ಬ್ರೇಕಿಂಗ್ ನ್ಯೂಸ್
02-01-21 11:48 am Source: MYKHEL Sadashiva ಕ್ರೀಡೆ
ಸಿಡ್ನಿ, ಜ.2: ಆಸ್ಟ್ರೇಲಿಯಾ ಪ್ರವಾಸ ಸರಣಿಗಾಗಿ ಟೀಮ್ ಇಂಡಿಯಾ ಸೇರಿಕೊಂಡಿರುವ ಭಾರತದ ಅನುಭವಿ ಬ್ಯಾಟ್ಸ್ಮನ್ ರೋಹಿತ್ ಶರ್ಮಾಗೆ ಉಪನಾಯಕನ ಸ್ಥಾನ ಲಭಿಸಿದೆ. ಸರಣಿಯಿಂದ ಹೊರ ಬಿದ್ದಿರುವ ಟೆಸ್ಟ್ ಸ್ಪೆಷಾಲಿಸ್ಟ್ ಚೇತೇಶ್ವರ ಪೂಜಾರ ಬದಲಿಗೆ ಉಪನಾಯಕ ಜವಾಬ್ದಾರಿ ಶರ್ಮಾ ವಹಿಸಿಕೊಳ್ಳಲಿದ್ದಾರೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ 1-1ರಿಂದ ಸಮಬಲಗೊಂಡಿರುವುದರಿಂದ ಆಸ್ಟ್ರೇಲಿಯಾ-ಭಾರತ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಇನ್ನಷ್ಟು ಕುತೂಹಲ ಮೂಡಿಸಿದೆ.
'ಹಿಟ್ಮ್ಯಾನ್' ರೋಹಿತ್ ಶರ್ಮಾ ಸೇರಿಕೊಂಡಿರುವುದು ಭಾರತ ತಂಡಕ್ಕೆ ಆನೆ ಬಲ ತಂದಿದೆ. ಹಾಗಂತ ರೋಹಿತ್ ಬ್ಯಾಟಿಂಗ್ ಮಾಡುವ ಬಗ್ಗೆ ಹೊಸದೊಂದು ಗೊಂದಲ ಶುರುವಾಗಿದೆ. ಅದು ಶರ್ಮಾ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ. ರೋಹಿತ್ ಆರಂಭಿಕರಾಗಿ ಆಡಬೇಕೋ ಬೇಡವೋ ಎನ್ನುವ ಬಗ್ಗೆ.
ಭಾರತ-ಆಸ್ಟ್ರೇಲಿಯಾ ಮೂರನೇ ಟೆಸ್ಟ್ ಪಂದ್ಯ ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ಡಿಸೆಂಬರ್ 7ರ ಗುರುವಾರ 5 AMಗೆ ಆರಂಭಗೊಳ್ಳಲಿದೆ.

ಅಪಾಯಕಾರಿ ಆರಂಭಿಕ ಬ್ಯಾಟ್ಸ್ಮನ್
ನಿಯಮಿತ ಓವರ್ಗಳ ಕ್ರಿಕೆಟ್ನಲ್ಲಿ ವಿಶ್ವದ ಅಪಾಯಕಾರಿ ಆರಂಭಿಕ ಬ್ಯಾಟ್ಸ್ಮನ್ಗಳಲ್ಲಿ ರೋಹಿತ್ ಕೂಡ ಒಬ್ಬರು. ಸದ್ಯ ಅಲ್ಲದಿದ್ದರೂ, ರೋಹಿತ್ ಆರಂಭಿಕರಾಗಿದ್ದುಕೊಂಡೇ ಸ್ಫೋಟಕ ಬ್ಯಾಟಿಂಗ್ ನಡೆಸಿದಿದೆ. ಆದರೆ ಟೆಸ್ಟ್ನಲ್ಲಿ ರೋಹಿತ್ ಪಂದ್ಯಗಳನ್ನಾಡಿದ್ದು ಕಡಿಮೆ. ಅದರಲ್ಲೂ ಆರಂಭಿಕರಾಗಿ ಆಡಿದ್ದು ಇನ್ನೂ ಕಡಿಮೆ. ಆದರೆ ಆರಂಭಿಕರಾಗಿ ಆಡಿದ ಮೂರೇ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು.

ದಕ್ಷಿಣ ಆಫ್ರಿಕಾ ವಿರುದ್ಧ 3 ಶತಕ
2019ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 3 ಟೆಸ್ಟ್ ಪಂದ್ಯಗಳಲ್ಲಿ ಆರಂಭಿಕರಾಗಿ ಆಡಿದ್ದ ಶರ್ಮಾ 132.25ರ ಸರಾಸರಿಯಂತೆ 529 ರನ್ ಬಾರಿಸಿದ್ದರು. ಇದರಲ್ಲಿ 3 ಶತಕಗಳಲ್ಲದೆ 212 ವೈಯಕ್ತಿಕ ಅತ್ಯಧಿಕ ರನ್ ಕೂಡ ಸೇರಿತ್ತು. ಆದರೆ ರೋಹಿತ್ ಟೆಸ್ಟ್ ಆಡಿ ಬಹಳಷ್ಟು ಅಂತರವಾಗಿರುವುದರಿಂದ ಆಸ್ಟ್ರೇಲಿಯಾ ವಿರುದ್ಧ ಮೂರನೇ ಪಂದ್ಯದಲ್ಲಿ ಆರಂಭಿಕರಾಗಿ ಆಡಿಸಬೇಕೋ ಬೇಡವೋ ಎಂಬ ಗೊಂದಲ ಶುರುವಾಗಿದೆ.

ಓಪನರ್ ಆಗಿ ಬರ್ತಾರ ರೋಹಿತ್?
ರೋಹಿತ್ ಟೆಸ್ಟ್ನಲ್ಲಿ ಆರಂಭಿಕರಾಗಿ ಬ್ಯಾಟಿಂಗ್ ಆಡಿದ್ದು ಕಡಿಮೆ. 7 ಅಥವಾ 5ನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಆಡಿದ್ದೇ ಹೆಚ್ಚು. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ತೃತೀಯ ಟೆಸ್ಟ್ನಲ್ಲಿ ರೋಹಿತ್ ಯಾವ ಕ್ರಮಾಂಕದಲ್ಲಿ ಬರಲಿದ್ದಾರೆ ಅನ್ನೋದು ಕುತೂಹಲ ಮೂಡಿಸಿದೆ. ರೋಹಿತ್ ಆರಂಭಿಕರಾಗಿ ಇಳಿದರೆ ಅವರಿಗೆ ಜೊತೆಯಾಗಿ ಯಾರು ಬರಲಿದ್ದಾರೆ ಅನ್ನೋದು ಕಾದು ನೋಡಬೇಕಾಗಿದೆ.
This News Article is a Copy of MYKHEL
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm