ಬ್ರೇಕಿಂಗ್ ನ್ಯೂಸ್
26-12-20 02:30 pm Source: MYKHEL Madhukara Shetty ಕ್ರೀಡೆ
ಮೊದಲ ಟೆಸ್ಟ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ 36 ರನ್ಗಳಿಗೆ ಆಲೌಟ್ ಆಗಿದ್ದಲ್ಲದೆ ಹೀನಾಯ ಸೋಲು ಕಂಡಿದ್ದ ಭಾರತ ಎರಡನೇ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಮತ್ತೆ ತಿರುಗಿ ಬಿದ್ದಿದೆ. ಆಸ್ಟ್ರೇಲಿಯಾ ಬ್ಯಾಟಿಂಗ್ ಪಡೆಯನ್ನು ಟೀಮ್ ಇಂಡಿಯಾ ಬೌಲರ್ಗಳು 195 ರನ್ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಅದ್ಭುತ ಪ್ರದರ್ಶನ ನಿಡಿದೆ ಟೀಮ್ ಇಂಡಿಯಾ.
ಕುತೂಹಲಕಾರಿ ಸಂಗತಿಯೆಂದರೆ 17 ವರ್ಷಗಳ ಹಿಂದೆ ಟೀಮ್ ಇಂಡಿಯಾದ ಸ್ಪೋಟಕ ಆಟಗಾರ ವಿರೇಂದ್ರ ಸೆಹ್ವಾಗ್ ಏಕಾಂಗಿಯಾಗಿ 195 ರನ್ಅನ್ನು ಇದೇ ಅಂಗಳದಲ್ಲಿ ದಾಖಲಿಸಿದ್ದರು. ಇಷ್ಟು ಮಾತ್ರವಲ್ಲ ಸೆಹ್ವಾಗ್ ಒಬ್ಬರೇ ಸಿಡಿಸಿದ ಬೌಂಡರಿ ಸಂಖ್ಯೆಗಳು ಕೂಡ ಆಸ್ಟ್ರೇಲಿಯಾ ಇಡೀ ತಂಡ ಸಿಡಿಸಿದ ಬೌಂಡರಿಗಳಿಗಿಂತ ಹೆಚ್ಚಿನದಾಗಿದೆ. ಜೊತೆಗೆ ಆಸ್ಟ್ರೇಲಿಯಾ ಆಟಗಾರರ ಒಟ್ಟು ಸ್ಟ್ರೈಕ್ರೇಟ್ಗಿಂತಲೂ ಸೆಹ್ವಾಗ್ ಸ್ಟ್ರೈಕ್ರೇಟ್ ಅದ್ಭುತವಾಗಿತ್ತು.
ವೀರೇಂದ್ರ ಸೆಹ್ವಾಗ್ ಅಂದು ತಮ್ಮ 195 ರನ್ಗಳ ಅದ್ಭುತ ಇನ್ನಿಂಗ್ಸ್ನಲ್ಲಿ 5 ಸಿಕ್ಸರ್ ಹಾಗೂ 25 ಬೌಂಡರಿಗಳು ಒಳಗೊಂಡಿತ್ತು. ಆದರೆ ಟಿಮ್ ಪೈನ್ ಬಳಗ ಇಡೀ ಇನ್ನಿಂಗ್ಸ್ನಲ್ಲಿ ಒಂದು ಸಿಕ್ಸರ್ ಮಾತ್ರ ಸಿಡಿಸಿದ್ದಲ್ಲದೆ 18 ಬೌಂಡರಿ ಮಾತ್ರವೇ ಸಿಡಿಸಲು ಶಕ್ತವಾಗಿತ್ತು. ಭಾರತದ ಸ್ಪೋಟಕ ಆರಂಭಿಕ ಆಟಗಾರ ಅಂದು 195 ರನ್ ಗಳಿಸಲು 233 ಎಸೆತ ತೆಗೆದುಕೊಂಡಿದ್ದರೆ ಆಸ್ಟ್ರೇಲಿಯಾ ಇಷ್ಟೇ ಮೊತ್ತವನ್ನು ದಾಖಲಿಸಲು 435 ಎಸೆತವನ್ನು ಬಳಸಿಕೊಂಡಿತು.
ಆಸ್ಟ್ರೇಲಿಯಾ ತಂಡದ ಪರವಾಗಿ ಇಂದಿನ ಇನ್ನಿಂಗ್ಸ್ ಯಾವ ಬ್ಯಾಟ್ಸ್ಮನ್ ಕೂಡ ಅರ್ಧ ಶತಕವನ್ನು ಬಾರಿಸಲು ಯಶಸ್ವಿಯಾಗಲಿಲ್ಲ. ಮರ್ನಾಸ್ ಲ್ಯಾಬುಶೈನ್ ಬಾರಿಸಿದ 48 ರನ್ ಆಸಿಸ್ ಇನ್ನಿಂಗ್ಸ್ನ ಅತಿ ಹೆಚ್ಚಿನ ಸ್ಕೋರ್ ಆಗಿದೆ. ಲ್ಯಾಬುಶೈನ್ ಹಾಗೂ ಟ್ರಾವಿಸ್ ಹೆಡ್ 86 ರನ್ಗಳ ಜೊತೆಯಾಟವನ್ನು ನೀಡಿ ತಂಡಕ್ಕೆ ಆಸರೆಯಾದರು. ಈ ಜೋಡಿಯನ್ನು ಬೂಮ್ರಾ ಬೇರ್ಪಡಿಸುವ ಮೂಲಕ ಮತ್ತೆ ಯಶಸ್ಸು ನೀಡಿದರು.
This News Article is a Copy of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am