ಬ್ರೇಕಿಂಗ್ ನ್ಯೂಸ್
08-01-21 03:32 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಮೂರನೇ ಟೆಸ್ಟ್ ಪಂದ್ಯದಲ್ಲಿ ಲಯಕ್ಕೆ ಮರಳುವಲ್ಲಿ ಯಶಸ್ವಿಯಾಗಿದ್ದರೆ. ಟೆಸ್ಟ್ ಕ್ರಿಕೆಟ್ನ 27ನೇ ಶತಕ ಸಿಡಿಸುವ ಮೂಲಕ ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ಇನ್ನಿಂಗ್ಸ್ಗೆ ಆಸರೆಯಾದರು. ಈ ಮೂಲಕ ಆಸ್ಟ್ರೇಲಿಯಾ ಮುನ್ನೂರು ರನ್ಗಳ ಗಡಿಯನ್ನು ದಾಟಲು ಕಾರಣರಾದರು.
ಸ್ಟೀವ್ ಸ್ಮಿತ್ ಮೂರನೇ ಟೆಸ್ಟ್ನಲ್ಲಿ 131 ರನ್ಗಳ ಭರ್ಜರಿ ಪ್ರದರ್ಶನವನ್ನು ನೀಡಿದರು. ಈ ಮೂಲಕ ಮತ್ತಷ್ಟು ರನ್ ಆಸಿಸ್ ಪಡೆಯ ಖಾತೆಗೆ ಸೇರಿಸುವ ಉದ್ದೇಶವನ್ನಿಟ್ಟುಕೊಂಡಿದ್ದರು. ಆದರೆ ಟೀಮ್ ಇಂಡಿಯಾದ ಆಲ್ರೌಂಡರ್ ರವೀಂದ್ರ ಜಡೇಜಾ ಅವರ ಅದ್ಭುತವಾದ ಥ್ರೋ ಸ್ಮಿತ್ ವಿಕೆಟ್ ಪಡೆಯುವ ಮೂಲಕ ಆಸಿಸ್ ಇನ್ನಿಂಗ್ಸ್ನ ಅಂತ್ಯಕ್ಕೆ ಕಾರಣರಾದರು.
ಸ್ಟೀವ್ ಸ್ಮಿತ್ 130 ರನ್ ಗಳಿಸಿದ್ದ ವೇಳೆ ಎರಡು ರನ್ ಗಳಿಸುವ ಪ್ರಯತ್ನವನ್ನು ನಡೆಸಿದ್ದರು. ಮೊದಲ ರನ್ಅನ್ನು ಯಶಸ್ವಿಯಾಗಿ ಪೂರೈಸಿ ಎರಡನೇ ರನ್ಗೆ ಓಟಕ್ಕಿತ್ತರು. ಈ ವೇಳೆ ಚೆಂಡು ಫೀಲ್ಡರ್ ರವೀಂದ್ರ ಜಡೇಜಾ ಕೈಗೆ ತಲುಪಿತ್ತು. ಜಡೇಜಾ ಚೆಂಡನ್ನು ನೇರವಾಗಿ ಗುರಿಯಿಟ್ಟು ಸ್ಟ್ರೈಕರ್ ತುದಿಯ ವಿಕೆಟ್ಗೆ ಎಸೆದರು. ಅದು ವಿಕೆಟ್ ಹಾರಿಸುವ ಮೂಲಕ ಸ್ಮಿತ್ ಅವರ ಅದ್ಭುತ ಇನ್ನಿಂಗ್ಸ್ ಅಂತ್ಯಗೊಳಿಸಿತು. ಅಲ್ಲಿಗೆ ಸ್ಮಿತ್ 131 ರನ್ ಗಳಿಸಿದ್ದರು. ಜಡೇಜಾ ಅವರ ಈ ಫೀಲ್ಡಿಂಗ್ಗೆ ಅಭಿಮಾನಿಗಳು ಮನಸೋತಿದ್ದು ಟ್ವಿಟ್ಟರ್ನಲ್ಲಿ ಸಾಕಷ್ಟು ಮೆಚ್ಚುಗೆಗಳು ವ್ಯಕ್ತವಾಗಿದೆ.
ರವೀಂದ್ರ ಜಡೇಜಾ ಸ್ಟೀವ್ ಸ್ಮಿತ್ ಅವರನ್ನು ರನೌಟ್ ಮಾಡುವ ಮುನ್ನ ಬೌಲಿಂಗ್ನಲ್ಲೂ ಭಾರತಕ್ಕೆ ಉತ್ತಮ ಯಶಸ್ಸನ್ನು ನೀಡಿದರು. ಟೀಮ್ ಇಂಡಿಯಾ ಪರವಾಗಿ ಜಡೇಜಾ ಆಸ್ಟ್ರೇಲಿಯಾದ 4 ವಿಕೆಟ್ ಕಿತ್ತಿದ್ದಾರೆ. ಮೊದಲ ದಿನದಾಟದಲ್ಲಿ ಬೌಲಿಂಗ್ ಮಾಡಲು ಜಡೇಜಾ ಹೆಚ್ಚಿನ ಅವಕಾಶವನ್ನು ಪಡೆದಿರಲಿಲ್ಲ. ಎರಡನೇ ದಿನದಲ್ಲಿ 91 ರನ್ ಗಳಿಸಿದ್ದ ಲಾಬುಶೇನ್ ಅವರನ್ನು 91 ರನ್ಗೆ ಔಟ್ ಮಾಡಿ ಮೊದಲ ಯಶಸ್ಸು ನೀಡಿದರು. ಅದಾದ ಬಳಿಕ ಜಡೇಜಾ ಮ್ಯಾಥ್ಯೂ ವೇಡ್ ವಿಕೆಟ್ ಪಡೆದು ಆಸ್ಟ್ರೇಲಿಯಾಗೆ ಮತ್ತೊಂದು ಆಘಾತವನ್ನು ನೀಡಿದ್ದರು. ಬಳಿಕ ಪ್ಯಾಟ್ ಕಮ್ಮಿನ್ಸ್ ಹಾಗೂ ನಥನ್ ಲಿಯಾನ್ ಕೂಡ ರವೀಂದ್ರ ಜಡೇಜಾಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್ ಸೇರಿದ್ದರು.
This News Article is a Copy of MYKHEL
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm