ಬ್ರೇಕಿಂಗ್ ನ್ಯೂಸ್
06-01-21 03:00 pm Source: MYKHEL Madhukara Shetty ಕ್ರೀಡೆ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(BCCI) ಮುಂದಿನ ಐಪಿಎಲ್ ಆಯೋಜನೆಗೆ ಸಿದ್ಧತೆ ಆರಂಭಿಸಿದೆ. ಮುಂಬೈ ಮಿರರ್ ಈ ಬಗ್ಗೆ ವರದಿಯೊಂದನ್ನು ಪ್ರಕಟಿಸಿದ್ದು ಐಪಿಎಲ್ ಆಡಳಿತ ಮಂಡಳಿ ಜನವರಿ 4ರಂದು ಮಂಗಳವಾರ ಸಭೆ ಸೇರಿದ್ದು 2021ರ ಐಪಿಎಲ್ಗೆ ಸಂಬಂಧಪಟ್ಟಂತೆ ಚರ್ಚೆ ನಡೆಸಿದೆ ಎನ್ನಲಾಗಿದೆ.
ಈ ವರದಿಯ ಪ್ರಕಾರ ಹರಾಜು ಪ್ರಕ್ರಿಯೆಗೂ ಮುನ್ನ ಬಿಸಿಸಿಐ ವಹಿವಾಟು ನಡೆಸಲು ಬಾಗಿಲು ತೆರೆದಿದ್ದು ಜನವರಿ 21ರ ಒಳಗೆ ಆಟಗಾರರನ್ನು ಬಿಡುಗಡೆ ಮಾಡುವಂತೆ ಕೇಳಿಕೊಂಡಿದೆ ಎನ್ನಲಾಗಿದೆ. ಫೆಬ್ರವರಿ 11 ರಂದು ಮಿನಿ ಹರಾಜು ನಡೆಸುವ ತಾತ್ಕಾಲಿಕ ದಿನಾಂಕವನ್ನು ನಿಗದಿಗೊಳಿಸಲಾಗಿದೆ ಎಂದು ಇದೇ ವರದಿ ಹೇಳುತ್ತಿದೆ.
ಪೂರ್ವ ನಿಗದಿಯ ಪ್ರಕಾರ ಈ ವರ್ಷದಲ್ಲಿ ಪೂರ್ಣ ಪ್ರಮಾಣದ ಹರಾಜು ಪ್ರಕ್ರಿಯೆ ನಡೆಯಬೇಕಾಗಿತ್ತು. ಆದರೆ ಕೊರೊನಾ ವೈರಸ್ನ ಕಾರಣದಿಂದಾಗಿ ಕಳೆದ ಆವೃತ್ತಿ ಆರು ತಿಂಗಳು ತಡವಾಗಿ ಆರಂಭವಾಗಿತ್ತು. ಹೀಗಾಗಿ ಪೂರ್ಣ ಪ್ರಮಾಣದ ಹರಾಜು ಪ್ರಕ್ರಿಯೆಯನ್ನು ಕೈ ಬಿಟ್ಟು ಮಿನಿ ಹರಾಜು ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ. ಐಪಿಎಲ್ ಹರಾಜು ಪ್ರಕ್ರಿಯೆಗೂ ಮುನ್ನ ದೇಶೀಯ ಟಿ20 ಕ್ರಿಕೆಟ್ ಟೂರ್ನಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯನ್ನು ಈ ಬಾರಿ ಆಯೋಜನೆ ಮಾಡಲಾಗುತ್ತಿದೆ. ಐಪಿಎಲ್ ಹರಾಜು ಪ್ರಕ್ರಿಯೆಯನ್ನು ದೃಷ್ಟಿಯಲ್ಲಿಟ್ಟುಕೊಂಡೆ ರಣಜಿ ಟ್ರೋಫಿಗೂ ಮುನ್ನ ಈ ಬಾರಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯನ್ನು ಆಯೋಜನೆ ಮಾಡಲಾಗಿದೆ. ಹೀಗಾಗಿ ಹರಾಜು ಪ್ರಕ್ರಿಯೆಯಲ್ಲಿ ಈ ದೇಶೀಯ ಕ್ರಿಕೆಟ್ ಟೂರ್ನಿ ಸಾಕಷ್ಟು ಪರಿಣಾಮ ಬೀರುವ ಸಾಧ್ಯತೆಯಿದೆ.
ಇನ್ನು ಮುಂದಿನ ಆವೃತ್ತಿಯ ಆಯೋಜನೆಗೆ ಭಾರತವೇ ಮೊದಲನೇ ಆಯ್ಕೆಯಾಗಿದೆ. ಆದರೆ ಕೊರೊನಾ ವೈರಸ್ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಾರದಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಮುಂದಿನ ಸವಾಲನ್ನು ಎದುರಿಸಲು ಸಜ್ಜಾಗಿದೆ. ಹಾಗಾಗಿ ಯುಎಇಯನ್ನು 14ನೇ ಆವೃತ್ತಿಯ ಐಪಿಎಲ್ ಆಯೋಜನೆಗೂ ಮೀಸಲು ಇಡಲಾಗಿದೆ.
This News Article is a Copy of MYKHEL
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm