ಬ್ರೇಕಿಂಗ್ ನ್ಯೂಸ್
08-01-21 03:27 pm Source: MYKHEL ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ವಿಚಾರವಾಗಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿದೆ. ಬ್ರಿಸ್ಬೇನ್ ಖ್ಯಾತ ಗಾಲೆ ಕ್ರೀಡಾಂಗಣದಲ್ಲಿ ನಾಲ್ಕನೇ ಟೆಸ್ಟ್ ನಡೆಸಿಯೇ ತೀರುವ ಇಂಗಿತ ಹೊಂದಿರುವ ಕ್ರಿಕೆಟ್ ಆಸ್ಟ್ರೇಲಿಯಾಗೆ ಮತ್ತೊಂದು ಕಂಟಕ ಉಂಟಾಗಿದೆ. ಸರ್ಕಾರ ಕ್ವೀನ್ಸ್ಲ್ಯಾಂಡ್ನಲ್ಲಿ ಕಠಿಣ ಲಾಕ್ಡೌನ್ ಘೋಷಿಸಿದ್ದು ಬ್ರಿಸ್ಬೇನ್ ಟೆಸ್ಟ್ ಪಂದ್ಯದ ಮೇಲೆ ಮತ್ತೊಂದು ಕರಿಛಾಯೆ ಮೂಡಿದಂತಾಗಿದೆ.
ಬ್ರಿಸ್ಬೇನ್ನಲ್ಲಿ ಕೊರೊನಾ ವೈರಸ್ ಹೊಸ ಪ್ರಕರಣಗಳು ಹೆಚ್ಚಾಗಿ ಕಂಡು ಬಂದಿದೆ. ಹೀಗಾಗಿ ಕ್ವೀನ್ಸ್ಲ್ಯಾಂಡ್ ರಾಜ್ಯದಲ್ಲಿ ಕನಿಷ್ಠ ಮೂರು ದಿನಗಳ ಕಾಲ ಕಠಿಣ ಲಾಕ್ಡೌನ್ ಘೋಷಣೆಯಾಗಿದೆ. ಇದಕ್ಕೂ ಮೊದಲೇ ಬ್ರಿಸ್ಬೇನ್ನಲ್ಲಿ ಕಠಿಣ ಕ್ವಾರಂಟೈನ್ ನಿಯಮಗಳು ಇರುವ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಬ್ರಿಸ್ಬೇನ್ಗೆ ತೆರಳಲು ಹಿಂದೇಟು ಹಾಕುತ್ತಿದೆ ಎಂದು ವರದಿಯಾಗಿತ್ತು.
ಜನವರಿ 15ರಿಂದ ಆರಂಭವಾಗಲಿರುವ ಸರಣಿಯ ಅಂತಿಮ ಹಾಗೂ ನಾಲ್ಕನೇ ಟೆಸ್ಟ್ ಪಂದ್ಯದ ಬಗ್ಗೆ ಕ್ರಿಕೆಟ್ ಆಸ್ಟ್ರೇಲಿಯಾ ಇನ್ನೂ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ. ಕ್ವೀನ್ಸ್ಲ್ಯಾಂಡ್ ಸರ್ಕಾರದ ಕಠಿಣ ಕ್ವಾರಂಟೈನ್ ಕಾರಣದಿಂದಾಗಿ ಗಾಲೆಯಲ್ಲಿ ಅಂತಿಮ ಪಂದ್ಯ ನಡೆಯದಿದ್ದಲ್ಲಿ ಮೂರನೇ ಪಂದ್ಯದ ಆತಿಥ್ಯವನ್ನು ವಹಿಸಿಕೊಂಡಿರುವ ಸಿಡ್ನಿ ಕ್ರಿಕೆಟ್ ಮೈದಾನದಲ್ಲೇ ಅಂತಿಮ ಪಂದ್ಯವೂ ನಡೆಯುವ ಸಾಧ್ಯತೆಯಿದೆ. ಬ್ರಿಸ್ಬೇನ್ನಲ್ಲಿ ಈಗ ನಿಗದಿಯಾಗಿರುವ ಲಾಕ್ಡೌನ್ ಅಂತ್ಯವಾದ ನಂತರ ಮುಂದಿನ ಮಂಗಳವಾರ ಎರಡು ತಂಡಗಳು ಕೂಡ ಬ್ರಿಸ್ಬೇನ್ಗೆ ತೆರಳಲು ದಿನಾಂಕ ನಿಗದಿಯಾಗಿದೆ. ಕ್ವಾರಂಟೈನಿ ಹೋಟೆಲ್ನಲ್ಲಿನ ಕ್ಲೀನರ್ ಓರ್ವ ಬ್ರಿಟನ್ನಲ್ಲಿ ಪತ್ತೆಯಾಗಿರುವ ರೂಪಾಂತರಿ ವೈರಸ್ಗೆ ತುತ್ತಾಗಿರುವುದು ಬೆಳಕಿಗೆ ಬಂದಿದ್ದು ಕ್ವೀನ್ಸ್ಲ್ಯಾಂಡ್ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲು ಕಾರಣವಾಗಿದೆ.
ಈ ಮಧ್ಯೆ ಬಲ್ಲ ಮಾಹಿತಿಯ ಪ್ರಕಾರ ಬಿಸಿಸಿಐ ಕ್ರಿಕೆಟ್ ಆಸ್ಟ್ರೇಲಿಯಾದ ಮುಖ್ಯಸ್ಥ ಅರ್ಲ್ ಎಡ್ಡಿಂಗ್ಸ್ಗೆ ಪತ್ರ ಬರೆದಿದ್ದು ಪ್ರವಾಸದ ವಿಧಾನಗಳು, ಕಠಿಣ ಕ್ವಾರಂಟೈನ್ ನಿಯಮಗಳ ಸಡಿಲಿಕೆಯ ಬಗ್ಗೆ ಬರೆಯಲಾಗಿದೆ ಎನ್ನಲಾಗಿದೆ. 'ಚರ್ಚೆಗಳು ಇನ್ನೂ ನಡೆಯುತ್ತಿವೆ ಆದರೆ ಇಂದು ಬಿಸಿಸಿಐ ತನ್ನ ಆಟಗಾರರಿಗೆ ಬ್ರಿಸ್ಬೇನ್ನಲ್ಲಿ ಪಂದ್ಯವನ್ನು ನಡೆಸಬೇಕಾದರೆ ಕಠಿಣ ಕ್ವಾರಂಟೈನ್ ಅನ್ನು ಸಡಿಲಿಸುವಂತೆ ಕೋರಿ ಔಪಚಾರಿಕವಾಗಿ ಪತ್ರವನ್ನು ಕಳುಹಿಸಿದೆ' ಎಂದು ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm