ಬ್ರೇಕಿಂಗ್ ನ್ಯೂಸ್
04-01-21 03:07 pm Source: MYKHEL ಕ್ರೀಡೆ
ಸಿಡ್ನಿ: ಸಿಡ್ನಿ ಟೆಸ್ಟ್ಗೆ ದಿನಗಣನೆ ಆರಂಭವಾಗಿದ್ದು ಸೋಮವಾರ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾದ ಎಲ್ಲಾ ಆಟಗಾರರು ಮೆಲ್ಬರ್ನ್ನಿಂದ ಸಿಡ್ನಿಗೆ ಪ್ರಯಾಣ ಬೆಳೆಸಲಿದ್ದಾರೆ. ಭಾನುವಾರ ಕೊರೊನಾ ಪರೀಕ್ಷೆ ನಡೆದಿದ್ದು ಎಲ್ಲರ ವರದಿಯೂ ನೆಗೆಟಿವ್ ಬಂದಿರುವುದು ನಿರಾಳತೆ ಮೂಡಿಸಿದೆ. ಈ ಮಧ್ಯೆ ಸಿಡ್ನಿ ಟೆಸ್ಟ್ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ತಂಡದ ವೇಗದ ಬೌಲರ್ ಜೇಮ್ಸ್ ಪ್ಯಾಟಿನ್ಸನ್ ತಂಡದಿಂದ ಹೊರಬಿದ್ದಿದ್ದಾರೆ.
ಜನವರಿ 7ರಂದು ಮೂರನೇ ಟೆಸ್ಟ್ ಪಂದ್ಯ ನಡೆಯಲಿದ್ದು ಅದಕ್ಕೂ ಮುನ್ನ ಆಸ್ಟ್ರೇಲಿಯಾ ತಂಡದ ವೇಗದ ಬೌಲರ್ ಜೇಮ್ಸ್ ಪ್ಯಾಟಿನ್ಸನ್ ತಮ್ಮ ಮನೆಯಲ್ಲಿ ಆಯತಪ್ಪಿ ಬಿದ್ದಿದ್ದು ಗಾಯಗೊಂಡಿದ್ದಾರೆ. ಹೀಗಾಗಿ ಪ್ಯಾಟಿನ್ಸನ್ ಮೂರನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.
ಜೇಮ್ಸ್ ಪ್ಯಾಟಿನ್ಸನ್ ಮೊದಲೆರಡು ಪಂದ್ಯಗಳಲ್ಲೂ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವಲ್ಲಿ ವಿಫಲರಾಗಿದ್ದರು. ಜೋಶ್ ಹ್ಯಾಜಲ್ವುಡ್, ಪ್ಯಾಟ್ ಕಮ್ಮಿನ್ಸ್ ಹಾಗೂ ಮಿಚೆಲ್ ಸ್ಟಾರ್ಕ್ ಅವರಂತಾ ವೇಗದ ಬೌಲರ್ಗಳು ತಂಡದಲ್ಲಿರುವ ಕಾರಣ ಪ್ಯಾಟಿನ್ಸನ್ ಬೆಂಚ್ ಕಾಯಬೇಕಾಗಿತ್ತು. ಮತ್ತೊಂದೆಡೆ ಸಿಡ್ನಿಯಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯಕ್ಕೆ ಆಗಮಿಸುವ ವೀಕ್ಷಕರ ವಿಚಾರದಲ್ಲೂ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಶೇಕಡಾ 50 ರಷ್ಟು ಅಭಿಮಾನಿಗಳಿಗೆ ಅವಕಾಶ ನೀಡುವ ನಿರ್ಧಾರವನ್ನು ಬದಲಾಯಿಸಲಾಗಿದ್ದು ಶೇಕಡಾ 25 ರಷ್ಟು ಅಭಿಮಾನಿಗಳು ಮಾತ್ರವೇ ಆರಂಭದಲ್ಲಿ ಸಿಡ್ನಿ ಅಂಗಳಕ್ಕೆ ಅವಕಾಶ ನೀಡಲಾಗುತ್ತದೆ. ಸಿಡ್ನಿ ಕ್ರಿಕೆಟ್ ಮೈದಾನ 38,000 ಪ್ರೇಕ್ಷಕರ ಸಾಮರ್ಥ್ಯವನ್ನು ಹೊಂದಿದ್ದು 9500ರಷ್ಟು ಪ್ರೇಕ್ಷಕರು ಮಾತ್ರವೇ ಆರಂಭದಲ್ಲಿ ವೀಕ್ಷಣೆಗೆ ಅವಕಾಶವಿದೆ.
ನ್ಯೂಸೌತ್ ವೇಲ್ಸ್ ರಾಜ್ಯದಲ್ಲಿ ಎರಡನೇ ಅಲೆಯ ಕೊರೊನಾ ವೈರಸ್ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿ ಕಂಡುಬರುತ್ತಿದ್ದು ಈ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕಾ ಕ್ರಮವನ್ನು ತೆಗೆದುಕೊಂಡಿದೆ. ಅದರ ಪರಿಣಾಮವಾಗಿ ವೀಕ್ಷಕರ ಸಂಖ್ಯೆಯಲ್ಲೂ ಖಡಿತಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm