ಬ್ರೇಕಿಂಗ್ ನ್ಯೂಸ್
02-01-21 11:48 am Source: MYKHEL Sadashiva ಕ್ರೀಡೆ
ಸಿಡ್ನಿ, ಜ.2: ಆಸ್ಟ್ರೇಲಿಯಾ ಪ್ರವಾಸ ಸರಣಿಗಾಗಿ ಟೀಮ್ ಇಂಡಿಯಾ ಸೇರಿಕೊಂಡಿರುವ ಭಾರತದ ಅನುಭವಿ ಬ್ಯಾಟ್ಸ್ಮನ್ ರೋಹಿತ್ ಶರ್ಮಾಗೆ ಉಪನಾಯಕನ ಸ್ಥಾನ ಲಭಿಸಿದೆ. ಸರಣಿಯಿಂದ ಹೊರ ಬಿದ್ದಿರುವ ಟೆಸ್ಟ್ ಸ್ಪೆಷಾಲಿಸ್ಟ್ ಚೇತೇಶ್ವರ ಪೂಜಾರ ಬದಲಿಗೆ ಉಪನಾಯಕ ಜವಾಬ್ದಾರಿ ಶರ್ಮಾ ವಹಿಸಿಕೊಳ್ಳಲಿದ್ದಾರೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ 1-1ರಿಂದ ಸಮಬಲಗೊಂಡಿರುವುದರಿಂದ ಆಸ್ಟ್ರೇಲಿಯಾ-ಭಾರತ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಇನ್ನಷ್ಟು ಕುತೂಹಲ ಮೂಡಿಸಿದೆ.
'ಹಿಟ್ಮ್ಯಾನ್' ರೋಹಿತ್ ಶರ್ಮಾ ಸೇರಿಕೊಂಡಿರುವುದು ಭಾರತ ತಂಡಕ್ಕೆ ಆನೆ ಬಲ ತಂದಿದೆ. ಹಾಗಂತ ರೋಹಿತ್ ಬ್ಯಾಟಿಂಗ್ ಮಾಡುವ ಬಗ್ಗೆ ಹೊಸದೊಂದು ಗೊಂದಲ ಶುರುವಾಗಿದೆ. ಅದು ಶರ್ಮಾ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ. ರೋಹಿತ್ ಆರಂಭಿಕರಾಗಿ ಆಡಬೇಕೋ ಬೇಡವೋ ಎನ್ನುವ ಬಗ್ಗೆ.
ಭಾರತ-ಆಸ್ಟ್ರೇಲಿಯಾ ಮೂರನೇ ಟೆಸ್ಟ್ ಪಂದ್ಯ ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ಡಿಸೆಂಬರ್ 7ರ ಗುರುವಾರ 5 AMಗೆ ಆರಂಭಗೊಳ್ಳಲಿದೆ.

ಅಪಾಯಕಾರಿ ಆರಂಭಿಕ ಬ್ಯಾಟ್ಸ್ಮನ್
ನಿಯಮಿತ ಓವರ್ಗಳ ಕ್ರಿಕೆಟ್ನಲ್ಲಿ ವಿಶ್ವದ ಅಪಾಯಕಾರಿ ಆರಂಭಿಕ ಬ್ಯಾಟ್ಸ್ಮನ್ಗಳಲ್ಲಿ ರೋಹಿತ್ ಕೂಡ ಒಬ್ಬರು. ಸದ್ಯ ಅಲ್ಲದಿದ್ದರೂ, ರೋಹಿತ್ ಆರಂಭಿಕರಾಗಿದ್ದುಕೊಂಡೇ ಸ್ಫೋಟಕ ಬ್ಯಾಟಿಂಗ್ ನಡೆಸಿದಿದೆ. ಆದರೆ ಟೆಸ್ಟ್ನಲ್ಲಿ ರೋಹಿತ್ ಪಂದ್ಯಗಳನ್ನಾಡಿದ್ದು ಕಡಿಮೆ. ಅದರಲ್ಲೂ ಆರಂಭಿಕರಾಗಿ ಆಡಿದ್ದು ಇನ್ನೂ ಕಡಿಮೆ. ಆದರೆ ಆರಂಭಿಕರಾಗಿ ಆಡಿದ ಮೂರೇ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು.

ದಕ್ಷಿಣ ಆಫ್ರಿಕಾ ವಿರುದ್ಧ 3 ಶತಕ
2019ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 3 ಟೆಸ್ಟ್ ಪಂದ್ಯಗಳಲ್ಲಿ ಆರಂಭಿಕರಾಗಿ ಆಡಿದ್ದ ಶರ್ಮಾ 132.25ರ ಸರಾಸರಿಯಂತೆ 529 ರನ್ ಬಾರಿಸಿದ್ದರು. ಇದರಲ್ಲಿ 3 ಶತಕಗಳಲ್ಲದೆ 212 ವೈಯಕ್ತಿಕ ಅತ್ಯಧಿಕ ರನ್ ಕೂಡ ಸೇರಿತ್ತು. ಆದರೆ ರೋಹಿತ್ ಟೆಸ್ಟ್ ಆಡಿ ಬಹಳಷ್ಟು ಅಂತರವಾಗಿರುವುದರಿಂದ ಆಸ್ಟ್ರೇಲಿಯಾ ವಿರುದ್ಧ ಮೂರನೇ ಪಂದ್ಯದಲ್ಲಿ ಆರಂಭಿಕರಾಗಿ ಆಡಿಸಬೇಕೋ ಬೇಡವೋ ಎಂಬ ಗೊಂದಲ ಶುರುವಾಗಿದೆ.

ಓಪನರ್ ಆಗಿ ಬರ್ತಾರ ರೋಹಿತ್?
ರೋಹಿತ್ ಟೆಸ್ಟ್ನಲ್ಲಿ ಆರಂಭಿಕರಾಗಿ ಬ್ಯಾಟಿಂಗ್ ಆಡಿದ್ದು ಕಡಿಮೆ. 7 ಅಥವಾ 5ನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಆಡಿದ್ದೇ ಹೆಚ್ಚು. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ತೃತೀಯ ಟೆಸ್ಟ್ನಲ್ಲಿ ರೋಹಿತ್ ಯಾವ ಕ್ರಮಾಂಕದಲ್ಲಿ ಬರಲಿದ್ದಾರೆ ಅನ್ನೋದು ಕುತೂಹಲ ಮೂಡಿಸಿದೆ. ರೋಹಿತ್ ಆರಂಭಿಕರಾಗಿ ಇಳಿದರೆ ಅವರಿಗೆ ಜೊತೆಯಾಗಿ ಯಾರು ಬರಲಿದ್ದಾರೆ ಅನ್ನೋದು ಕಾದು ನೋಡಬೇಕಾಗಿದೆ.
This News Article is a Copy of MYKHEL
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm