್ಭವನ್ನು ಬಳಸಿಕೊಂಡು ತಮ್ಮ ಕೇ ಮೇಲೆತ್ತಿ ತಂಡಕ್ಕೆ ಆಸರೆಯಾಗಬಹುದು. ಇದು ಅಡಿಲೇಡ್ ಸೋಲನ್ನು ಹಿಂದಕ್ಕೆ ತಳ್ಳಿ ಹೊಸ ಆರಂಬವನ್ನು ಪಡೆಯಲು ಅತ್ಯುತ್ತಮವಾದ ಸಂದರ್ಭ" ಎಂದು ವಿವಿಎಸ್ ಲಕ್ಷ್ಮಣ್ ತಮ್ಮ ಅಂಕಣದಲ್ಲಿ ಸ್ಪೂರ್ತಿಯ ಮಾತುಗಳನ್ನು ಆಡಿದ್ದಾರೆ.
This News Article is a Copy of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am