ಬ್ರೇಕಿಂಗ್ ನ್ಯೂಸ್
29-12-20 03:43 pm Source: MYKHEL Sadashiva ಕ್ರೀಡೆ
ಮೆಲ್ಬರ್ನ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಮ್ ಇಂಡಿಯಾ ವಿಶೇಷ ದಾಖಲೆಗೆ ಕಾರಣವಾಗಿದೆ. ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ನಲ್ಲಿ 8 ವಿಕೆಟ್ ಜಯ ದಾಖಲಿಸಿರುವ ಭಾರತ ಈ ವಿಶೇಷ ದಾಖಲೆ ನಿರ್ಮಿಸಿದೆ. ಪ್ರಮುಖ 5 ಆಟಗಾರರಿಲ್ಲದೆಯೂ ಭಾರತ ತಂಡ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯ ಗೆದ್ದ ಹಿರಿಮೆಗೆ ಪಾತ್ರವಾಗಿದೆ.
ಮೆಲ್ಬರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ 195 ರನ್, ದ್ವಿತೀಯ ಇನ್ನಿಂಗ್ಸ್ನಲ್ಲಿ 200 ರನ್ ಬಾರಿಸಿತ್ತು. ಭಾರತ ತಂಡ ಮೊದಲ ಇನ್ನಿಂಗ್ಸ್ನಲ್ಲಿ 326 ರನ್, ದ್ವಿತೀಯ ಇನ್ನಿಂಗ್ಸ್ನಲ್ಲಿ 70 ರನ್ ಬಾರಿ ಜಯ ಗಳಿಸಿದೆ. ಆರಂಭಿಕ ಪಂದ್ಯದಲ್ಲಿ ಭಾರತ ತಂಡ 8 ವಿಕೆಟ್ ಹೀನಾಯ ಸೋಲು ಕಂಡಿತ್ತು. ಆ ಸೋಲಿಗೆ ಭಾರತ ದ್ವಿತೀಯ ಪಂದ್ಯದಲ್ಲಿ ಪ್ರತೀಕಾರ ತೀರಿಸಿಕೊಂಡಿದೆ. ಮತ್ತೊಂದು ವಿಶೇಷೆಂದರೆ ದ್ವಿತೀಯ ಪಂದ್ಯದಲ್ಲಿ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್ ಇರಲಿಲ್ಲ. ಈ ಪ್ರಮುಖ ಆಟಗಾರರಿಲ್ಲದೆಯೂ ಭಾರತ ಟೆಸ್ಟ್ ಪಂದ್ಯ ಗೆದ್ದಿದೆ.
ವಿರಾಟ್ ಕೊಹ್ಲಿ ಸದ್ಯ ಪಿತೃತ್ವ ರಜೆ ಪಡೆದುಕೊಂಡಿದ್ದಾರೆ. ಗಾಯಕ್ಕೀಡಾಗಿದ್ದ ರೋಹಿತ್ ಶರ್ಮಾ ಇನ್ನಷ್ಟೇ ಟೆಸ್ಟ್ ತಂಡ ಸೇರಿಕೊಳ್ಳಬೇಕಿದೆ. ಇನ್ನು ವೇಗಿ ಮೊಹಮ್ಮದ್ ಶಮಿ ವಿಶ್ರಾಂತಿಯಲ್ಲಿದ್ದರೆ, ಇಶಾಂತ್ ಶರ್ಮಾ ಮತ್ತು ಭುವನೇಶ್ವರ್ ಕುಮಾರ್ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಅಂತೂ ಮೆಲ್ಬರ್ನ್ನಲ್ಲಿ ಭಾರತ ಪ್ರಮುಖ 5 ಆಟಗಾರರ ಹೊರತಾಗಿಯೂ ಪಂದ್ಯ ಗೆದ್ದು ಗಮನ ಸೆಳೆದಿದೆ.
This News Article is a Copy of MYKHEL
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm