ಬ್ರೇಕಿಂಗ್ ನ್ಯೂಸ್
05-01-21 04:59 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾ ಮಾಜಿ ನಾಯಕ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಲಘು ಹೃದಯಾಘಾತದಿಂದ ಕೊಲ್ಕತ್ತಾದ ಖಾಸಗೀ ಆಸ್ಪತ್ರೆಗೆ ದಾಖಲಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಇಂದು ಸೌರವ್ ಗಂಗೂಲಿ ದಾಖಲಾಗಿರುವ ವುಡ್ಲ್ಯಾಂಡ್ಸ್ ಆಸ್ಪತ್ರೆಗೆ ದೇಶದ ಖ್ಯಾತ ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿ ಭೇಟಿ ನೀಡಿ ಸೌರವ್ ಗಂಗೂಲಿಯನ್ನು ಪರೀಕ್ಷಿಸಿದ್ದಾರೆ.
ಆ ಬಳಿಕ ಮಾತನಾಡಿದ ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಬುಧವಾರ ಅವರು ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಲಿದ್ದು ತಮ್ಮ ನಿವಾಸಕ್ಕೆ ಮರಳಲಿದ್ದಾರೆ ಎಂದು ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ಮಾಹಿತಿ ನೀಡಿದ್ದಾರೆ.
ಇದೀ ಸಂದರ್ಭದಲ್ಲಿ ವುಡ್ಲ್ಯಾಂಡ್ಸ್ ಆಸ್ಪತ್ರೆಯ ಮುಖ್ಯಸ್ಥೆ ಡಾ. ರೂಪಾಲಿ ಬಸು ಬುಧವಾರ ಸೌರವ್ ಗಂಗೂಲಿ ತಮ್ಮ ನಿವಾಸಕ್ಕೆ ಮರಳಲಿದ್ದು ಅದಾದ ಬಳಿಕವೂ ಅವರ ಆರೋಗ್ಯದ ಮೇಲೆ ನಿತ್ಯವೂ ವೈದ್ಯರು ನಿಗಾ ವಹಿಸಲಿದ್ದಾರೆ. ಮುಂದಿನ ಎರಡು ಮೂರು ವಾರಗಳಲ್ಲಿ ಸೌರವ್ ಗಂಗೂಲಿ ಮುಂದಿನ ವೈದ್ಯಕೀಯ ಕ್ರಮಗಳಿಗೆ ಸಿದ್ಧರಾಗಲಿದ್ದಾರೆ ಎಂದಿದ್ದಾರೆ. ಸೋಮವಾರ ಕೇಂದ್ರ ಸಚಿವ ಅನುರಾಗ್ ಠಾಕೂರ್ ವುಡ್ಲ್ಯಾಂಡ್ಸ್ ಆಸ್ಪತ್ರೆಗೆ ಭೆಟಿ ನೀಡಿ ಸೌರವ್ ಗಂಗೂಲಿಯವರ ಆರೋಗ್ಯವನ್ನು ವಿಚಾರಿಸಿದ್ದರು. ಬಳಿಕ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ರಾಜ್ಯಸಭಾ ಸದಸ್ಯ ಸ್ವಪ್ನ್ ದಾಸ್ ಗುಪ್ತ, ಹಿರಿಯ ಕಾಂಗ್ರೆಸ್ ಮುಖಂಡ ಅಬ್ದುಕ್ ಮನ್ನನ್ ಕೂಡ ಆಸ್ಪತ್ರೆಗೆ ಭೆಟಿ ನೀಡಿದ್ದರು.
ಇದಕ್ಕೂ ಮುನ್ನ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಸೌರವ್ ಗಂಗೂಲಿ ಜೊತೆಗೆ ಮಾತನಾಡಿದ್ದು ಶೀಘ್ರ ಚೇತರಿಕೆಗೆ ಶುಭ ಹಾರೈಸಿದ್ದರು. ಬಳಿಕ ಪತ್ನಿ ಡೋನಾ ಗಂಗೂಲಿ ಜೊತೆಗೂ ಪ್ರಧಾನಿ ಮಾತನಾಡಿದ್ದಾರೆ. ಶನಿವಾರ ಮಧ್ಯಾಹ್ನದ ವೇಳೆ ಮನೆಯ ಜಿಮ್ನಲ್ಲಿದ್ದ ಸಂದರ್ಭದಲ್ಲಿ ಸೌರವ್ ಗಂಗೂಲಿಗೆ ಹೃದಯದಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದೇ ಅವರಿಗೆ ಆ್ಯಂಜಿಯೋಪ್ಲಾಸ್ಟಿಯನ್ನು ಕೂಡ ನಡೆಸಲಾಯಿತು.
This News Article is a Copy of MYKHEL
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm