ಬ್ರೇಕಿಂಗ್ ನ್ಯೂಸ್
02-01-21 11:48 am Source: MYKHEL Sadashiva ಕ್ರೀಡೆ
ಸಿಡ್ನಿ, ಜ.2: ಆಸ್ಟ್ರೇಲಿಯಾ ಪ್ರವಾಸ ಸರಣಿಗಾಗಿ ಟೀಮ್ ಇಂಡಿಯಾ ಸೇರಿಕೊಂಡಿರುವ ಭಾರತದ ಅನುಭವಿ ಬ್ಯಾಟ್ಸ್ಮನ್ ರೋಹಿತ್ ಶರ್ಮಾಗೆ ಉಪನಾಯಕನ ಸ್ಥಾನ ಲಭಿಸಿದೆ. ಸರಣಿಯಿಂದ ಹೊರ ಬಿದ್ದಿರುವ ಟೆಸ್ಟ್ ಸ್ಪೆಷಾಲಿಸ್ಟ್ ಚೇತೇಶ್ವರ ಪೂಜಾರ ಬದಲಿಗೆ ಉಪನಾಯಕ ಜವಾಬ್ದಾರಿ ಶರ್ಮಾ ವಹಿಸಿಕೊಳ್ಳಲಿದ್ದಾರೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ 1-1ರಿಂದ ಸಮಬಲಗೊಂಡಿರುವುದರಿಂದ ಆಸ್ಟ್ರೇಲಿಯಾ-ಭಾರತ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಇನ್ನಷ್ಟು ಕುತೂಹಲ ಮೂಡಿಸಿದೆ.
'ಹಿಟ್ಮ್ಯಾನ್' ರೋಹಿತ್ ಶರ್ಮಾ ಸೇರಿಕೊಂಡಿರುವುದು ಭಾರತ ತಂಡಕ್ಕೆ ಆನೆ ಬಲ ತಂದಿದೆ. ಹಾಗಂತ ರೋಹಿತ್ ಬ್ಯಾಟಿಂಗ್ ಮಾಡುವ ಬಗ್ಗೆ ಹೊಸದೊಂದು ಗೊಂದಲ ಶುರುವಾಗಿದೆ. ಅದು ಶರ್ಮಾ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ. ರೋಹಿತ್ ಆರಂಭಿಕರಾಗಿ ಆಡಬೇಕೋ ಬೇಡವೋ ಎನ್ನುವ ಬಗ್ಗೆ.
ಭಾರತ-ಆಸ್ಟ್ರೇಲಿಯಾ ಮೂರನೇ ಟೆಸ್ಟ್ ಪಂದ್ಯ ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ಡಿಸೆಂಬರ್ 7ರ ಗುರುವಾರ 5 AMಗೆ ಆರಂಭಗೊಳ್ಳಲಿದೆ.

ಅಪಾಯಕಾರಿ ಆರಂಭಿಕ ಬ್ಯಾಟ್ಸ್ಮನ್
ನಿಯಮಿತ ಓವರ್ಗಳ ಕ್ರಿಕೆಟ್ನಲ್ಲಿ ವಿಶ್ವದ ಅಪಾಯಕಾರಿ ಆರಂಭಿಕ ಬ್ಯಾಟ್ಸ್ಮನ್ಗಳಲ್ಲಿ ರೋಹಿತ್ ಕೂಡ ಒಬ್ಬರು. ಸದ್ಯ ಅಲ್ಲದಿದ್ದರೂ, ರೋಹಿತ್ ಆರಂಭಿಕರಾಗಿದ್ದುಕೊಂಡೇ ಸ್ಫೋಟಕ ಬ್ಯಾಟಿಂಗ್ ನಡೆಸಿದಿದೆ. ಆದರೆ ಟೆಸ್ಟ್ನಲ್ಲಿ ರೋಹಿತ್ ಪಂದ್ಯಗಳನ್ನಾಡಿದ್ದು ಕಡಿಮೆ. ಅದರಲ್ಲೂ ಆರಂಭಿಕರಾಗಿ ಆಡಿದ್ದು ಇನ್ನೂ ಕಡಿಮೆ. ಆದರೆ ಆರಂಭಿಕರಾಗಿ ಆಡಿದ ಮೂರೇ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು.

ದಕ್ಷಿಣ ಆಫ್ರಿಕಾ ವಿರುದ್ಧ 3 ಶತಕ
2019ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 3 ಟೆಸ್ಟ್ ಪಂದ್ಯಗಳಲ್ಲಿ ಆರಂಭಿಕರಾಗಿ ಆಡಿದ್ದ ಶರ್ಮಾ 132.25ರ ಸರಾಸರಿಯಂತೆ 529 ರನ್ ಬಾರಿಸಿದ್ದರು. ಇದರಲ್ಲಿ 3 ಶತಕಗಳಲ್ಲದೆ 212 ವೈಯಕ್ತಿಕ ಅತ್ಯಧಿಕ ರನ್ ಕೂಡ ಸೇರಿತ್ತು. ಆದರೆ ರೋಹಿತ್ ಟೆಸ್ಟ್ ಆಡಿ ಬಹಳಷ್ಟು ಅಂತರವಾಗಿರುವುದರಿಂದ ಆಸ್ಟ್ರೇಲಿಯಾ ವಿರುದ್ಧ ಮೂರನೇ ಪಂದ್ಯದಲ್ಲಿ ಆರಂಭಿಕರಾಗಿ ಆಡಿಸಬೇಕೋ ಬೇಡವೋ ಎಂಬ ಗೊಂದಲ ಶುರುವಾಗಿದೆ.

ಓಪನರ್ ಆಗಿ ಬರ್ತಾರ ರೋಹಿತ್?
ರೋಹಿತ್ ಟೆಸ್ಟ್ನಲ್ಲಿ ಆರಂಭಿಕರಾಗಿ ಬ್ಯಾಟಿಂಗ್ ಆಡಿದ್ದು ಕಡಿಮೆ. 7 ಅಥವಾ 5ನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಆಡಿದ್ದೇ ಹೆಚ್ಚು. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ತೃತೀಯ ಟೆಸ್ಟ್ನಲ್ಲಿ ರೋಹಿತ್ ಯಾವ ಕ್ರಮಾಂಕದಲ್ಲಿ ಬರಲಿದ್ದಾರೆ ಅನ್ನೋದು ಕುತೂಹಲ ಮೂಡಿಸಿದೆ. ರೋಹಿತ್ ಆರಂಭಿಕರಾಗಿ ಇಳಿದರೆ ಅವರಿಗೆ ಜೊತೆಯಾಗಿ ಯಾರು ಬರಲಿದ್ದಾರೆ ಅನ್ನೋದು ಕಾದು ನೋಡಬೇಕಾಗಿದೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm