ಬ್ರೇಕಿಂಗ್ ನ್ಯೂಸ್
04-01-21 03:07 pm Source: MYKHEL ಕ್ರೀಡೆ
ಸಿಡ್ನಿ: ಸಿಡ್ನಿ ಟೆಸ್ಟ್ಗೆ ದಿನಗಣನೆ ಆರಂಭವಾಗಿದ್ದು ಸೋಮವಾರ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾದ ಎಲ್ಲಾ ಆಟಗಾರರು ಮೆಲ್ಬರ್ನ್ನಿಂದ ಸಿಡ್ನಿಗೆ ಪ್ರಯಾಣ ಬೆಳೆಸಲಿದ್ದಾರೆ. ಭಾನುವಾರ ಕೊರೊನಾ ಪರೀಕ್ಷೆ ನಡೆದಿದ್ದು ಎಲ್ಲರ ವರದಿಯೂ ನೆಗೆಟಿವ್ ಬಂದಿರುವುದು ನಿರಾಳತೆ ಮೂಡಿಸಿದೆ. ಈ ಮಧ್ಯೆ ಸಿಡ್ನಿ ಟೆಸ್ಟ್ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ತಂಡದ ವೇಗದ ಬೌಲರ್ ಜೇಮ್ಸ್ ಪ್ಯಾಟಿನ್ಸನ್ ತಂಡದಿಂದ ಹೊರಬಿದ್ದಿದ್ದಾರೆ.
ಜನವರಿ 7ರಂದು ಮೂರನೇ ಟೆಸ್ಟ್ ಪಂದ್ಯ ನಡೆಯಲಿದ್ದು ಅದಕ್ಕೂ ಮುನ್ನ ಆಸ್ಟ್ರೇಲಿಯಾ ತಂಡದ ವೇಗದ ಬೌಲರ್ ಜೇಮ್ಸ್ ಪ್ಯಾಟಿನ್ಸನ್ ತಮ್ಮ ಮನೆಯಲ್ಲಿ ಆಯತಪ್ಪಿ ಬಿದ್ದಿದ್ದು ಗಾಯಗೊಂಡಿದ್ದಾರೆ. ಹೀಗಾಗಿ ಪ್ಯಾಟಿನ್ಸನ್ ಮೂರನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.
ಜೇಮ್ಸ್ ಪ್ಯಾಟಿನ್ಸನ್ ಮೊದಲೆರಡು ಪಂದ್ಯಗಳಲ್ಲೂ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವಲ್ಲಿ ವಿಫಲರಾಗಿದ್ದರು. ಜೋಶ್ ಹ್ಯಾಜಲ್ವುಡ್, ಪ್ಯಾಟ್ ಕಮ್ಮಿನ್ಸ್ ಹಾಗೂ ಮಿಚೆಲ್ ಸ್ಟಾರ್ಕ್ ಅವರಂತಾ ವೇಗದ ಬೌಲರ್ಗಳು ತಂಡದಲ್ಲಿರುವ ಕಾರಣ ಪ್ಯಾಟಿನ್ಸನ್ ಬೆಂಚ್ ಕಾಯಬೇಕಾಗಿತ್ತು. ಮತ್ತೊಂದೆಡೆ ಸಿಡ್ನಿಯಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯಕ್ಕೆ ಆಗಮಿಸುವ ವೀಕ್ಷಕರ ವಿಚಾರದಲ್ಲೂ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಶೇಕಡಾ 50 ರಷ್ಟು ಅಭಿಮಾನಿಗಳಿಗೆ ಅವಕಾಶ ನೀಡುವ ನಿರ್ಧಾರವನ್ನು ಬದಲಾಯಿಸಲಾಗಿದ್ದು ಶೇಕಡಾ 25 ರಷ್ಟು ಅಭಿಮಾನಿಗಳು ಮಾತ್ರವೇ ಆರಂಭದಲ್ಲಿ ಸಿಡ್ನಿ ಅಂಗಳಕ್ಕೆ ಅವಕಾಶ ನೀಡಲಾಗುತ್ತದೆ. ಸಿಡ್ನಿ ಕ್ರಿಕೆಟ್ ಮೈದಾನ 38,000 ಪ್ರೇಕ್ಷಕರ ಸಾಮರ್ಥ್ಯವನ್ನು ಹೊಂದಿದ್ದು 9500ರಷ್ಟು ಪ್ರೇಕ್ಷಕರು ಮಾತ್ರವೇ ಆರಂಭದಲ್ಲಿ ವೀಕ್ಷಣೆಗೆ ಅವಕಾಶವಿದೆ.
ನ್ಯೂಸೌತ್ ವೇಲ್ಸ್ ರಾಜ್ಯದಲ್ಲಿ ಎರಡನೇ ಅಲೆಯ ಕೊರೊನಾ ವೈರಸ್ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿ ಕಂಡುಬರುತ್ತಿದ್ದು ಈ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕಾ ಕ್ರಮವನ್ನು ತೆಗೆದುಕೊಂಡಿದೆ. ಅದರ ಪರಿಣಾಮವಾಗಿ ವೀಕ್ಷಕರ ಸಂಖ್ಯೆಯಲ್ಲೂ ಖಡಿತಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
This News Article is a Copy of MYKHEL
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm