ಬ್ರೇಕಿಂಗ್ ನ್ಯೂಸ್
02-01-21 11:41 am Source: MYKHEL Madhukara Shetty ಕ್ರೀಡೆ
ರಾಂಚಿ, ಜ.2: ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಫ್ರಿನ್ಸ್ ಆಫ್ ರಾಂಚಿ ಎಂದೇ ಖ್ಯಾತರಾಗಿರುವ ಮಹೇಂದ್ರ ಸಿಂಗ್ ಧೋನಿ ಅವರ ವಿಭಿನ್ನ ಅಭಿರುಚಿಗಳು ಕ್ರಿಕೆಟ್ ಪ್ರೇಮಿಗಳಿಗೆ ತಿಳಿದೇ ಇದೆ. ಕ್ರಿಕೆಟ್ ಹೊರತುಪಡಿಸಿ ಕೃಷಿ ಚಟುವಟಿಕೆಗಳ ಬಗ್ಗೆಯೂ ಧೋನಿ ಬಹಳ ಆಸಕ್ತಿ ಹೊಂದಿದವರಾಗಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ರಾಂಚಿಯಲ್ಲಿರುವ ಧೋನಿ ಫಾರ್ಮ್ ಹೌಸ್ನಲ್ಲಿ ತರಕಾರಿಗಳು ಬೆಳೆದು ಕಟಾವಿನ ಹಂತದಲ್ಲಿದೆ.
ಎಂಎಸ್ ಧೋನಿ ಫಾರ್ಮ್ ಹೌಸ್ನಲ್ಲಿ ಬೆಳೆದ ತರಕಾರಿಗಳನ್ನು ವಿದೇಶಕ್ಕೆ ರಫ್ತು ಮಾಡಲು ಸಿದ್ಧತೆಗಳು ನಡೆಯುತ್ತಿದೆ. ಇಲ್ಲಿ ಬೆಳೆದ ತರಕಾರಿಗಳನ್ನು ದುಬೈಗೆ ರವಾನಿಸಲಾಗುತ್ತಿದ್ದು ಅದಕ್ಕೆ ಪೂರಕವಾದ ಅಂತಿಮ ಹಂತದ ಸಿದ್ಧತೆಗಳು ಈಗ ಧೋನಿಯ ಫಾರ್ಮ್ ಹೌಸ್ನಲ್ಲಿ ನಡೆಯುತ್ತಿದೆ.
ಧೋನಿ ಫಾರ್ಮ್ ಹೌಸ್ನಲ್ಲಿ ಬೆಳೆದ ತರಕಾರಿಗಳ ಮಾರಾಟಕ್ಕೆ ಸಂಬಂಧಪಟ್ಟ ಮಾತುಕತೆಗಳು ಅಂತಿಮ ಹಂತದಲ್ಲಿದ್ದು ತರಕಾರಿಗಳನ್ನು ದುಬೈಗೆ ಕಳುಹಿಸಲು ಏಜೇನ್ಸಿಗಳನ್ನು ಕೂಡ ಆಯ್ಕೆ ಮಾಡಿಕೊಳ್ಳಲಾಗಿದೆ. ಝಾರ್ಖಂಡ್ನ ಕೃಷಿ ಇಲಾಕೆ ಎಂಎಸ್ ಧೋನಿ ತೋಟದಲ್ಲಿ ಬೆಳೆದ ತರಕಾರಿಗಳನ್ನು ವಿದೇಶಕ್ಕೆ ರವಾನಿಸುವ ಹೊಣೆಹೊತ್ತುಕೊಂಡಿದೆ.
ಝಾರ್ಖಂಡ್ನ ಸೆಂಬೋ ಗ್ರಾಮದ ರಿಂಗ್ರೋಡ್ಗೆ ಸಮೀಪದಲ್ಲಿ ಎಂಎಸ್ ಧೋನಿಯ ಪಾರ್ಮ್ ಹೌಸ್ ಇದೆ. ಇಲ್ಲಿ ಸ್ಟ್ರಾಬೆರ್ರಿ, ಕ್ಯಾಬೇಜ್, ಟೊಮ್ಯಾಟೋ, ಕೋಸುಗಡ್ಡೆ, ಬಟಾಣಿ ಪಪ್ಪಾಯ ಸೇರಿದಂತೆ ಸಾಕಷ್ಟು ತರಕಾರಿ ಹಣ್ಣುಗಳನ್ನು ಬೆಳೆಯಲಾಗುತ್ತಿದೆ. 43 ಎಕ್ರೆಯಲ್ಲಿರುವ ಪಾರ್ಮ್ ಹೌಸ್ನಲ್ಲಿ 10 ಎಕ್ರೆ ಸ್ಥಳವನ್ನು ಇವುಗಳಿಗಾಗಿಯೇ ಧೋನಿ ಮೀಸಲಿಟ್ಟಿದ್ದಾರೆ.
ಧೋನಿ ತೋಟದಲ್ಲಿ ಬೇಳೆಯಲಾಗುತ್ತಿರುವ ಕ್ಯಾಬೇಜ್, ಟೊಮ್ಯಾಟೋ ಹಾಗೂ ಬಟಾಣಿ ಕಾಳುಗಳಿಗೆ ರಾಂಚಿಯ ಮಾರುಕಟ್ಟೆಯಲ್ಲಿ ಅಪಾರವಾದ ಬೇಡಿಕೆಯಿದೆ. ಈಗ ರಾಂಚಿಯಿಂದ ನೇರವಾಗಿ ದುಬೈಗೆ ಹಾರುವ ಮೂಲಕ ಝಾರ್ಖಂಡ್ ರೈತರಿಗೆ ದುಬೈನಲ್ಲಿ ಮಾರುಕಟ್ಟೆಗೆ ವೇದಿಕೆ ಒದಗಿಸಲು ಈ ಮೂಲಕ ಧೋನಿ ಕೈಜೋಡಿಸಿದ್ದಾರೆ.
This News Article is a Copy of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am