ಬ್ರೇಕಿಂಗ್ ನ್ಯೂಸ್
28-12-20 04:36 pm Source: MYKHEL Sadashiva ಕ್ರೀಡೆ
ಸಿಡ್ನಿ,ಡಿ.28 : ಮನುಷ್ಯನಿಂದ ಕರಾರುವಕ್ಕಾಗಿ ನಿರ್ಧರಿಸಲು ಸಾಧ್ಯವಾಗದಾಗ ಸಹಾಯಕ್ಕಿರಲಿ ಎಂದು ಮನುಷ್ಯ ಯಂತ್ರದ ಮೊರೆ ಹೋಗಿದ್ದಾನೆ. ಹಾಗಂತ ಯಂತ್ರಗಳೂ ಪರಿಪೂರ್ಣ ಅಂತೇನೂ ಇಲ್ಲ. ಕೆಲವೊಮ್ಮೆ ಯಂತ್ರಗಳೂ ತಪ್ಪುವ ಸಾಧ್ಯತೆಗಳಿರುತ್ತವೆ. ಇದೇ ಕಾರಣಕ್ಕೆ ಕ್ರಿಕೆಟ್ನಲ್ಲಿನ ಡಿಸಿಶನ್ ರಿವ್ಯೂ ಸಿಸ್ಟಮ್ ಅನ್ನು ಪುನರ್ ಪರಿಶೀಲಿಸುವಂತೆ ಭಾರತದ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ ಅನ್ನು ಕೋರಿಕೊಂಡಿದ್ದಾರೆ.
ಆನ್ ಫೀಲ್ಡ್ ಅಂಪೈರ್ ನಿರ್ಧಾರ ಸಮಾಧಾನ ತಾರದಿದ್ದಾಗ ಆಟಗಾರರು ಡಿಆರ್ಎಸ್ ಮೊರೆ ಹೋಗುತ್ತಾರೆ. ಕೆಲವೊಮ್ಮೆ ಡಿಆರ್ಎಸ್ನಲ್ಲೂ ಕೂಡ ಸರಿಯಾದ ತೀರ್ಪು ಸಿಕ್ಕಿಲ್ಲ ಎಂದು ವಿವಾದಗಳಾಗಿದ್ದಿದೆ. ಉದಾಹರಣೆಗೆ ಸದ್ಯ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ ಆಸೀಸ್ ನಾಯಕ ಟಿಮ್ ಪೈನ್ ಅವರನ್ನು ರಿಷಭ್ ಪಂತ್ ಸ್ಟಂಪ್ ಮಾಡಲು ಯತ್ನಿಸಿದ್ದಾಗ ನಾಟೌಟ್ ತೀರ್ಪು ನೀಡಲಾಗಿತ್ತು.
ಮುಖ್ಯವಾಗಿ ಎಲ್ಬಿಡಬ್ಲ್ಯೂಗೆ ಸಂಬಂಧಿಸಿ ಡಿಆರ್ಎಸ್ ಕೇಳಲಾದಾಗ ಕೆಲವೊಮ್ಮೆ ಚೆಂಡು ಸ್ಟಂಪ್ ಬಡಿದಿದ್ದರೂ ಕೂಡ ಅಂಪೈರ್ ಕಾಲ್ ಎಂದು ಹೇಳಲಾಗುತ್ತದೆ. ಇಂಥ ಕಠಿಣ ಸಂದರ್ಭಗಳಿಗಾಗಿಯೇ ಡಿಆರ್ಎಸ್ ಪರಿಶೀಲನೆಯಾಗಬೇಕು ಎಂದು ಸಚಿನ್ ತೆಂಡೂಲ್ಕರ್ ಟ್ವೀಟ್ ಮೂಲಕ ಐಸಿಸಿಯನ್ನು ಕೇಳಿಕೊಂಡಿದ್ದಾರೆ.
'ಆನ್ ಫೀಲ್ಡ್ ಅಂಪೈರ್ ತೀರ್ಪು ಸಮಾಧಾನ ನೀಡದಿದ್ದಾಗ ಆಟಗಾರರು ಡಿಆರ್ಎಸ್ ಕೇಳುತ್ತಾರೆ. ಹೀಗಾಗಿ ಡಿಆರ್ಎಸ್ ವ್ಯವಸ್ಥೆಯನ್ನು ಐಸಿಸಿ ಕೂಲಂಕಷವಾಗಿ ಪರಿಶೀಲಿಸಬೇಕಾಗಿದೆ. ಮುಖ್ಯವಾಗಿ ಅಂಪೈರ್ಸ್ ಕಾಲ್ ಇದ್ದಾಗ,' ಎಂದು ಸಚಿನ್ ತೆಂಡೂಲ್ಕರ್ ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
This News Article is a Copy of MYKHEL
The reason players opt for a review is because they’re unhappy with the decision taken by the on-field umpire.
— Sachin Tendulkar (@sachin_rt) December 28, 2020
The DRS system needs to be thoroughly looked into by the @ICC, especially for the ‘Umpires Call’.#AUSvIND
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm