ಬ್ರೇಕಿಂಗ್ ನ್ಯೂಸ್
06-01-21 03:00 pm Source: MYKHEL Madhukara Shetty ಕ್ರೀಡೆ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(BCCI) ಮುಂದಿನ ಐಪಿಎಲ್ ಆಯೋಜನೆಗೆ ಸಿದ್ಧತೆ ಆರಂಭಿಸಿದೆ. ಮುಂಬೈ ಮಿರರ್ ಈ ಬಗ್ಗೆ ವರದಿಯೊಂದನ್ನು ಪ್ರಕಟಿಸಿದ್ದು ಐಪಿಎಲ್ ಆಡಳಿತ ಮಂಡಳಿ ಜನವರಿ 4ರಂದು ಮಂಗಳವಾರ ಸಭೆ ಸೇರಿದ್ದು 2021ರ ಐಪಿಎಲ್ಗೆ ಸಂಬಂಧಪಟ್ಟಂತೆ ಚರ್ಚೆ ನಡೆಸಿದೆ ಎನ್ನಲಾಗಿದೆ.
ಈ ವರದಿಯ ಪ್ರಕಾರ ಹರಾಜು ಪ್ರಕ್ರಿಯೆಗೂ ಮುನ್ನ ಬಿಸಿಸಿಐ ವಹಿವಾಟು ನಡೆಸಲು ಬಾಗಿಲು ತೆರೆದಿದ್ದು ಜನವರಿ 21ರ ಒಳಗೆ ಆಟಗಾರರನ್ನು ಬಿಡುಗಡೆ ಮಾಡುವಂತೆ ಕೇಳಿಕೊಂಡಿದೆ ಎನ್ನಲಾಗಿದೆ. ಫೆಬ್ರವರಿ 11 ರಂದು ಮಿನಿ ಹರಾಜು ನಡೆಸುವ ತಾತ್ಕಾಲಿಕ ದಿನಾಂಕವನ್ನು ನಿಗದಿಗೊಳಿಸಲಾಗಿದೆ ಎಂದು ಇದೇ ವರದಿ ಹೇಳುತ್ತಿದೆ.
ಪೂರ್ವ ನಿಗದಿಯ ಪ್ರಕಾರ ಈ ವರ್ಷದಲ್ಲಿ ಪೂರ್ಣ ಪ್ರಮಾಣದ ಹರಾಜು ಪ್ರಕ್ರಿಯೆ ನಡೆಯಬೇಕಾಗಿತ್ತು. ಆದರೆ ಕೊರೊನಾ ವೈರಸ್ನ ಕಾರಣದಿಂದಾಗಿ ಕಳೆದ ಆವೃತ್ತಿ ಆರು ತಿಂಗಳು ತಡವಾಗಿ ಆರಂಭವಾಗಿತ್ತು. ಹೀಗಾಗಿ ಪೂರ್ಣ ಪ್ರಮಾಣದ ಹರಾಜು ಪ್ರಕ್ರಿಯೆಯನ್ನು ಕೈ ಬಿಟ್ಟು ಮಿನಿ ಹರಾಜು ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ. ಐಪಿಎಲ್ ಹರಾಜು ಪ್ರಕ್ರಿಯೆಗೂ ಮುನ್ನ ದೇಶೀಯ ಟಿ20 ಕ್ರಿಕೆಟ್ ಟೂರ್ನಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯನ್ನು ಈ ಬಾರಿ ಆಯೋಜನೆ ಮಾಡಲಾಗುತ್ತಿದೆ. ಐಪಿಎಲ್ ಹರಾಜು ಪ್ರಕ್ರಿಯೆಯನ್ನು ದೃಷ್ಟಿಯಲ್ಲಿಟ್ಟುಕೊಂಡೆ ರಣಜಿ ಟ್ರೋಫಿಗೂ ಮುನ್ನ ಈ ಬಾರಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯನ್ನು ಆಯೋಜನೆ ಮಾಡಲಾಗಿದೆ. ಹೀಗಾಗಿ ಹರಾಜು ಪ್ರಕ್ರಿಯೆಯಲ್ಲಿ ಈ ದೇಶೀಯ ಕ್ರಿಕೆಟ್ ಟೂರ್ನಿ ಸಾಕಷ್ಟು ಪರಿಣಾಮ ಬೀರುವ ಸಾಧ್ಯತೆಯಿದೆ.
ಇನ್ನು ಮುಂದಿನ ಆವೃತ್ತಿಯ ಆಯೋಜನೆಗೆ ಭಾರತವೇ ಮೊದಲನೇ ಆಯ್ಕೆಯಾಗಿದೆ. ಆದರೆ ಕೊರೊನಾ ವೈರಸ್ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಾರದಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಮುಂದಿನ ಸವಾಲನ್ನು ಎದುರಿಸಲು ಸಜ್ಜಾಗಿದೆ. ಹಾಗಾಗಿ ಯುಎಇಯನ್ನು 14ನೇ ಆವೃತ್ತಿಯ ಐಪಿಎಲ್ ಆಯೋಜನೆಗೂ ಮೀಸಲು ಇಡಲಾಗಿದೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm