ಬ್ರೇಕಿಂಗ್ ನ್ಯೂಸ್
02-01-21 11:41 am Source: MYKHEL Madhukara Shetty ಕ್ರೀಡೆ
ರಾಂಚಿ, ಜ.2: ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಫ್ರಿನ್ಸ್ ಆಫ್ ರಾಂಚಿ ಎಂದೇ ಖ್ಯಾತರಾಗಿರುವ ಮಹೇಂದ್ರ ಸಿಂಗ್ ಧೋನಿ ಅವರ ವಿಭಿನ್ನ ಅಭಿರುಚಿಗಳು ಕ್ರಿಕೆಟ್ ಪ್ರೇಮಿಗಳಿಗೆ ತಿಳಿದೇ ಇದೆ. ಕ್ರಿಕೆಟ್ ಹೊರತುಪಡಿಸಿ ಕೃಷಿ ಚಟುವಟಿಕೆಗಳ ಬಗ್ಗೆಯೂ ಧೋನಿ ಬಹಳ ಆಸಕ್ತಿ ಹೊಂದಿದವರಾಗಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ರಾಂಚಿಯಲ್ಲಿರುವ ಧೋನಿ ಫಾರ್ಮ್ ಹೌಸ್ನಲ್ಲಿ ತರಕಾರಿಗಳು ಬೆಳೆದು ಕಟಾವಿನ ಹಂತದಲ್ಲಿದೆ.
ಎಂಎಸ್ ಧೋನಿ ಫಾರ್ಮ್ ಹೌಸ್ನಲ್ಲಿ ಬೆಳೆದ ತರಕಾರಿಗಳನ್ನು ವಿದೇಶಕ್ಕೆ ರಫ್ತು ಮಾಡಲು ಸಿದ್ಧತೆಗಳು ನಡೆಯುತ್ತಿದೆ. ಇಲ್ಲಿ ಬೆಳೆದ ತರಕಾರಿಗಳನ್ನು ದುಬೈಗೆ ರವಾನಿಸಲಾಗುತ್ತಿದ್ದು ಅದಕ್ಕೆ ಪೂರಕವಾದ ಅಂತಿಮ ಹಂತದ ಸಿದ್ಧತೆಗಳು ಈಗ ಧೋನಿಯ ಫಾರ್ಮ್ ಹೌಸ್ನಲ್ಲಿ ನಡೆಯುತ್ತಿದೆ.
ಧೋನಿ ಫಾರ್ಮ್ ಹೌಸ್ನಲ್ಲಿ ಬೆಳೆದ ತರಕಾರಿಗಳ ಮಾರಾಟಕ್ಕೆ ಸಂಬಂಧಪಟ್ಟ ಮಾತುಕತೆಗಳು ಅಂತಿಮ ಹಂತದಲ್ಲಿದ್ದು ತರಕಾರಿಗಳನ್ನು ದುಬೈಗೆ ಕಳುಹಿಸಲು ಏಜೇನ್ಸಿಗಳನ್ನು ಕೂಡ ಆಯ್ಕೆ ಮಾಡಿಕೊಳ್ಳಲಾಗಿದೆ. ಝಾರ್ಖಂಡ್ನ ಕೃಷಿ ಇಲಾಕೆ ಎಂಎಸ್ ಧೋನಿ ತೋಟದಲ್ಲಿ ಬೆಳೆದ ತರಕಾರಿಗಳನ್ನು ವಿದೇಶಕ್ಕೆ ರವಾನಿಸುವ ಹೊಣೆಹೊತ್ತುಕೊಂಡಿದೆ.
ಝಾರ್ಖಂಡ್ನ ಸೆಂಬೋ ಗ್ರಾಮದ ರಿಂಗ್ರೋಡ್ಗೆ ಸಮೀಪದಲ್ಲಿ ಎಂಎಸ್ ಧೋನಿಯ ಪಾರ್ಮ್ ಹೌಸ್ ಇದೆ. ಇಲ್ಲಿ ಸ್ಟ್ರಾಬೆರ್ರಿ, ಕ್ಯಾಬೇಜ್, ಟೊಮ್ಯಾಟೋ, ಕೋಸುಗಡ್ಡೆ, ಬಟಾಣಿ ಪಪ್ಪಾಯ ಸೇರಿದಂತೆ ಸಾಕಷ್ಟು ತರಕಾರಿ ಹಣ್ಣುಗಳನ್ನು ಬೆಳೆಯಲಾಗುತ್ತಿದೆ. 43 ಎಕ್ರೆಯಲ್ಲಿರುವ ಪಾರ್ಮ್ ಹೌಸ್ನಲ್ಲಿ 10 ಎಕ್ರೆ ಸ್ಥಳವನ್ನು ಇವುಗಳಿಗಾಗಿಯೇ ಧೋನಿ ಮೀಸಲಿಟ್ಟಿದ್ದಾರೆ.
ಧೋನಿ ತೋಟದಲ್ಲಿ ಬೇಳೆಯಲಾಗುತ್ತಿರುವ ಕ್ಯಾಬೇಜ್, ಟೊಮ್ಯಾಟೋ ಹಾಗೂ ಬಟಾಣಿ ಕಾಳುಗಳಿಗೆ ರಾಂಚಿಯ ಮಾರುಕಟ್ಟೆಯಲ್ಲಿ ಅಪಾರವಾದ ಬೇಡಿಕೆಯಿದೆ. ಈಗ ರಾಂಚಿಯಿಂದ ನೇರವಾಗಿ ದುಬೈಗೆ ಹಾರುವ ಮೂಲಕ ಝಾರ್ಖಂಡ್ ರೈತರಿಗೆ ದುಬೈನಲ್ಲಿ ಮಾರುಕಟ್ಟೆಗೆ ವೇದಿಕೆ ಒದಗಿಸಲು ಈ ಮೂಲಕ ಧೋನಿ ಕೈಜೋಡಿಸಿದ್ದಾರೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm